Tuesday, September 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿ ಜನತೆಗಾಗಿ ಶಾಸಕರ ನಿಧಿಯಿಂದ 1 ಕೋಟಿ ರೂ. ನೆರವು ಘೋಷಿಸಿದ ಶಾಸಕ ಸಂಗಮೇಶ್ವರ್!

May 7, 2021
in ಭದ್ರಾವತಿ
0 0
0
File Image

File Image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ ನೇತೃತ್ವದಲ್ಲಿ ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಲಾಕ್‌ಡೌನ್‌ನಿಂದಾಗಿ ಸಾರ್ವಜನಿಕರ ಜೀವನ ನಿರ್ವಹಣೆ ಕಷ್ಟವಾಗಿದೆ. ರಾಜ್ಯಸರ್ಕಾರ ಬಡವರ ಖಾತೆಗೆ 10,000 ಹಣ ಹಾಕಬೇಕು. ಹಾಗೂ ಎರಡು ತಿಂಗಳ ಪಡಿತರ ಉಚಿತವಾಗಿ ನೀಡಬೇಕು. ಕೋವಿಡ್-19 ನಿಯಂತ್ರಿಸಲು ನೀಡಲಾಗುತ್ತಿರುವ ಕೋವ್ಯಾಕ್ಸಿನ್ ಲಸಿಕೆಯನ್ನು ಶೀಘ್ರವಾಗಿ ಎಲ್ಲರಿಗೂ ಕೊಡುವಂತೆ ಒತ್ತಾಯಿಸಿದರು.

ಕೊರೋನಾ ತಂದಿರುವ ಈ ಸಂಕಷ್ಟದ ಸಂದರ್ಭದಲ್ಲಿ ರೋಗಿಗಳಿಗಾಗಿ ಶಾಸಕರ ನಿಧಿಯಿಂದ 2 ಉಚಿತ ಆಂಬ್ಯುಲೆನ್ಸ್ ಸೇವೆಗೆ ವ್ಯವಸ್ಥೆ ಮಾಡಲಾಗುವುದು. ಹಾಗೂ ಭದ್ರಾವತಿ ಜನರ ಅನುಕೂಲಕ್ಕಾಗಿ 100 ಬೆಡ್ ಮತ್ತು ಮಂಚ ನೀಡಲಾಗುವುದು ಎಂದು ಹೇಳಿದರು.

ಇದೇ ವೇಳೆ ಸಾರ್ವಜನಿಕರು ಚಿಕಿತ್ಸೆಗೆಂದು ಓಡಾಡಲು ಪರದಾಡುವ ಪರಿಸ್ಥಿತಿ ಬಾರದಂತೆ ಪರ್ಯಾಯವಾಯಗಿ ಸಾರ್ವಜನಿಕ ಆಸ್ಪತ್ರೆಯಿಂದ ವಿ.ಐ.ಎಸ್.ಎಲ್ ಆಸ್ಪತ್ರೆಗೆ ಕೋವಿಡ್ ರಹಿತ ರೋಗಿಗಳಿಗೆ 2 ಬಸ್ ವ್ಯವಸ್ಥೆ ಕಲ್ಪಿಸಿಕೊಡುವಂತೆ ಮಾನ್ಯ ತಾಲ್ಲೂಕು ದಂಡಾಧಿಕಾರಿಗಳಿಗೆ ಸೂಚನೆ ನೀಡಿದರು.

ಕ್ಷೇತ್ರದ ಜನತೆಗೆ ಕೋವಿಡ್ ಮಾರಕವಾಗಬಾರದು, ನನ್ನ ಕ್ಷೇತ್ರದ ಜನತೆಯ ಆರೋಗ್ಯಕ್ಕಾಗಿ ಶಾಸಕರ ನಿಧಿಯು ಸಾಲದೇ ಇದ್ದಲ್ಲಿ ಹೆಚ್ಚುವರಿಯಾಗಿ ಎಷ್ಟೇ ಖರ್ಚು ಬಂದರೂ ಅದಕ್ಕೆ ತಮ್ಮ ಸ್ವಂತ ಹಣವನ್ನು ಸಹ ನೀಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಭದ್ರಾವತಿಯ 22 ಗ್ರಾಮಪಂಚಾಯತಿ ಮತ್ತು ಭದ್ರಾವತಿ ನಗರಸಭೆಯ 35 ವಾರ್ಡ್ ಗಳ ವ್ಯಾಪ್ತಿಯಲ್ಲಿ ಸೋಂಕಿತರು ಹಾಗೂ ಗುಣಮುಖರಾದವರ ಅಂಕಿ ಅಂಶಗಳನ್ನು ಒದಗಿಸುವುದರ ಜೊತೆಯಲ್ಲಿ, ಆಯಾ ಗ್ರಾಮ ಹಾಗೂ ವಾರ್ಡ್ ವಾರುಗಳಲ್ಲಿನ ಕುಂದುಕೊರತೆಗಳನ್ನು ಕೂಲಂಕುಷವಾಗಿ ಆಲಿಸಿ ಗಮನಕ್ಕೆ ತರಬೇಕೆಂದು ತಾಕೀತು ಮಾಡಿದರು..

