No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಹೊಸಮನೆ ಮುಖ್ಯರಸ್ತೆ: ಮಾಸ್ಟರ್ ಪ್ಲಾನ್ 60 ಅಡಿಯಲ್ಲಿ 10 ಅಡಿ ರಸ್ತೆಯೇ ಮಂಗಮಾಯ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2019
in ಭದ್ರಾವತಿ
0
ಭದ್ರಾವತಿ ಹೊಸಮನೆ ಮುಖ್ಯರಸ್ತೆ: ಮಾಸ್ಟರ್ ಪ್ಲಾನ್ 60 ಅಡಿಯಲ್ಲಿ 10 ಅಡಿ ರಸ್ತೆಯೇ ಮಂಗಮಾಯ!
Share on FacebookShare on TwitterShare on WhatsApp

ಭದ್ರಾವತಿ: ಜನರ ಬಹುಬೇಡಿಕೆಯಾಗಿದ್ದ ಹೊಸಮನೆ ಮುಖ್ಯರಸ್ತೆಯು 60 ಅಡಿಗಳ ಮಾಸ್ಟರ್ ಪ್ಲಾನಿಗೆ ಒಳಪಟ್ಟಿದ್ದರು ನಗರಸಭೆ ಆಡಳಿತವು 50 ಅಡಿಗಳಿಗೆ ಸೀಮಿತಗೊಳಿಸಿ ರಸ್ತೆ ಅಗಲೀಕರಣ ಕಾಮಗಾರಿಗೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ.

ಬಹಳ ವರ್ಷಗಳಿಂದ ರಂಗಪ್ಪವೃತ್ತದಿಂದ ಹೊಸಮನೆಯ ಶಿವಾಜಿ ವೃತ್ತದವರಗಿನ ಮುಖ್ಯರಸ್ತೆಯು ಜನರಿಗೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಈ ರಸ್ತೆ ಮಾರ್ಗದಲ್ಲಿ ಪ್ರತಿ ಭಾನುವಾರ ನಡೆಯುವ ಬಹುದೊಡ್ಡ ಸಂತೆ ದಿನದಂದು ಜನರು ನಡೆದಾಡುವುದು ಸಹ ದುಸ್ತರವಾಗಿತ್ತು. ಇಕ್ಕೆಲೆಗಳ ರಸ್ತೆ ಬದಿಯಲ್ಲಿ ಗೂಡಂಗಡಿಗಳು, ತಳ್ಳುವ ಗಾಡಿಗಳು, ಫುಟ್‌ಪಾತ್ ವ್ಯಾಪಾರಿಗಳಿಂದ ಕಿರಿ ಕಿರಿ ಹೆಚ್ಚಾಗಿತ್ತು. ಕಟ್ಟಡ ಮಾಲೀಕರು ಮನಬಂದಂತೆ ರಸ್ತೆಯನ್ನು ಆವರಿಸಿಕೊಂಡು ಬೃಹತ್ ಕಟ್ಟಡಗಳನ್ನು ಕಟ್ಟಿಕೊಂಡಿದ್ದರಿಂದ ತೊಂದರೆ ಉಂಟಾಗಿತ್ತು.

ಇವೆಲ್ಲವನ್ನು ಮನಗಂಡ ಶಾಸಕ ಬಿ.ಕೆ.ಸಂಗಮೇಶ್ವರ್ ಕಾಂಕ್ರೀಟ್ ರಸ್ತೆ ಅಗಲೀಕರಣಕ್ಕೆ ರಾಜ್ಯ ಸರಕಾರದಿಂದ 2.50 ಕೋಟಿ ರೂ ಅನುದಾನ ಮಂಜೂರು ಮಾಡಿಸಿದರು. ನಗರಸಭೆ ಆಡಳಿತವು ಸಹ ಮಾಸಿಕ ಅಧಿವೇಶನದಲ್ಲಿ ರಸ್ತೆ ಅಗಲೀಕರಣಕ್ಕೆ ಅಸ್ತು ನೀಡಿತ್ತು. ರಸ್ತೆ ಅಗಲೀಕರಣ ಮಾಡಲು ಪಿಡಬ್ಲ್ಯೂಡಿ ಇಲಾಖೆಯ ಮೂಲಕ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ಸರಕಾರ ಆದೇಶಿಸಿ ಮೇಲ್ವಿಚಾರಣೆಯನ್ನು ನಗರಸಭಾ ಆಡಳಿತಕ್ಕೆ ವಹಿಸಿದೆ.

