ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಗೋಣಿಬೀಡು ಗ್ರಾಮದಲ್ಲಿರುವ ಶಕ್ತಿಧಾಮದಲ್ಲಿ ಸೆ.5ರಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ ಅವರ 2ನೇ ವರ್ಷದ ಪುಣ್ಯಸ್ಮರಣೆ ನಡೆಯಲಿದೆ ಎಂದು ಶಾರದ ಅಪ್ಪಾಜಿಗೌಡ ಮಾಹಿತಿ ನೀಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಸೆ.2ರಂದು ಎಂ.ಜೆ ಅಪ್ಪಾಜಿ ಅವರು ನಿಧನ ಹೊಂದಿ 2 ವರ್ಷ ಕಳೆಯಲಿದೆ. ಆದರೆ ಎಲ್ಲರಿಗೂ ಅನುಕೂಲವಾಗುವ ಉದ್ದೇಶದಿಂದ ಸೆ.5ರಂದು ಪುಣ್ಯಸ್ಮರಣೆ, ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಹಾಗು ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಗಳು ಒಟ್ಟಿಗೆ ನಡೆಯಲಿವೆ ಎಂದು ಸ್ಪಷ್ಟಪಡಿಸಿದರು.
ಸೆ.5ರಂದು ಬೆಳಿಗ್ಗೆ 9 ಗಂಟೆಗೆ ಗೋಣಿಬೀಡಿನ ಶಕ್ತಿಧಾಮದಲ್ಲಿ ಪುಣ್ಯಸ್ಮರಣೆ ನಡೆಯಲಿದೆ. ನಂತರ 11ಗೆ ಬಾಗಿನ ಸಮರ್ಪಣೆ, 12 ಗಂಟೆಗೆ ಜೆಡಿಎಸ್ ಪಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ. ಅಪ್ಪಾಜಿ ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಕ್ಷೇತ್ರದ ಸಮಸ್ತ ನಾಗರೀಕರು ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
Also read: ಮೇಯರ್, ಉಪಮೇಯರ್ ಸ್ಥಾನಕ್ಕೆ ಮೀಸಲಾತಿ ಪ್ರಕಟ: ಯಾವ್ಯಾವ ಜಿಲ್ಲೆಗಳಲ್ಲಿ ಸ್ಥಾನಪಲ್ಲಟವಾಗಲಿದೆ? ಇಲ್ಲಿದೆ ಮಾಹಿತಿ
ಅಪ್ಪಾಜಿ ಒಡನಾಡಿಗಳಾದ ನಗರಸಭೆ ಮಾಜಿ ಸದಸ್ಯ ಕರಿಯಪ್ಪ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್ ಅವರು ಅಪ್ಪಾಜಿ ಅವರೊಂದಿಗಿನ ನೆನೆಪುಗಳನ್ನು ಸ್ಮರಿಸಿಕೊಳ್ಳುವ ಮೂಲಕ 2 ವರ್ಷ ಪುಣ್ಯಸ್ಮರಣೆ, ಬಾಗಿನ ಸಮರ್ಪಣೆ ಹಾಗು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಧುಕುಮಾರ್, ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷ ಮುತುರ್ಜಾಖಾನ್, ನಗರಸಭೆ ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ, ಡಿ.ಟಿ ಶ್ರೀಧರ್ ಸೇರಿದಂತೆ ಜೆಡಿಎಸ್ ಪಕ್ಷದ ನಗರಸಭೆ ಸದಸ್ಯರು, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















