Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶಾಂತಿಯುತ: ಹಿಂದೂ ನಾವೆಲ್ಲ ಒಂದು-ಕೇಸರಿ ಅಬ್ಬರ

*ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಗಣಪತಿ *ಅಪಾರ ಭಕ್ತರ ದಂಡು *ಬಗೆ ಬಗೆಯ ಕಲಾ ತಂಡಗಳ ಝೆಂಕಾರ *ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

September 10, 2019
in ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಭದ್ರಾವತಿ: ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರಸೇನಾ ಹಾಗೂ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರುವ 47 ನೇ ವರ್ಷದ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಮಂಗಳವಾರ ಬೆಳಿಗ್ಗೆ ಶಾಸಕ ಬಿ.ಕೆ. ಸಂಗಮೇಶ್ವರ್, ತಹಸೀಲ್ದಾರ್ ಸೋಮಶೇಖರ್ ವಿಶೇಷ ಪೂಜಾ ವಿಧಿ ವಿಧಾನಗಳಿಂದ ಪೂಜೆ ಸಲ್ಲಿಸಿ ಚಾಲನೆ ನೀಡಿದರು.


ಪೂಜೆ ಸಲ್ಲಿಸಿ ಚಾಲನೆ ನೀಡಿದ ನಂತರ ಭಕ್ತರ ಘೋಷಣೆಗಳೊಂದಿಗೆ ಶ್ರೀ ವಿನಾಯಕ ಮೂರ್ತಿಯ ವಿಸರ್ಜನೆ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆ ನೆರವೇರಿತು.

ಶ್ರೀ ಮೂರ್ತಿಯನ್ನು ಹೊಸಮನೆ ಶಿವಾಜಿ ವೃತ್ತದಿಂದ ಮೆರವಣಿಗೆ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ನೆರೆದಿದ್ದ ಜನಸ್ತೋಮದ ನಡುವೆ ಸಾಗಿದರು.

ಹೆಚ್ಚಿನ ಪೊಲೀಸ್ ಬಂದೋಬಸ್ತಿನ ನಡುವೆ ಪ್ರಮುಖ ರಸ್ತೆಗಳಲ್ಲಿ ಸಾಗಿದ ಉತ್ಸವ ಮೂರ್ತಿ ಗಣಪತಿಯನ್ನು ರಸ್ತೆಯುದ್ದಕ್ಕೂ ಭಕ್ತಾದಿಗಳು ಪೂಜೆ ಸಲ್ಲಿಸಿದರು.

ಮಂದಗತಿಯಲ್ಲಿ ಸಾಗುತ್ತ ಸಂಜೆ 4 ಗಂಟೆಗೆ ರಂಗಪ್ಪ ವೃತ್ತ ತಲುಪಿದಾಗ ಯುವಕರ ಪಡೆ ಜೈ ಶ್ರೀರಾಮ್, ಹಿಂದೂ ನಾವೆಲ್ಲ ಒಂದು ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ನಡುವೆ ಬೈಕ್ ರ್ಯಾಲಿ ನಿಷೇಧಿಸಿದ್ದರು ಸಹ ಕೆಲವು ಯುವಕರು ಬೈಕ್‍ಗಳ ಕರ್ಕಶ ಶಬ್ದ ಮಾಡುತ್ತಾ ಕೇಸರಿ ಧ್ವಜಗಳನ್ನು ಹಿಡಿದು ರಸ್ತೆಗಳಲ್ಲಿ ಸಾಗಿದರು. ರಸ್ತೆ ಉದ್ದಕ್ಕೂ ಯುವಕ-ಯುವತಿಯರು ಹುಚ್ಚೆದ್ದು ಕುಣಿಯುತ್ತಾ ಸಂತಸ ವ್ಯಕ್ತಪಡಿಸಿದರು.

ಕೆಲವು ಸಂಘ ಸಂಸ್ಥೆಗಳ ಮುಖಂಡರು ಬೃಹತ್ ಹೂವಿನ ಹಾರಗಳನ್ನು ವಿನಾಯಕನಿಗೆ ಸಮರ್ಪಿಸಿ ಭಕ್ತಿಯ ಪರಾಕಾಷ್ಟೆ ಮೆರೆದರು. ನಗರದೆಲ್ಲೆಡೆ ಕೇಸರಿ ಮಯವಾಗಿ ಗೋಚರಿಸುತ್ತಿತ್ತು.

ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡು ನಗರ ಸಂಚಾರ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿತ್ತು. ಎಂದಿನಂತೆ ಮಂಗಳವಾರ ನಗರದಲ್ಲಿ ವ್ಯಾಪಾರ ವಹಿವಾಟುಗಳು ಸ್ಥಗಿತಗೊಂಡಿದ್ದ ಕಾರಣ ಅಘೋಷಿತ ಬಂದ್ ನಂತೆ ಕಾಣುತ್ತಿತ್ತು.