ರಸ್ತೆ ಅಗಲೀಕರಣದ ವಿಷಯವು ಕಾಡ್ಗಿಚ್ಚಿನಂತೆ ಹರಡಿ ಹಲವು ಉಹಾಪೋಹಗಳಿಗೆ ತುತ್ತಾಗಿತ್ತು. 40 ಅಡಿಗಳಿಗೆ ರಸ್ತೆ ಅಗಲೀಕರಣ ಮಾಡಲಾಗುವುದು ಎಂದು ಆರಂಭದಲ್ಲಿ ಗಾಳಿ ಸುದ್ದಿ ಹಬ್ಬಿತ್ತು. ಕೇವಲ 40 ಅಡಿಗಳಿಗೆ ಕಾಂಕ್ರೀಟ್ ರಸ್ತೆ ಸೀಮಿತಗೊಳಿಸಿ ರಸ್ತೆ ಅಗಲೀಕರಣ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ರಸ್ತೆ ಅಗಲೀಕರಣವು ಆಗುವುದಿಲ್ಲ. ಕೇವಲ ರಸ್ತೆ ಬದಿಯಲ್ಲಿ ಬೆಳೆದು ನಿಂತಿರುವ ಬೃಹತ್ ಮರಗಳ ಮಾರಣ ಹೋಮ ಮಾತ್ರ ನಡೆದು ಸರಕಾರ ನೀಡಿದ ಅನುದಾನ ಪೋಲಾಗುವುದೆಂದು ಸಾರ್ವಜನಿಕರು ಶಾಸಕರ ಮೇಲೆ ಒತ್ತಡ ಹೇರಿದ್ದರು.


ಇವೆಲ್ಲವನ್ನು ಮನಗಂಡ ಶಾಸಕರು ಹಾಗು ಲ್ಯಾಂಡ್ ಆರ್ಮಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್ ನೇತೃತ್ವದಲ್ಲಿ ಕಟ್ಟಡ ಮಾಲೀಕರ ಮತ್ತು ವ್ಯಾಪಾರಸ್ಥರ ಹಾಗು ಸಾರ್ವಜನಿಕರ ಸಭೆ ನಡೆಸಿ ಚರ್ಚಿಸಿ ಅಧಿಕಾರಿಗಳ ಸಲಹೆ ಸೂಚನೆಗಳನ್ನು ಪಡೆದು ವ್ಯಾಪಾರಸ್ಥರಿಗೆ ಮತ್ತು ಕಟ್ಟಡ ಮಾಲೀಕರಿಗೆ ತೊಂದರೆಯಾಗದಂತೆ 50 ಅಡಿಗಳಿಗೆ ರಸ್ತೆ ಅಗಲೀಕರಣ ಮಾಡಲು ತೀರ್ಮಾನಿಸಿದರು.

ಅದರಂತೆ ಪಿಡಬ್ಲ್ಯೂಡಿ ಇಲಾಖೆಯು 2.50 ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿದೆ. 50 ಅಡಿಗಳ ರಸ್ತೆ ಬದಲಿಗೆ ಕೇವಲ 40 ಅಡಿಗಳಿಗೆ ಸೀಮಿತಗೊಳಿಸಿ ಕಾಮಗಾರಿ ಆರಂಭಿಸಲಾಗಿದೆ. ರಸ್ತೆ ಬದಿಯ ಬೃಹತ್ ಮರಗಳನ್ನು ಕಡಿತಲೆ ಮಾಡಿ ಮಾರಣ ಹೋಮ ಮಾಡಲಾಗಿದೆ. ಬಸ್ ತಂಗುದಾಣಗಳನ್ನು ತೆರವುಗೊಳಿಸಲಾಗಿದೆ. ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ಆದರೆ ರಸ್ತೆಯನ್ನು 40 ಅಡಿಗೆ ಮಾಡಲಾಗುವುದೆಂದು ಅಧಿಕಾರಿಗಳು ಹೇಳುತ್ತಿರುವಾಗಲೆ ಕಟ್ಟಡ ಮಾಲೀಕರು ಮತ್ತು ವ್ಯಾಪಾರಸ್ಥರು ಅಧಿಕಾರಿಗಳ ವಿರುದ್ದ ಬೀದಿಗಿಳಿದಿದ್ದಾರೆ. ಸಂತೆ ಮುಂಭಾಗದಲ್ಲಿರುವ ಬೃಹತ್ ಕಟ್ಟಡ ಫೇಸ್ ಕಂಪ್ಯೂಟರ್ ಮಾಲೀಕರಿಗೆ ಮತ್ತು ಶಾಸಕರ ಅನುಯಾಯಿಗಳಿಗೆ ಅನುಕೂಲ ಕಲ್ಪಿಸಲು ಈ ಅನ್ಯಾಯವೆಸಗಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸುತ್ತಿದ್ದಾರೆ.