ಜಿಲ್ಲಾ ಸರ್ಜನ್ ರಘುನಂದನ್ ದೂರವಾಣಿ ಮೂಲಕ ಜಿಲ್ಲಾಧಿಕಾರಿ ಅವರನ್ನು ಸಂಪರ್ಕಿಸಿದಾಗ, ತಾಲೂಕು ಸರ್ಕಾರಿ ಆಸ್ಪತ್ರೆ 100 ಹಾಸಿಗೆಗಳ ಸಾಮರ್ಥ್ಯ ಹೊಂದಿದ್ದು, ಸಂಪೂರ್ಣವಾಗಿ ಕೊರೋನಾ ರೋಗಿಗಳ ಚಿಕಿತ್ಸೆಗಾಗಿ ಮೀಸಲಿಡಲಾಗುವುದು. 50 ಹಾಸಿಗೆಗಳನ್ನು ಆಕ್ಸಿಜನ್ ಸೌಲಭ್ಯಕ್ಕಾಗಿ, ಇನ್ನುಳಿದ 50 ಹಾಸಿಗೆಯನ್ನು ಸೂಕ್ಷ್ಮ ಪ್ರಮಾಣದಲ್ಲಿ ಸೋಂಕು ಹೊಂದಿರುವ ರೋಗಿಗಳಿಗೆ ಮೀಸಲಿಡಲು ವ್ಯವಸ್ಥೆ ಮಾಡಲಾಗುವುದು. ಇತರೆ ರೋಗಿಗಳಿಗೆ ವಿಐಎಸ್‌ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ತಯಾರಿ ನಡೆಸಲಾಗುವುದು. ಬಸ್ ವ್ಯವಸ್ಥೆ ಕಲ್ಪಿಸುವ ಪ್ರಸ್ತಾಪವಿದ್ದು, ಅಗತ್ಯ ಬಿದ್ದರೆ ನೆರವು ನೀಡಲಾಗುವುದು ಎಂದರು.

ಡಿವೈಎಸ್‌ಪಿ ಕೃಷ್ಣಮೂರ್ತಿ ಮಾತನಾಡಿ, ರಾಜ್ಯದಲ್ಲಿ ಜಾರಿಯಲ್ಲಿರುವ ಜನತಾ ಕರ್ಫ್ಯೂಗೆ ಸಾರ್ವಜನಿಕರ ಸಹಕಾರ ಅಗತ್ಯ. ಅನಾವಶ್ಯಕವಾಗಿ ಸಂಚರಿಸಬಾರದು, ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ಮಾಡಬೇಡಿ ಎಂದು ಮನವಿ ಮಾಡಿದರು.

ಜನತಾ ಕರ್ಫ್ಯೂ ಉಲ್ಲಂಘಿಸಿದವರ ವಿರುದ್ಧ 5400 ಪ್ರಕರಣ ದಾಖಲಾಗಿದ್ದು, 23,23,300ರೂ. ದಂಡ ವಿಧಿಸಲಾಗಿದೆ. ಮಾಸ್ಕ್ ಧರಿಸದಿದ್ದವರಿಂದ 3ಲಕ್ಷ ದಂಡ ವಸೂಲು ಮಾಡಲಾಗಿದೆ. ಹಾಗೂ ಅಕಾಡೆಮಿಕ್ ಡಿಸೀಸ್ ಆಕ್ಟ್ ರೀತ್ಯ ನಗರದಲ್ಲಿ 12 ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ನಗರಸಭೆ ಆಯುಕ್ತ ಮನೋಹರ್ ಮಾತನಾಡಿ, ಮಾಸ್ಕ್ ಧರಿಸದವರಿಂದ 54,000 ದಂಡ ವಸೂಲು ಮಾಡಲಾಗಿದೆ. ಸಾಮಾಜಿಕ ಅಂತರ ಕಾಪಾಡಲು ವಿಫಲರಾಗಿರುವವರಿಂದ 38,000 ಹಾಗೂ ಮದುವೆ ಕಲ್ಯಾಣ ಮಂಟಪಗಳಲ್ಲಿ ಮಾರ್ಗಸೂಚಿ ಅನುಸರಿಸದವರಿಂದ 17 ದಂಡ ವಸೂಲು ಮಾಡಲಾಗಿದೆ ಎಂದು ಹೇಳಿದರು.

