ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕೆ. ಸುದೀಪ್ಕುಮಾರ್ ಮರು ಆಯ್ಕೆಯಾಗಿದ್ದಾರೆ.
ನಗರಸಭೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರವನ್ನು ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಮೊದಲ ಅವಧಿಗೆ ಕೆ. ಸುದೀಪ್ಕುಮಾರ್ ಆಯ್ಕೆಯಾಗಿದ್ದರು. 1 ವರ್ಷ ಅವಧಿ ಅಧಿಕಾರ ಹಂಚಿಕೆ ಮಾಡಲಾಗಿತ್ತು. ಅದರಂತೆ 1 ವರ್ಷ ಅಧಿಕಾರ ನಡೆಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಮಂಗಳವಾರ ಚುನಾವಣೆ ನಡೆಯಿತು.
ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರಸ್ತುತ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳನ್ನು ಗಮನಸಿ ಕೆ. ಸುದೀಪ್ಕುಮಾರ್ರವರನ್ನು 2ನೇ ಅವಧಿಗೂ ಮುಂದುವರೆಸುವುದು ಸೂಕ್ತ ಎಂಬ ತೀರ್ಮಾನ ಕೈಗೊಂಡು ಪುನಃ 2ನೇ ಅವಧಿಗೂ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ವಿಜಯರವರು ನಾಮಪತ್ರ ಸಲ್ಲಿಸಿದ್ದರು. ಕೆ. ಸುದೀಪ್ಕುಮಾರ್ರವರು 6 ಮತಗಳನ್ನು ಹಾಗು ವಿಜಯರವರು 5 ಮತಗಳನ್ನು ಪಡೆದುಕೊಂಡಿದ್ದಾರೆ.
2ನೇ ಅವಧಿಗೆ ಆಯ್ಕೆಯಾದ ಸುದೀಪ್ಕುಮಾರ್ರವರನ್ನು ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ ಹಾಗು ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post