ರಸ್ತೆ ಅಗಲೀಕರಣವು ತಾರತಮ್ಯದಿಂದ ಕೂಡದೆ ರಾಜಕೀಯ ಮುಕ್ತ ಕಾಮಗಾರಿ ಮಾಡಬೇಕೆಂದು ವ್ಯಾಪಾರಸ್ಥರು ಹೇಳಿದರೆ, ಕಟ್ಟಡ ಮಾಲೀಕರು ರಸ್ತೆ ಮಧ್ಯೆ ಭಾಗದಿಂದ ನಿಗದಿ ಪಡಿಸಿದ ಅಳತೆಗೆ ತಾರತಮ್ಯ ತೋರದೆ ಇಕ್ಕೆಲಗಳಲ್ಲು ಒಂದೇ ಮಾದರಿ ಅಗಲೀಕರಣ ಮಾಡಬೇಕೆಂದು ಹೇಳುತ್ತಿದ್ದರೆ, ಮತ್ತೆ ಕೆಲವರು ಮನಬಂದಂತೆ ಅಗಲೀಕರಣ ಮಾಡದೆ ರಸ್ತೆ ಎರಡು ಬದಿಯ ಚರಂಡಿಗಳ ಮಧ್ಯಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಒಟ್ಟಾರೆ ರಂಗಪ್ಪವೃತ್ತದಿಂದ ಶಿವಾಜಿವೃತ್ತದ ವರಗಿನ ನಿವಾಸಿಗಳಿಗೆ ಹಾಗು ಕಟ್ಟಡ ಮಾಲೀಕರಿಗೆ ರಸ್ತೆ ಅಗಲೀಕರಣದಿಂದ ನುಂಗಲಾರದ ತುತ್ತಾಗಿದೆ.

ಶಾಸಕ ಸಂಗಮೇಶ್ವರ್ ಸ್ಪಷ್ಟೀಕರಣ
ಹೊಸಮನೆ ಮುಖ್ಯರಸ್ತೆಯ ಅಗಲೀಕರಣ ರಾಜಕೀಯ ಮುಕ್ತ ಹಾಗು ಸಾರ್ವಜನಿಕರ ಹಿತಾಸಕ್ತಿಗಾಗಿ ಕೈಗೆತ್ತಿಕೊಂಡಿರುವ 2.50 ಕೋಟಿ ರೂ ವೆಚ್ಚದ ಕಾಂಕ್ರೀಟ್ ಕಾಮಗಾರಿಯಾಗಿದೆ. ನಮ್ಮ ಅನುಯಾಯಿಗಳಿಗೆ ಅಥವಾ ಬೇಕಾದ ವ್ಯಕ್ತಿಗಳಿಗೆ ಅನುಕೂಲ ಕಲ್ಪಿಸುವ ಅಥವಾ ಅಂತಹ ಕಟ್ಟಡಗಳನ್ನು ಉಳಿಸುವ ಕ್ಷುಲ್ಲಕ ರಾಜಕಾರಣ ಎಂದಿಗೂ ಮಾಡುವುದಿಲ್ಲ. ಜನರ ಅನುಕೂಲಕ್ಕಾಗಿ ಹೆಚ್ಚು ಹಾನಿಯಾಗದಂತೆ 60 ಅಡಿಗಳ ಬದಲಿಗೆ 50 ಅಡಿಗಳಿಗೆ ಸೀಮಿತಗೊಳಿಸಿ ರಸ್ತೆ ಅಗಲೀಕರಣ ಮಾಡಲಾಗುತ್ತದೆ. ಸಾರ್ವಜನಿಕರು ಯಾವುದೇ ಅಪ ಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಶಾಸಕರು ಹಾಗು ಲ್ಯಾಂಡ್ ಆರ್ಮಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್ ಸ್ಪಷ್ಟೀಕರಿಸಿದರು.