ವಿನಾಯಕ ವಿಸರ್ಜನೆ ಸಂದರ್ಭದಲ್ಲಿ ನಗರದ ನಾನಾ ಭಾಗಗಳಲ್ಲಿ ಉದ್ದಕ್ಕೂ ಚಿತ್ರನ್ನ, ಮೊಸರನ್ನ, ಕೋಸಂಬರಿ, ಕುಡಿಯಲು ನೀರು ವ್ಯವಸ್ಥೆ ಕಲ್ಪಿಸಲಾಗಿತ್ತು. ಮೆರವಣಿಗೆಯು ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಡಾ.ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಹುತ್ತಾ ಕಾಲೋನಿಯಿಂದ ಪುನಃ ಹಿಂದಿರುಗಿ ಅದೇ ಮಾರ್ಗವಾಗಿ ಸಾಗಿದೆ. ರಾತ್ರಿ ನಗರಸಭೆ ಮುಂಭಾಗದ ಭದ್ರಾ ನದಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀ ವಿನಾಯಕ ಮೂರ್ತಿಯನ್ನು ವಿಸರ್ಜಿಸಲಾಗುತ್ತದೆ.


ಸಮಿತಿ ಅಧ್ಯಕ್ಷ ವಿ.ಕದಿರೇಶ್ ಹಾಗು ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಉಪ ಮಹಾಪೌರ ಚನ್ನಬಸಪ್ಪ, ವಿವಿಧ ಸಂಘ ಸಂಸ್ಥೆಗಳ ಮುಖಂಡರಾದ ಜಿ.ಆನಂದಕುಮಾರ್, ಪ್ರವೀಣ್ ಪಟೇಲ್, ಬಿ.ಎಸ್.ಗಣೇಶ್, ರಾಮಣ್ಣ, ಧರ್ಮಪ್ರಸಾದ್, ಎನ್. ವಿಶ್ವನಾಥರಾವ್, ಕೆ. ಮಂಜುನಾಥ್, ಸುದೀಪ್, ಹೇಮಾವತಿ, ಫೋಕಸ್ ಮಂಜುನಾಥ್, ಐತಾಳ್, ಕೂಡ್ಲಿಗೆರೆ ಹಾಲೇಶ್ ಸೇರಿದಂತೆ ಹಿಂದೂ ಸಂಘಟನೆಗಳಾದ ಕೇಸರಿಪಡೆ, ಹಿಂದೂಪಡೆ, ಶ್ರೀರಾಮಸೇನೆ, ಭಜರಂಗದಳ, ಎಬಿವಿಪಿ ಮುಂತಾದ ಹಿಂದೂಪರ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.


ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜ್ ಸೇರಿದಂತೆ ಒಟ್ಟು ಇಬ್ಬರು ವರಿಷ್ಟಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಠಕ್ಕಣ್ಣನವರ್, 8 ಡಿವೈಎಸ್‍ಪಿಗಳು, 17 ಸಿಪಿಐ, 23 ಸಬ್‍ಇನ್ಸ್‍ಪೆಕ್ಟರ್‍ಗಳು, 79 ಎಎಸ್‍ಐ, 796 ಪೇದೆ ಮತ್ತು ಮುಖ್ಯಪೇದೆಗಳು, 350 ಗೃಹ ರಕ್ಷಕದಳ, ಕೆಎಸ್‍ಆರ್‍ಪಿ 400, ಡಿಎಆರ್ 8 ತುಕಡಿಗಳು, ಆರ್‍ಎಎಫ್‍ನ 50 ಜನರ ತಂಡ, ಕ್ಯಾಮರಮನ್ ಒಟ್ಟು 75 ಮಂದಿ, ಎಎನ್‍ಎಸ್‍ನ 30 ಜನರ ತಂಡಗಳೊಂದಿಗೆ ಒಟ್ಟು 1600 ಮಂದಿ ರಕ್ಷಣಾ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದರು.

ಮೆರವಣಿಗೆಯ ಇನ್ನಷ್ಟು ಚಿತ್ರಗಳನ್ನು ನೋಡಿ

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiGanapathi processionHindu MahasabhaJai SriRamKannada NewsMalnad NewsMP B Y Ragahvendraಭದ್ರಾವತಿಶ್ರೀರಾಮ್ಸಂಸದ ಬಿ.ವೈ. ರಾಘವೇಂದ್ರಹಿಂದೂ ನಾವೆಲ್ಲ ಒಂದುಹಿಂದೂ ಮಹಾಸಭಾ ಗಣಪತಿ ಮೆರವಣಿಗೆಹಿಂದೂ ರಾಷ್ಟ್ರಸೇನಾ
Previous Post

ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ವಿಶೇಷ ಆಕರ್ಷಣೆಯೇನು ಗೊತ್ತಾ? ನೋಡಿದರೆ ಎದೆಯುಬ್ಬುತ್ತದೆ!

Next Post

ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ: ಭಗವಂತನ ಧ್ಯಾನದ ಬಗೆಯನ್ನು ಹೇಗೆ ಕಲಿಯುವುದು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ: ಭಗವಂತನ ಧ್ಯಾನದ ಬಗೆಯನ್ನು ಹೇಗೆ ಕಲಿಯುವುದು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!