ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ #VISL ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು #Kannada Rajyothsava ಕಂಪನಿಯ ಆವರಣದೊಳಗಿರುವ ಫ್ಯಾಕ್ಟರಿ ಮೀಟಿಂಗ್ ಹಾಲ್ನಲ್ಲಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕ (ವರ್ಕ್ಸ್) ಕೆ.ಎಸ್. ಸುರೇಶ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷರಾದ ಜೆ. ಜಗದೀಶ್, ವಿಐಎಸ್ಎಲ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿಯವರಾದ ಆರ್. ಹರೀಶ್ರವರು ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಮ್ಮ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಲಾವಿದರು ವಿವಿಧ ಪ್ರಾಕಾರದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುವ ಮೂಲಕ ಸಭೀಕರ ಮನಸೂರೆಗೊಂಡರು.
ಈ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳಾದ ಮುತ್ತಣ್ಣ ಸುಬ್ಬರಾವ್, ಮಹಾಪ್ರಬಂಧಕರು (ಪರಿಸರ ನಿರ್ವಹಣಾ ಇಲಾಖೆ), ಶ್ರೀಮತಿ ಶೋಭ ಶಿವಶಂಕರನ್, ಮಹಾಪ್ರಬಂಧಕರು (ಹಣಕಾಸು ಮತ್ತು ಲೆಕ್ಖ), ಶ್ರೀ ರಘುನಾಥ್ ಅಷ್ಟಪುತ್ರೆ, ಮಹಾಪ್ರಬಂಧಕರು (ವಿಜಿಲೆನ್ಸ್), ವಿಐಎಸ್ಎಲ್ ಕಾರ್ಮಿಕ ಸಂಘದ ಮತ್ತು ಅಧಿಕಾರಿಗಳ ಸಂಘದ ಅಧ್ಯಕ್ಷರು, ಪದಾದಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರುಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮವನು ವಿಐಎಸ್ಎಲ್ನ ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post