ತಾಪಂ ಸಿಇಓ ರಮೇಶ್ ಮಾತನಾಡಿ, ಗ್ರಾಮಾಂತರ ಪ್ರಧೇಶಗಳಲ್ಲೂ ಸೋಂಕು ನಿಯಂತ್ರಿಸಲು ಕ್ರಮ ಕೈಗೊಂಡಿದ್ದು, ಪಿಡಿಓಗಳ ಮೂಲಕ ಹೊರಪ್ರದೇಶದಿಂದ ಬಂದವರು, ಸೋಂಕಿತರು ಮತ್ತು ಐಸೋಲೇಶನ್‌ನಲ್ಲಿ ಇರುವವರ ಬಗ್ಗೆ ನಿರಂತರವಾಗಿ ಮಾಹಿತಿ ಪಡೆಯಲಾಗುತ್ತಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiCoronaJanatha CurfewKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsLockdownMaskMinister SangameshwarNewsinKannadaNewsKannadaShimogaShivamoggaShivamogga NewsSocial Distanceಕೊರೋನಾಜನತಾ ಕರ್ಫ್ಯೂಭದ್ರಾವತಿಮಲೆನಾಡು_ಸುದ್ಧಿಮಾಸ್ಕ್‌ಲಾಕ್‍ಡೌನ್ಶಾಸಕ ಬಿ.ಕೆ. ಸಂಗಮೇಶ್ವರಶಿವಮೊಗ್ಗ_ನ್ಯೂಸ್ಸಾಮಾಜಿಕ ಅಂತರ
Previous Post

ಮೆಗ್ಗಾನ್ ಆವರಣದಲ್ಲಿ ಸೇವಾ ಕೇಂದ್ರ ಉದ್ಘಾಟನೆ

Next Post

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಗೆ ಮಾದರಿಯಾದ ಸೊರಬ ಪುರಸಭೆ ಸದಸ್ಯ ಪ್ರಸನ್ನ ಕುಮಾರ್ ದೊಡ್ಮನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಜನಪ್ರತಿನಿಧಿಗಳಿಗೆ ಮಾದರಿಯಾದ ಸೊರಬ ಪುರಸಭೆ ಸದಸ್ಯ ಪ್ರಸನ್ನ ಕುಮಾರ್ ದೊಡ್ಮನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾಡುಪ್ರಾಣಿಗಳ ಕಳ್ಳ ಬೇಟೆ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಿ | ಸಚಿವ ಈಶ್ವರ್ ಖಂಡ್ರೆ

September 30, 2025

ಇಂಗ್ಲೀಷ್‍ನಿಂದ ಜ್ಞಾನದ ವಿಸ್ತರಣೆ ಹೆಚ್ಚಾಗಲು ಸಾಧ್ಯ: ಪ್ರೊ. ಶರತ್ ಅನಂತಮೂರ್ತಿ

September 30, 2025
Image Courtesy: Internet

ಬೀದರ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

September 30, 2025

ಪಿಇಎಸ್‌ಐಎಎಂಎಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿ ಸಂವಾದ ಕಾರ್ಯಕ್ರಮ ಯಶಸ್ವಿ

September 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಡುಪ್ರಾಣಿಗಳ ಕಳ್ಳ ಬೇಟೆ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಿ | ಸಚಿವ ಈಶ್ವರ್ ಖಂಡ್ರೆ

September 30, 2025

ಇಂಗ್ಲೀಷ್‍ನಿಂದ ಜ್ಞಾನದ ವಿಸ್ತರಣೆ ಹೆಚ್ಚಾಗಲು ಸಾಧ್ಯ: ಪ್ರೊ. ಶರತ್ ಅನಂತಮೂರ್ತಿ

September 30, 2025
Image Courtesy: Internet

ಬೀದರ್ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

September 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!