ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನ ಜನರ ಅನುಕೂಲಕ್ಕಾಗಿ ಶಿವಮೊಗ್ಗದ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ವತಿಯಿಂದ ಆಕ್ಸಿಜನ್ ಕಾನ್ಸನ್ಟ್ರೇಟರ್ಗನ್ನು ಉಚಿತವಾಗಿ ನೀಡಲಾಯಿತು.
ನಿರ್ಮಲಾ ಆಸ್ಪತ್ರೆಯ ಮುಖ್ಯಸ್ಥರಾದ ಸಿಸ್ಟರ್ ಹಿಲರಿ ಅವರಿಗೆ ಶಿವಮೊಗ್ಗದ ಮಹಾತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ನ ನಿರ್ದೇಶಕ ಕೆ.ಸಿ. ಬಸವರಾಜ್ ಆಕ್ಸಿಜನ್ ಕಾನ್ಸನ್ಟ್ರೇಟಾರ್ಗಾಳನ್ನು ಹಸ್ತಾಂತರಿಸಿದರು.

ಕೊರೋನ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಜನರ ಜೀವಗಳ ರಕ್ಷಣೆ ಇಂದಿನ ತುರ್ತು ಅಗತ್ಯವಾಗಿದ್ದು, ಅದರಲ್ಲಿಯೂ ಬಡಜನರ ನೆರವಿಗೆ ಧಾವಿಸಬೇಕಾಗಿರುವುದು ಎಲ್ಲರ ಆದ್ಯತೆ ಆಗಬೇಕು ಎಂದರು.

ಶಿವಮೊಗ್ಗದ ಎಸ್ಎಮ್ಎಸ್ಎಸ್ ಸಂಸ್ಥೆಯ ನಿರ್ದೇಶಕ ಫಾ. ರೋಷನ್ ಪಿಂಟೋ ಮಾತನಾಡಿ, ಕೊರೋನಾ ರೋಗಿಗಳಿಗೆ ಇವುಗಳಿಂದ ಹೆಚ್ಚಿನ ಸಹಾಯವಾಗಲಿದೆ. ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ನ ಸೇವಾ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post