ರಸ್ತೆ ಅಗಲೀಕರಣದಲ್ಲಿ ರಾಜಕೀಯ ಸಲ್ಲದು: ಮಾಜಿ ಶಾಸಕ ಅಪ್ಪಾಜಿ
ಹೊಸಮನೆ ಮುಖ್ಯರಸ್ತೆ ಅಗಲೀಕರಣ ವಿಚಾರಸದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಾರತಮ್ಯ ತೋರದೆ, ರಾಜಕೀಯ ಮಾಡದೆ ಸರ್ವರನ್ನು ಒಂದಾಗಿ ಕಾಣಬೇಕು. ಯಾವುದೋ ಇಚ್ಚಾಶಕ್ತಿಗೆ ರಸ್ತೆಯ ನಕ್ಷೆಯನ್ನೇ ಅದಲು ಬದಲು ಮಾಡಬಾರದು. ರಸ್ತೆ ಮಧ್ಯ ಭಾಗದಿಂದ 2 ಕಡೆ ತಾರತಮ್ಯ ತೋರದೆ, ರಾಜಕೀಯ ಬೆರಸದೆ ಸಮವಾಗಿ ರಸ್ತೆ ಅಗಲೀಕರಣ ಮಾಡಬೇಕು. ಒಂದುಕಡೆ ರಸ್ತೆ ಮಧ್ಯ ಭಾಗದಿಂದ ಮತ್ತೊಂದು ಕಡೆ ಚರಂಡಿಯಿಂದ ಚರಂಡಿಗೆ ಅಳತೆ ಎಂಬ ಮಾನಗೇಡಿತನ ಮಾಡಬಾರದು ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಅಧಿಕಾರಿಗಳ ಮತ್ತು ವ್ಯಾಪಾರಸ್ಥರ ಜೊತೆ ಚರ್ಚಿಸಿ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಎಚ್ಚರಿಸಿದರು.

ಒತ್ತಡಗಳಿಗೆ ಮಣಿದು ಕರ್ತವ್ಯ ನಿರ್ವಹಿಸುತ್ತಿಲ್ಲ: ಪೌರಾಯುಕ್ತ ಮನೋಹರ್
ರಂಗಪ್ಪವೃತ್ತದಿಂದ ಶಿವಾಜಿ ವೃತ್ತದ ವರಗಿನ ಹೊಸಮನೆ ಮುಖ್ಯರಸ್ತೆಯ ಕಾಂಕ್ರೀಟ್ ರಸ್ತೆ ಕಾಮಗಾರಿಯು 2.50 ಕೋಟಿ ರೂ ವೆಚ್ಚದಲ್ಲಿ ಪಿಡಬ್ಕ್ಯೂಡಿ ಇಲಾಖೆಯಿಂದ ಕೈಗೆತ್ತಿಕೊಳ್ಳಲಾಗಿದೆ. ಈ ರಸ್ತೆಯ ಮಾಸ್ಟರ್ ಪ್ಲಾನ್ 60 ಅಡಿಗಳಿಗೆ ಸೀಮಿತವಾಗಿದೆ.

ಶಾಸಕರು ವ್ಯಾಪಾರಸ್ಥರ ಮತ್ತು ಕಟ್ಟಡ ಮಾಲೀಕರ ಹಾಗೂ ಅಧಿಕಾರಿಗಳ ಸಭೆ ನಡೆಸಿ 50 ಅಡಿಗಳ ರಸ್ತೆ ಅಗಲೀಕರಣಕ್ಕೆ ತೀರ್ಮಾನಿಸಿದ್ದಾರೆ. ಪ್ರಸ್ತುತವೀಗ 40 ಅಡಿಗಳ ಕಾಂಕ್ರೀಟ್ ರಸ್ತೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ 2 ಬದಿಗಳಲ್ಲಿ ತಲಾ 10 ಅಡಿಗಳಂತೆ ಒಟ್ಟು 20 ಅಡಿ ಜಾಗದಲ್ಲಿ ಫುಟ್‌ಪಾತ್ ಮತ್ತು ಚರಂಡಿ ನಿರ್ಮಿಸಲಾಗುತ್ತದೆ. ಸರಕಾರವೀಗ 2.50 ಕೋಟಿ ರೂಗಳನ್ನು ಬಿಡುಗಡೆ ಮಾಡಿದೆ. ಆ ಹಣದಲ್ಲಿ 40 ಅಡಿಗಳ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುವುದು.

