Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ: ಮಣಿಪಾಲ ಆರೋಗ್ಯಕಾರ್ಡ್ 2022ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

July 20, 2022
in ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |     

ಮಣಿಪಾಲ್ ಆರೋಗ್ಯ ಕಾರ್ಡ್ 2022ರ Manipal Health Card ನೋಂದಣಿ ಪ್ರಾರಂಭವಾಗಿದ್ದು, ಇದನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ.

ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ನ ಧ್ಯೇಯ ವಾಕ್ಯದೊಂದಿಗೆ ಇಂದು ನಗರದಲ್ಲಿ ಇದಕ್ಕೆ ಚಾಲನೆ ನೀಡಲಾಗಿದೆ.
ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯ್ತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯ್ತಿಯ ರೂಪದಲ್ಲಿ ಹಿಂಪಡೆಯಬಹುದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾವೇರಿ, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ ಮತ್ತು ಮಧ್ಯ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ.
ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು. ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ.
ಮಣಿಪಾಲ್ ಆರೋಗ್ಯ ಕಾರ್ಡ್ 2022ರ ಯೋಜನೆಯು ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ.300, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ. 600 ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. 750/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 500, ಕುಟುಂಬಕ್ಕೆ ರೂ. 800 ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 950 ಆಗಿದೆ.

Also read: ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಯ ಕ್ಷಮೆ ಕೇಳಬೇಕು: ಶಾಸಕ ಈಶ್ವರಪ್ಪ ಆಗ್ರಹ

ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರಿಗೆ ಈ ಸೌಲಭ್ಯವಿದೆ:

  • ಹೊರ ರೋಗಿ ವಿಭಾಗದಲ್ಲಿ ಒಳ ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೆ.50 ರಿಯಾಯ್ತಿ
  • ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.30 ರಿಯಾಯ್ತಿ
  • ಸಿಟಿ, ಎಂಆರ್’ಐ, ಅಲ್ಟಾçಸೌಂಡ್ ಗಳಲ್ಲಿ ಶೇ.20 ರಿಯಾಯ್ತಿ
  • ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ರಿಯಾಯ್ತಿ
  • ಔಷಧಾಲಯಗಳಲ್ಲಿ ಶೇ.12ರವರೆಗೆ ರಿಯಾಯ್ತಿ *ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ.25 ರಿಯಾಯ್ತಿ
  • ಕೋವಿಡ್ ರೋಗಿಗಳಿಗೆ ಜನರಲ್ ವಾರ್ಡ್ನಲ್ಲಿ ರೋಗಿಗಳಿಗೆ ಸರ್ಕಾರ ಅನುಮೋದಿತ ಪ್ಯಾಕೇಜ್ ಮೇಲೆ ಶೇ.10 ರಿಯಾಯ್ತಿ

ಕಾರ್ಡ್ ಹೊಂದಿರುವವರು ಕರಾವಳಿ ಕರ್ನಾಟಕ ಮತ್ತು ಗೋವಾದ ಮಣಿಪಾಲ್ ಗ್ರೂಪ್ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಇದರಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ.ಟಿ.ಎಂ.ಎ ಪೈ ಆಸ್ಪತ್ರೆ ಉಡುಪಿ ಮತ್ತು ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ, ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಅಂಬೇಡ್ಕರ್ ಸರ್ಕಲ್ ಮಂಗಳೂರು ಮತ್ತು ದುರ್ಗಾ ಸಂಜೀವನಿ ಮಣಿಪಾಲ ಆಸ್ಪತ್ರೆ ಕಟೀಲ್ ಮತ್ತು ಮಣಿಪಾಲ್ ಆಸ್ಪತ್ರೆ ಗೋವಾ, ಮಣಿಪಾಲ ಮತ್ತು ಮಂಗಳೂರಿನಲ್ಲಿರುವ ದಂತ ಚಿಕಿತ್ಸಾ ಆಸ್ಪತ್ರೆಗಳಲ್ಲಿ ರಿಯಾಯ್ತಿ ಪ್ರಯೋಜನಗಳನ್ನು ಪಡೆಯಬಹುದು. ಮಣಿಪಾಲ ಆರೋಗ್ಯ ಕಾರ್ಡನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.

ಮಣಿಪಾಲ ಆರೋಗ್ಯ ಕಾರ್ಡಿನ ಪ್ರತಿನಿಧಿಯಾಗಬೇಕಾದಲ್ಲಿ ಅನಿಲ್ ನಾಯ್ಕ್ 9740618912 ಸಂಪರ್ಕಿಸಬಹುದಾಗಿದೆ.
2022ರ ನೋಂದಾವಣಿಗಾಗಿ ಅರ್ಜಿಗಳನ್ನು ಅಧಿಕೃತ ಪ್ರತಿನಿಧಿಗಳಾದ ಭದ್ರಾವತಿ: ವಿಪ್ರ ಸೌಹಾರ್ದ: 9739080599, ಎಂ.ಜಿ. ಸುರೇಶ್: 9845681363, ಡಿ. ಶಬರಿವಾಸನ್: 9035616188, ರಾಜೇಶ್: 9448062523, ಮಧು: 9731247134 ಹಾಗೂ ಶಿವಮೊಗ್ಗ: ಎ.ಎನ್. ವಿಜೇಂದ್ರ ರಾವ್: 9448790127ಗೆ ಸಂಪರ್ಕಿಸಬಹುದು.

ಪತ್ರಿಕಾಗೋಷ್ಟಿಯಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ, ಪ್ರತಿನಿಧಿಯಾದ ಶ್ರೀನಿವಾಸ್ ಭಾಗವತ್ ಇವರೆಲ್ಲರೂ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsManipal Health CardNewsinKannadaNewsKannadaShimogaShivamoggaShivamogga Newsಭದ್ರಾವತಿಮಣಿಪಾಲ್ ಆರೋಗ್ಯ ಕಾರ್ಡ್ಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Previous Post

ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಯ ಕ್ಷಮೆ ಕೇಳಬೇಕು: ಶಾಸಕ ಈಶ್ವರಪ್ಪ ಆಗ್ರಹ

Next Post

ಬೆಂಗಳೂರಿನಿಂದ ಜೋಗ ಸೇರಿ ಶಿವಮೊಗ್ಗ ಜಿಲ್ಲೆಗೆ ಕೆಎಸ್’ಆರ್’ಟಿಸಿ ವಿಶೇಷ ಪ್ಯಾಕೇಜ್ ಟೂರ್ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರಿನಿಂದ ಜೋಗ ಸೇರಿ ಶಿವಮೊಗ್ಗ ಜಿಲ್ಲೆಗೆ ಕೆಎಸ್'ಆರ್'ಟಿಸಿ ವಿಶೇಷ ಪ್ಯಾಕೇಜ್ ಟೂರ್ ಆರಂಭ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!