ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಗಾಂಜಾ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನ ವಿರುದ್ದ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ತಾಲೂನಲ್ಲಿ ನಡೆದಿದೆ.
ಮುಜಾಹಿಲ್ (35) ಎಂಬಾತ ಮೇ.6ರಂದು ಮದ್ಯಾಹ್ನ 12:30ರ ಸಮಯದಲ್ಲಿ ನಗರದ ತರೀಕೆರೆ ರಸ್ತೆಯ ಮೂಪಾ ಕಾಂಫೌಂಡ್ ಹತ್ತಿರ ಸಾರ್ವಜನಿಕರೊಂದಿಗೆ ಆಸಭ್ಯವಾಗಿ ವರ್ತಿಸುತ್ತಿದ್ದು, ಈ ಭಾಗದಲ್ಲಿ ಗಸ್ತಿನಲ್ಲಿದ್ದ ಹಳೇನಗರ ಠಾಣೆ ಪೊಲೀಸರು ಈತನ ವಿಚಾರಣೆ ನಡೆಸಿದಾಗ ಯಾವುದೋ ಮಾದಕ ವಸ್ತು ಸೇವನೆಯಿಂದ ಅಮಲಿನಲ್ಲಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಈತನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post