ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಉದ್ಯೋಗ ಆಶ್ರಿತರಾಗಿ ಆಗಮಿಸಿದವರಿಗೆ ಶುಭಾಶಯ ತಿಳಿಸಿದ Kirloskar Ferrous Industries Ltd., ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆಯವರು, ಇಲ್ಲಿ ಭಾಗವಹಿಸಿರುವ ಕಾರ್ಖಾನೆಗಳು ಹೆಚ್ಚಾಗಿ ಉದ್ಯೋಗಗಳನ್ನು ನೀಡುವುದಾಗಿ ಭರವಸೆ ನೀಡಿದರು. ಮತ್ತು ತಮ್ಮ ಕಂಪನಿಯ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ನೀಡಲು ಆದೇಶಿಸಿದರು.
ಮಂಗೋಟೆ ಶ್ರೀ ಮುರುಗೆಪ್ಪ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀ ವಿಶ್ವೇಶ್ವರಯ್ಯ ಸ್ಕೂಲ್ ಆವರಣದಲ್ಲಿ ಏರ್ಪಡಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಂಸದ ರಾಘವೇಂದ್ರ MP Raghavendra ಮಾತನಾಡಿ, ಶಿವಮೊಗ್ಗ, ಭದ್ರಾವತಿ ನಗರಗಳು ಸಾಕಷ್ಟು ಅಭಿವೃದ್ಧಿ ಹೊಂದಿದ್ದು, ಶೈಕ್ಷಣಿಕವಾಗಿಯೂ ಉತ್ತಮ ಸಾಧನೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಪ್ರತಿಷ್ಠಿತ ಕಂಪೆನಿಗಳ ಉದ್ಯೋಗ ಮೇಳಗಳು ಸ್ಥಳೀಯ ಯುವಜನರಿಗೆ ಸಹಕಾರಿ ಎಂದು ಹೇಳಿದರು.

ಉದ್ಯೋಗ ಮೇಳೆದಲ್ಲಿ ಎಸ್ಎಸ್ಎಲ್ಸಿ, ಐಟಿಐ , ಡಿಪ್ಲೋಮಾ, ಬಿಎಸ್ ಸಿ, ಬಿಕಾಂ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಹೆಚ್ಚಾಗಿ ಭಾಗಿಯಾಗಿದ್ದರು. ಅದರಲ್ಲಿ ಮಹಿಳಾ ಅಭ್ಯರ್ಥಿಗಳು ಹೆಚ್ಚಾಗಿ ಭಾಗಿಯಾಗಿದ್ದು ಕಂಡುಬಂದಿತು.

ಬೆಳಿಗ್ಗೆ 10ರಿಂದ ಸಾಯಂಕಾಲ ವರೆಗೆ ಸುಮಾರು 1000 ಕ್ಕೂ ಅಧಿಕ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಗಳಾಗಿ ಸುಮಾರು ಅಭ್ಯರ್ಥಿಗಳು ಅನೇಕ ಕಾರ್ಖಾನೆಯ ಆಯ್ಕೆಯ ಪಟ್ಟಿಯಲ್ಲಿ ಸೇರಿದರು. ಈ ಕಾರ್ಯಕ್ರಮ ಆಯೋಜಿಸಿದ್ದ ಮಂಗೋಟೆ ಶ್ರೀ ಮುರುಗೆಪ್ಪ ನವರ ಧರ್ಮಪತ್ನಿ ರತ್ನಮ್ಮ ಮಕ್ಕಳಾದ ನಾಗರಾಜ್, ರುದ್ರೇಶ ಮತ್ತು ಆನಂದ್ ರವರು ಸಂತಸ ವ್ಯಕ್ತಪಡಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಟ್ಟ ಎಲ್ಲರಿಗೆಲ್ಲಾರಿಗೂ ಧನ್ಯವಾದ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post