ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹಾವೇರಿ ಬಳಿಯಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದು, ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ.
ಘಟನೆಯಲ್ಲಿ ಮಾನಸ ಎಂಬ ಯುವತಿಯೂ ಸಹ ಮೃತಪಟ್ಟಿದ್ದು, ಈಗ ಐಎಎಸ್ ಪರೀಕ್ಷೆಗೆ ಸಿದ್ದತೆ ನಡೆಸಿದ್ದರು ಎಂದು ತಿಳಿದುಬಂದಿದೆ.

ಐಎಎಸ್ ಅಧಿಕಾರಿಯಾಗಬೇಕು ಎಂಬ ಕನಸು ಕಂಡಿದ್ದ ಈಕೆ ಅದಕ್ಕಾಗಿ ಸಿದ್ದತೆ ನಡೆಸಿದ್ದರು. ಬೆಂಗಳೂರಿನಲ್ಲಿ ಪರೀಕ್ಷೆಗಾಗಿ ತರಬೇತಿ ಪಡೆಯುತ್ತಿದ್ದ ಈಕೆಯ ಜೀವನದಲ್ಲಿ ವಿಧಿ ಘೋರ ಆಟವಾಡಿದ್ದು ದುರಂತ.

Also read: ನವದೆಹಲಿ | ಭಾರೀ ಮಳೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದ ಮೇಲ್ಚಾವಣಿ ಕುಸಿತ | ಓರ್ವ ಸಾವು
ಇನ್ನು, ಎಮ್ಮೆಹಟ್ಟಿ ಗ್ರಾಮದಲ್ಲಿ ನೀರವ ಮೌನ ಮನೆ ಮಾಡಿದೆ. ಎಮ್ಮೆಹಟ್ಟಿ ಗ್ರಾಮದ ಶಾಲಾ ಆವರಣದಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದ್ದು, ಹಿಂದೂ ರುದ್ರಭೂಮಿಯಲ್ಲಿ ಅಂತ್ಯಸAಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸಂಬAಧಿಕರನ್ನು ನೆನೆದು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ.

ಇಬ್ಬರು ಪುರುಷರು, ಇಬ್ಬರು ಮಕ್ಕಳು ಹಾಗೂ 9 ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ. ಅತಿವೇಗ ಘಟನೆಗೆ ಕಾರಣವಾಗಿರುವ ಸಾಧ್ಯತೆ ಇದೆ. ಈ ಸಂಬAಧ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post