ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಭಾರ ಅಧ್ಯಕ್ಷರಾಗಿ ರಾಜನಾಯ್ಕ ಬುಧವಾರ ಅಧಿಕಾರ ವಹಿಸಿಕೊಂಡರು.
ಜೆಡಿಎಸ್ ಮತ್ತು ಬಿಜೆಪಿ ಪ್ರಾಬಲ್ಯ ಹೊಂದಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಒಪ್ಪಂದದ ಪ್ರಕಾರ ಲವೇಶ್ಗೌಡ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಕಳೆದ 15 ದಿನಗಳ ಹಿಂದೆ ರಾಜೀನಾಮೆ ಸಲ್ಲಿಸಿದ್ದರು. ಮಂಗಳವಾರ ರಾಜೀನಾಮೆ ಪತ್ರ ಅಂಗೀಕಾರಗೊಂಡಿದ್ದು, ಈ ಹಿನ್ನಲೆಯಲ್ಲಿ ಉಪಾಧ್ಯಕ್ಷರಾದ ರಾಜನಾಯ್ಕ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಅಧ್ಯಕ್ಷರ ಚುನಾವಣೆ ದಿನಾಂಕ ನಿಗದಿಯಾಗುವವರೆಗೂ ಪ್ರಭಾರ ಅಧ್ಯಕ್ಷರಾಗಿ ರಾಜನಾಯ್ಕ ಮುಂದುವರೆಯಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ರಾಜನಾಯ್ಕರನ್ನು ಅಭಿನಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post