No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಲಾಕ್ ಡೌನ್ ಸಂದರ್ಭ ಬಳಸಿಕೊಂಡು ಕಳಪೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಹುನ್ನಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 21, 2021
in ಭದ್ರಾವತಿ
0
ಲಾಕ್ ಡೌನ್ ಸಂದರ್ಭ ಬಳಸಿಕೊಂಡು ಕಳಪೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಹುನ್ನಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಸೋಂಕಿರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ನಿಯಂತ್ರಣಕ್ಕೆ ಬಾರದಿರುವುದರಿಂದ ಬಿಗಿಗೊಳಿಸಲಾಗಿರುವ ಲಾಕ್‌ಡೌನ್ ಪರಿಣಾಮ ರಸ್ತೆಗಳಲ್ಲಿ ವಾಹನ ಸಂಚಾರ ಜನಸಂಚಾರ ಬಹುತೇಕ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಕೊರೋನಾ ಆರಂಭವಗುವ ಮುನ್ನ ನಗರಸಭೆ ವ್ಯಾಪ್ತಿಯಲ್ಲಿ ಕೈಗೊಂಡಿದ್ದ ಕೆಲವು ಕಾಮಗಾರಿಗಳು ಅಸಮರ್ಪಕ ಹಾಗೂ ಬೇಕಾಬಿಟ್ಟಿ ಮಾಡಲಾಗುತ್ತಿದೆ ಎಂಬ ಸಾರ್ವಜನಿಕರ ಮತ್ತು ಸಂಘ ಸಂಸ್ಥೆಗಳ ಆರೋಪ ಕೇಳಿ ಬಂದಿದ್ದವು. ಈ ಮೇರೆಗೆ ಸ್ಥಗಿತಗೊಂಡಿದ್ದ ಕೆಲವು ಕಾಮಗಾರಿಗಳು ಈಗ ಲಾಕ್‌ಡೌನ್ ಇರುವ ವೇಳೆ ಜನರು ಬೀದಿಗೆ ಬರುವಂತಿಲ್ಲದಿರುವ ಸಂದರ್ಭವನ್ನು ಬಳಸಿಕೊಂಡು ಸ್ಥಗಿತಗೊಂಡಿದ್ದ ಅಂತಹ ಕಾಮಗಾರಿಗಳಿಗೆ ಮರು ಚಾಲನೆ ನೀಡುವ ಪ್ರಯತ್ನ ಆರಂಭಗೊಂಡಂತಿದೆ.

ಚನ್ನಗಿರಿ ರಸ್ತೆ ಅಗಲೀಕರಣ
ನಗರದ ಜನಸಂಖ್ಯೆ, ವಾಹನ ಸಂಖ್ಯೆ ಏರಿದ ಕಾರಣ ಜನ ಸಂಚಾರ ವಾಹನ ನಿಲುಗಡೆಗೆ ತೊಂದರೆಯಗುತ್ತಿದ್ದು ಇಲ್ಲಿನ ಮಾಧವಾಚಾರ್ ರಸ್ತೆಯಿಂದ ರಂಗಪ್ಪ ವೃತ್ತದವರೆಗೆ ಹಾಗು ಅಲ್ಲಿಂದ ಚನ್ನಗಿರಿ ರಸ್ತೆ ಪೂರ್ಣವಾಗಿ ಅಗಲೀಕರಣವಾಗಬೇಕು ಎಂಬುದು ಸಾರ್ವಜನಿಕರ ಒತ್ತಡ ಪೂರ್ವಕ ಅಭಿಪ್ರಾಯ. ಆದರೆ ಇಲ್ಲಿನ ಕೆಲವು ಅಧಿಕಾರಶಾಹಿ ರಾಜಕೀಯ ಹಿತಾಸಕ್ತಿಗಳ ಕೈವಾಡದಿಂದಾಗಿ ಮಾಧವಾಚಾರ್ ರಸ್ತೆಯಿಂದ ರಂಗಪ್ಪ ವೃತ್ತದವರೆಗಿನ ರಸ್ತೆ ಅಗಲೀಕರಣಕ್ಕೆ ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಗಳು ಕೈ ಹಾಕಲೇಯಿಲ್ಲ.
ಆದರೆ ರಂಗಪ್ಪ ವೃತ್ತದಿಂದ ಚನ್ನಗಿರಿ ಕಡೆ ಹೋಗುವ ರಸ್ತೆಯನ್ನು ಅಗಲೀಕರಣ ಮಾಡುವ ಕೆಲಸವನ್ನು ಲಾಕ್ ಡೌನ್ ಸಂದರ್ಭದಲ್ಲಿ ಯಾರು ರಸ್ತೆಗಿಳಿಯುವುದಿಲ್ಲ ಎಂಬ ಖಾತ್ರಿಯೊಂದಿಗೆ ಕಳಪೆ ರಸ್ತೆ ಅಗಲೀಕರಣ ಕಾಮಗಾರಿಯನ್ನು ಮಾಡಿ ಮುಗಿಸಿದ್ದಾರೆ.

ಸದರಿ ರಸ್ತೆಯನ್ನು ಮಾಡಬೇಕಾದ ಪ್ರಮಾಣದಲ್ಲಿ ಅಗಲೀಕರಣ ಮಾಡದೆ, ಈ ಹಿಂದೆ ಇದ್ದಷ್ಟೇ ವಿಸ್ತೀರ್ಣದ ಟಾರ್ ರಸ್ತೆಯನ್ನೇ ಅಲ್ಪ-ಸ್ವಲ್ಪ ಅಗಲ ಮಾಡಿದಂತೆ ಮಾಡಿ, ಅದರ ಉಭಯಪಾರ್ಶ್ವಗಳಲ್ಲಿ ಮಣ್ಣಿನ ರಸ್ತೆಯನ್ನೇ ಫುಟ್‌ಪಾತ್ ರೀತಿ ಮಾಡಿ ರಸ್ತೆ ಅಗಲೀಕರಣ ಆಯಿತು ಎನಿಸಿದ್ದಾರೆ.

ಕೋರ್ಟ್ ರಸ್ತೆ
ನಗರದ ತಾಲೂಕು ಕಚೇರಿ ರಸ್ತೆಯನ್ನು ಅಗಲೀಕರಣದ ನೆಪದಲ್ಲಿ ಅ ಸಂಖ್ಯಾತ ಬೃಹತ್ ಮರಗಳನ್ನು ಕಡಿದು ಹಾಕಲಾಯಿತು. ಆದರೆ ಮಾಡಿರುವ ರಸ್ತೆ ಅಗಲೀಕರಣ ಅಸಮರ್ಪಕವಾಗಿದ್ದು, ಒಂದೊಂದು ಕಡೆ ಒಂದೊಂದು ಅಳತೆಯಂತೆ ಮನಸ್ಸಿಗೆ ಬಂದಂತೆ ಸಿಮೆಂಟ್ ರಸ್ತೆ ಮಾಡಿ, ಕೋರ್ಟ್ ಮುಂದೆ ರಸ್ತೆಯ ವಿಸ್ತೀರ್ಣವನ್ನು ಮಾಡದೆ ಅದಕ್ಕೇ ತೇಪೆ ಹಾಕುವ ಕೆಲಸಕ್ಕೆ ಮುಂದಾದಾಗ ನಗರದ ನ್ಯಾಯವಾದಿಗಳ ಸಂಘ ಹಾಗೂ ಸಾರ್ವಜನಕರು ಖಂಡಿಸಿ ಆಗಿರುವ ಲೋಪವನ್ನು ಸರಿಪಡಿಸುವಂತೆ 2020ರ ಮಾರ್ಚ್ ತಿಂಗಳಲ್ಲಿ ಪ್ರತಿಭಟನೆ ಮಾಡಿದ್ದರು. ಆಗ ಅಧಿಕಾರಿಗಳು ಸ್ಥಳಕ್ಕೆ ಬಂದು ಆಗಿರುವ ಲೋಪವನ್ನು ಸರಿ ಪಡಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಭರವಸೆ ನೀಡಿದ ಮೇರೆಗೆ ವಕೀಲರ ಸಂಘ ಪ್ರತಿಭಟನೆಗೆ ನಿಲ್ಲಿಸಿತ್ತು.
ಈಗ ಲಾಕ್ ಡೌನ್ ಇರುವುದರಿಂದ ನ್ಯಾಯಾಲಯವೂ ಸಹ ಹಲವು ನಿರ್ಬಂಧಗಳೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ನ್ಯಾಯವಾದಿಗಳೂ ಸಹ ನ್ಯಾಯಾಲಯಕ್ಕೆ ಬರುತ್ತಿರುವುದು ಕಡಿಮೆಯಾಗಿದೆ. ಈಗ ಯಾವುದೇ ರೀತಿ ಕಾಮಗಾರಿಯನ್ನು ಯಾರ ವಿರೊಧವೂ ಇಲ್ಲದೆ ಮನಸ್ಸಿಗೆ ಬಂದಂತೆ ಪೂರ್ಣಗೊಳಿಸಬಹುದೆಂದು