ರಸ್ತೆ ಕಾಮಗಾರಿ ಮುಗಿದ ನಂತರ ಸರಕಾರದಿಂದ ಅಂದಾಜು 2 ಕೋಟಿ ರೂ ಅನುದಾನ ಪಡೆದು 20 ಅಡಿಗಳ ಫುಟ್‌ಪಾತ್ ಮತ್ತು ಚರಂಡಿ ನಿರ್ಮಾಣ ಕೈಗೊಳ್ಳಲಾಗುವುದು. ಸಂತೆ ಮೈದಾನ ಮುಂಭಾಗದ ಫೇಸ್ ಕಂಪ್ಯೂಟರ್ ಕಟ್ಟಡ ಉಳಿಸಲು ಯಾವುದೇ ತಾರತಮ್ಯ ಮಾಡಿಲ್ಲ. ರಸ್ತೆ ಮಧ್ಯಭಾಗದಿಂದ 20 ಅಡಿಗಳಿಗೆ ಟೇಪು ಹಿಡಿದು ಅಳತೆ ಮಾಡಿದಾಗ ಕೇವಲ 3 ಅಡಿಗಳಿಗೆ ಬೃಹತ್ ಕಟ್ಟಡ ಒಡೆಯಬೇಕಾಗಿದೆ. ಅದರಿಂದ ಏನೂ ಪ್ರಯೋಜನವಾಗುವುದಿಲ್ಲ. ಚರಂಡಿ ಮತ್ತು ಫುಟ್‌ಪಾತ್ ಮಾಡುವಾಗ 3 ಅಡಿಗಳನ್ನು ಸೇರಿಸಿ ನಿರ್ದಿಷ್ಟ ಪಡಿಸಿದ ಅಳತೆಗೆ ಕಟ್ಟಡವನ್ನು ತೆರವುಗೊಳಿಸಲಾಗುವುದು. ಸಾರ್ವಜನಿಕರು ಹಾಗೂ ಕಟ್ಟಡ ಮಾಲೀಕರು ಅಪಾರ್ಥ ಮಾಡಿಕೊಳ್ಳಬಾರದೆಂದು ತಿಳಿಸಿದ ಪೌರಾಯುಕ್ತ ಮನೋಹರ್ ರಸ್ತೆ ಅಗಲೀಕರಣ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟಪಡಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsRoad Wideningಎಂ.ಜೆ. ಅಪ್ಪಾಜಿಭದ್ರಾವತಿರಸ್ತೆ ಅಗಲೀಕರಣಶಾಸಕ ಬಿ.ಕೆ. ಸಂಗಮೆಶ್ವರ್
Share196Tweet123Send
Previous Post

ಮಲೆನಾಡ ಹೆಬ್ಬಾಗಿಲಲ್ಲಿ ಅಬ್ಬರಿಸಿದ ಮೈತ್ರಿ ಪಕ್ಷದ ಮುಖಂಡರು, ಮಧು ನಾಮಪತ್ರ ಸಲ್ಲಿಕೆ

Next Post

ಭದ್ರಾವತಿ: ಮೂರು ಕಡೆ ಚೆಕ್ ಪೋಸ್ಟ್‌’ನಲ್ಲಿ ದಾಖಲೆಯಿಲ್ಲದ 1 ಲಕ್ಷಕ್ಕೂ ಅಧಿಕ ಹಣ ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಮೂರು ಕಡೆ ಚೆಕ್ ಪೋಸ್ಟ್‌’ನಲ್ಲಿ ದಾಖಲೆಯಿಲ್ಲದ 1 ಲಕ್ಷಕ್ಕೂ ಅಧಿಕ ಹಣ ವಶ

ಭದ್ರಾವತಿ: ಮೂರು ಕಡೆ ಚೆಕ್ ಪೋಸ್ಟ್‌'ನಲ್ಲಿ ದಾಖಲೆಯಿಲ್ಲದ 1 ಲಕ್ಷಕ್ಕೂ ಅಧಿಕ ಹಣ ವಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ? ನಾಳೆ ರಾಜೀನಾಮೆ?

May 27, 2026
ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

May 26, 2026
ಶೀಘ್ರದಲ್ಲೇ ಸ್ಥಳೀಯ ಸಂಸ್ಥೆ ಚುನಾವಣೆ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಗೃಹಲಕ್ಷ್ಮಿ ಯೋಜನೆಯಲ್ಲಿ ರೂ.100 ಕೋಟಿ ದುರ್ಬಳಕೆ | ಡಿಸಿಎಂ ಶಿವಕುಮಾರ್ ಹೇಳಿದ್ದೇನು?

May 26, 2026
ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

May 26, 2026
ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

ನಾನು ಮಗಳನ್ನು ಕಳೆದುಕೊಂಡೆ, ಮಮತಾ ಸಿಎಂ ಸ್ಥಾನ ಕಳೆದುಕೊಂಡರು | ಆರ್’ಜಿ ಕರ್ ಸಂತ್ರಸ್ಥೆ ತಾಯಿ

May 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL