ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ರಾಜ್ಯದ ಒಂದು ಭಾಗ ಜನಸಂಖ್ಯೆ ಇರುವ ಒಕ್ಕಲಿಗರ ಹಿತ ಕಾಯುವ ದೃಷ್ಠಿಯಿಂದ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಜೆಡಿಯು ಮನವಿ ಮಾಡಿದೆ.
ಈ ಕುರಿತಂತೆ ಸಂಯುಕ್ತ ಜನತಾದಳ ಮುಖಂಡ ಶಶಿಕುಮಾರ್ ಎಸ್ ಗೌಡ ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದ್ದು, ಒಕ್ಕಲಿಗ ಸಮಾಜದ ಬಂಧುಗಳು ಶೇ.75ರಷ್ಟು ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ನಾಡಿಗೆ ಅನ್ನಕೊಟ್ಟ ಒಕ್ಕಲಿಗ ರೈತಾಪಿ ವರ್ಗ ಅನೇಕ ಸಂಕಷ್ಟಗಳಿಂದ ನೊಂದಿದೆ ಎಂದಿದ್ದಾರೆ.
ನಾಡಪ್ರಭು ಕೆಂಪೇಗೌಡ ಸೇರಿದಂತೆ ಅನೇಕ ರಾಜಕೀಯ ಮುಖಂಡರು ವಿವಿಧ ಕ್ಷೇತ್ರಗಳಲ್ಲಿ ಜಾತಿ ಧರ್ಮ ಮೀರಿದ ಮೀರಿದ ಸೇವೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಒಕ್ಕಲಿಗ ಸಮಾಜ ಹಿಂದುಳಿದಿದ್ದು ಸಮಾಜಕ್ಕೂ ಕೂಡ ಅಭಿವೃದ್ಧಿ ನಿಗಮ ರಚಿಸಿ ಹಂತಹಂತವಾಗಿ ಮುಂದೆ ಬರಲು ಸಹಕರಿಸಬೇಕು ಎಂದಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಬಿ.ವಿ. ಗಿರೀಶ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post