ಅರಿತು, ರಸ್ತೆ ಅಗಲಿಕರಣ ಹಾಗೂ ವೃತ್ತ ಅಗಲೀಕರಣ ಮಾಡುವ ಜವಾಬ್ಧಾರಿ ಹೊತ್ತಿರುವ ಲೋಕೋಪಯೋಗಿ ಇಲಾಖೆ, ನಗರಸಭೆ ಈಗ ಶುಕ್ರವಾರದಿಂದ ರಂಗಪ್ಪ ವೃತ್ತದ ಅಗಲೀಕರಣದ ಹೆಸರಲ್ಲಿ ಕಾಮಗಾರಿಯನ್ನು ಆರಂಭಿಸಿರುವಂತೆ ಕಾಣುತ್ತದೆ. ಸಾರ್ವಜನಕಿರ ಉಪಯೋಗಕ್ಕಾಗಿ ಮಾಡುವ ರಸ್ತೆ ಅಗಲೀಕರಣ, ವೃತ್ತಗಳ ಅಗಲೀಕರಣದಲ್ಲಿ ಈ ರೀತಿಯ ರಾಜಕೀಯ ಊರಿನ ಹಿತದೃಷ್ಟಿಯಿಂದ ಸಮರ್ಥನೀಯವಲ್ಲ ಎಂಬುದನ್ನು ಸರ್ಕಾರಿ ಅಧಿಕಾರಿಗಳು ಹಾಗೂ ಜನರಿಂದ ಜನರಿಗಾಗಿ ಜನರೇ ಆರಿಸಿರುವ ಅಧಿಕಾರರೂಢ ರಾಜಕಾರಣಿಗಳು ಅರಿಯಬೇಕಿದೆ.
ಒಂದೊಮ್ಮೆ ಕೋರ್ಟ್ ಎದುರಿಗೆ ರಸ್ತೆ ಕಾಮಗಾರಿಯಲ್ಲಿ ಆಗಿರುವ ಲೋಪದೋಷವನ್ನು ಸರಿಪಡಿಸದೇ ಹಾಗೇ ಸಂಕುಚಿತಗೊಳಿಸಿ ರಸ್ತೆ ಅಗಲೀಕರಣ ಪೂರ್ಣಗೊಳಿಸಿದರೆ, ಅದರಿಂದ ಅಧಿಕಾರರೂಢರ ಕೆಲವು ಹಿಂಬಾಲಕರಿಗೆ ಅನುಕೂಲವಾಗಬಹುದು. ಆದರೆ ಊರಿನ ಉದ್ಧಾರ ಮಾಡುತ್ತಾರೆ ಎಂದು ನಂಬಿ ಮತ ಹಾಕಿ ಆರಿಸಿರುವ ಜನಸಾಮಾನ್ಯರಿಗೆ ಇದರಿಂದ ಅನಾನುಕೂಲವಾಗುತ್ತದೆ ಎಂಬ ಸಾಮಾನ್ಯ ಪ್ರಜ್ಞೆ ಜನನಾಯಕರಲ್ಲಿ ಮರೆಯಾಗಬಾರದಲ್ಲವೇ.
ರಸ್ತೆ ಅಗಲೀಕರಣ ಕಾಮಗಾರಿಯಾಗಲಿ, ವೃತ್ತದ ಅಗಲೀಕರಣ ಕಾಮಗಾರಿಯಾಗಲಿ, ಅಧಿಕಾರಿಗಳು ಸಹ ಸರ್ಕಾರದ ಕೆಲಸ ದೇವರ ಕೆಲಸ ಎಂಬುದನ್ನು ಕರ್ತವ್ಯ ನಿರ್ವಹಣೆಯಲ್ಲಿ ಪಾಲಿಸಿದಾಗ ಈ ರೀತಿ ಕಳಪೆ ಕಾಮಗಾರಿ ಅಥವಾ ಅಸಮರ್ಪಕ ಕಾಮಗಾರಿಗಳಾಗದಂತೆ ತಡೆಯಬಹುದು. ಅಧಿಕಾರ ಶಾಶ್ವತವಲ್ಲ. ಆದರೆ ಮಾಡಿರುವ ಕಾಮಗಾರಿಗಳು ನಿಯಮಾನುಸಾರ ಸಧೃಡವಾಗಿದ್ದರೆ ಅದರಿಂದ ಜನರು ಅಧಿಕಾರಿಗಳನ್ನು ಮತ್ತು ಜನಪ್ರತಿನಿದಿಗಳನ್ನು ಸದಾ ಸ್ಮರಿಸುತ್ತಾರೆ.

ನಾಗರೀಕರೆಲ್ಲ ಕೊರೊನಾ ಸಂಕಷ್ಟದ ಕಪಿಮುಷ್ಠಿಯಲ್ಲಿ ಸಿಲುಕಿ ಹೊರ ಜಗತ್ತಿಗೆ ಬರಲಾಗದ ಪರಿಸ್ಥಿತಿಯ ದುರ್ಲಾಭ ಬಳಸಿಕೊಂಡು ಹೊಸದಾದ ಮತ್ತು ಸ್ಥಗಿತಗೊಂಡೊರುವ ಕಳಪೆ ಕಾಮಗಾರಿಗಳನ್ನು ತೇಪೆಹಚ್ಚಿ ಮುಗಿಸಲು ಹೊರಟಿರುವವರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ.

ಲೇಖನ: ಕೋ.ಶ್ರೀ. ಸುಧೀಂದ್ರ, ಭದ್ರಾವತಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiKannada News WebsiteLatest News KannadaLocal NewsMalnad NewsRoad WideningShimogaShivamoggaShivamogga Newsಕೊರೋನಾ 2ನೆಯ ಅಲೆಭದ್ರಾವತಿಮಲೆನಾಡು ಸುದ್ಧಿರಸ್ತೆ ಅಗಲೀಕರಣಲಾಕ್ ಡೌನ್ಶಿವಮೊಗ್ಗ ನ್ಯೂಸ್
Share197Tweet123Send
Previous Post

BIG BREAKING NEWS: ರಾಜ್ಯದಾದ್ಯಂತ ಜೂನ್ 7ರವರೆಗೆ ಲಾಕ್‌ಡೌನ್ ವಿಸ್ತರಣೆ: ಪೊಲೀಸರಿಗೆ ಫುಲ್ ಪವರ್

Next Post

ಕೋವಿಡ್ ಹಾಗೂ ಬ್ಲ್ಯಾಕ್‌ಫಂಗಸ್ ಬಗ್ಗೆ ಆತಂಕಪಡದೆ ಜಾಗೃತರಾಗಿರಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕೋವಿಡ್ ಹಾಗೂ ಬ್ಲ್ಯಾಕ್‌ಫಂಗಸ್ ಬಗ್ಗೆ ಆತಂಕಪಡದೆ ಜಾಗೃತರಾಗಿರಿ: ಸಚಿವ ಬಿ.ಸಿ. ಪಾಟೀಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

March 25, 2026
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

March 25, 2026
Yogada Satsang Society brings out Kannada version on Kriya Yoga today

ಧಾರವಾಡ | ಇಂದು ಸಂಜೆ ಯೋಗದಾ ಸತ್ಸಂಗ ಸೊಸೈಟಿ ಆಫ್ ಇಂಡಿಯಾ ಜಾಗೃತಿ ಕಾರ್ಯಕ್ರಮ

March 25, 2026
2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಗೆ ಸ್ಕ್ವಾಷ್ ಕ್ರೀಡೆ ಬಲಪಡಿಸಲು ಸಿದ್ಧತೆ !

March 25, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL