No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನಮ್ಮ ದೇಶದಲ್ಲಿ ಸ್ತ್ರೀಯರಿಂದಾಗಿ ಧರ್ಮ ಉಳಿದಿದೆ: ವಿನಯ್ ಗುರೂಜಿ ಅಭಿಮತ

ಭದ್ರಾವತಿಯಲ್ಲಿ ಸಾಮೂಹಿಕ ದುರ್ಗಾಸಪ್ತಶತಿ ಪಾರಾಯಣ | ಗುರೂಜಿಗೆ ನಗರದಲ್ಲಿ ಅದ್ದೂರಿ ಸ್ವಾಗತ, ಬೈಕ್ ರ‍್ಯಾಲಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 30, 2022
in ಭದ್ರಾವತಿ
0
ನಮ್ಮ ದೇಶದಲ್ಲಿ ಸ್ತ್ರೀಯರಿಂದಾಗಿ ಧರ್ಮ ಉಳಿದಿದೆ: ವಿನಯ್ ಗುರೂಜಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ನಮ್ಮ ಭಾರತ ದೇಶದಲ್ಲಿ ಮಹಿಳೆಯರ ಸಂಸ್ಕಾರ ಹಾಗೂ ಅಧ್ಯಾತ್ಮಿಕ ಶಕ್ತಿಯಿಂದಾಗಿ ಇಂದಿಗೂ ಸಹ ಧರ್ಮ ಉಳಿದಿದೆ ಎಂದು ಅವಧೂತ ಗೌರಿ ಗದ್ದೆಯ ವಿನಯ್ ಗುರೂಜಿ Gowri Gadde Vinay Guruji ಅಭಿಪ್ರಾಯಪಟ್ಟಿದ್ದಾರೆ.

ವಿನಯ್ ಗುರೂಜಿ ಭಕ್ತ ವೃಂದದಿಂದ ಭದ್ರಾವತಿ ನಾಗರಿಕರ ಕ್ಷೇಮಾಭಿವೃದ್ಧಿಗಾಗಿ ಬಸವೇಶ್ವರ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಸಾಮೂಹಿಕ ದುರ್ಗಾಸಪ್ತಶತಿ ಪಾರಾಯಣ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿ ಮಾತನಾಡಿದರು.
ನಮ್ಮ ಸಂಸ್ಕೃತಿಯಲ್ಲಿ ಮಹಿಳೆಗೆ ಪೂಜನೀಯ ಸ್ಥಾನ ಮಾನ ನೀಡಲಾಗಿದೆ. ಪುರುಷರಿಗಿಂತಲೂ ಮಹಿಳೆಯರಿಗೆ ಅಧ್ಯಾತ್ಮಿಕ ಶಕ್ತಿ ಹೆಚ್ಚು. ಹೀಗಾಗಿ, ಸ್ತ್ರೀಯರಿಂದಲೇ ಇಂದಿಗೂ ನಮ್ಮ ನೆಲದಲ್ಲಿ ಧರ್ಮ ಉಳಿದಿದೆ. ಭಾವನೆಯ ರಥವೇ ಭಾರತವಾಗಿದೆ. ಇಂತಹ ಸುಸಂಸ್ಕೃತ ಸಂಸ್ಕಾರಕ್ಕೆ ವಿಶ್ವವೇ ತಲೆ ಬಾಗುತ್ತಿದೆ ಎಂದರು.

ಹಿಂದೆ ನಮ್ಮ ಭಾರತ ಎಂತಹ ಸಂಸ್ಕಾರವನ್ನು ಹೊಂದಿತ್ತೋ ಅದೇ ಈಗ ಮತ್ತೆ ನಿರ್ಮಾಣವಾಗಬೇಕು. ಇದರಲ್ಲಿ ಮಹಿಳೆಯರ ಪಾತ್ರ ದೊಡ್ಡದಿದೆ. ದುರ್ಗಾ ಮಾತಾ ಸಹ ಹೆಣ್ಣು. ಏಳು ಜನ್ಮದ ಶಾಪಗಳನ್ನು ತೊಳೆಯುವ ಶಕ್ತಿಯನ್ನು ದುರ್ಗಾಸಪ್ತಶತಿ ಹೊಂದಿದೆ. ಒಂದು ಕುಟುಂಬನ್ನು ಉನ್ನತಿಯೆಡೆಗೆ ಕೊಂಡೊಯ್ಯುವ ಶಕ್ತಿಯೂ ಸಹ ಒಂದು ಹೆಣ್ಣಿಗೆ ಇದೆ. ಹೀಗಾಗಿ ಪ್ರತಿ ಮಹಿಳೆಯೂ ದುರ್ಗಾಸಪ್ತಶತಿಯನ್ನು ಪಾರಾಯಣ ಮಾಡಬೇಕು ಎಂದರು.
ಭಾರತ ಎನ್ನುವುದು ಜಗತ್ತಿನ ದೇವರ ಕೋಣೆ, ಉಳಿದ ರಾಷ್ಟ್ರಗಳೆಲ್ಲಾ ಭೋಗದ ನೆಲಗಳು. ಇದಕ್ಕೆ ಇತಿಹಾಸದಲ್ಲಿ ನಮ್ಮ ಸಂಸ್ಕೃತಿಯ ಪುಟಗಳನ್ನು ನೋಡಿದರೆ ತಿಳಿಯುತ್ತದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಹಾವಳಿಯಿಂದ ಇಂದು ಬಹಳಷ್ಟು ಮಂದಿಯ ಸಂಸ್ಕಾರ ಹಾಳಾಗಿದೆ. ಗ್ರಾಮೀಣ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ನಗರ ಪ್ರದೇಶಗಳಲ್ಲಿ ಇಂತಹ ವಾತಾವರಣ ಹೆಚ್ಚು ಕಾಣಿಸುತ್ತದೆ. ಇದನ್ನು ಬದಲಿಸಿ, ನಮ್ಮ ಸಂಸ್ಕೃತಿಯನ್ನು ಎತ್ತಿ ಹಿಡಿಯವ ಕೆಲಸ ಪ್ರತಿಯೊಬ್ಬರೂ ಮಾಡಬೇಕಿದೆ ಎಂದರು.

ಆಚಾರ್ಯತ್ರಯರು, ಬಸವಣ್ಣ, ಗಾಂಧಿ, ಅಂಬೇಡ್ಕರ ಸೇರಿದಂತೆ ಎಲ್ಲ ಮಹಾನುಭಾವರು ಯಾವುದೇ ಒಂದು ಧರ್ಮ ಹಾಗೂ ಜಾತಿಗೆ ಸೀಮಿತವಲ್ಲ. ಬದಲಾಗಿ, ನಮ್ಮ ಸಮಾಜವನ್ನು ಉದ್ಧರಿಸಲು ಅವತರಿಸಿದ ಹರಿಕಾರರು. ಇವರುಗಳ ಬಗ್ಗೆ ಇಂದು ವಿದೇಶಗಳಲ್ಲಿ ಅಧ್ಯಯವಾಗುತ್ತಿದೆ. ಬದಲಾಗಿ ನಮ್ಮಲ್ಲಿಯೇ ಇನ್ನೂ ಹೆಚ್ಚು ಹೆಚ್ಚು ಅಧ್ಯಯನವಾಗಬೇಕು ಎಂದರು.

ಇಂದಿನ ಯುವ ಪೀಳಿಗೆಯಲ್ಲಿ ಹೊಟ್ಟೆಕಿಚ್ಚು ಎನ್ನುವುದು ಇಲ್ಲ. ಪ್ರತಿಯೊಬ್ಬರೂ ಮುಗ್ದವಾಗಿ ಜೀವಿಸುವುದನ್ನು ಕಲಿಯಬೇಕು. ಮುಗ್ದತೆಗೆ ಎಂದಿಗೂ ಶಿವ ಒಲಿಯುತ್ತಾನೆ. ಪ್ರತಿಯೊಬ್ಬರ ಬದುಕಿನಲ್ಲೂ ಬೆಳಕು ಮೂಡಬೇಕು. ಆಗ ಮಾತ್ರ ಬದುಕು ಬಂಗಾರವಾಗುತ್ತದೆ ಎಂದರು.
ಅರಿವಿನಿಂದಾಗಿ ಜ್ಞಾನ ಹೆಚ್ಚಾಗುತ್ತದೆ. ಸೂಕ್ಷ್ಮ ಶರೀರ ಮಂತ್ರದಿಂದ ಶುದ್ಧಿಯಾಗುತ್ತದೆ. ಇದಕ್ಕಾಗಿ ಗಾಯತ್ರಿ ಮಂತ್ರ ಜಪ ಮಾಡಬೇಕು. ಇದರಿಂದಾಗಿ ಆತ್ಮ ಹಾಗೂ ಮನಸ್ಸು ಶುದ್ಧಿಯಾಗುತ್ತದೆ. ಈ ಜಪ ಮಾಡುವುದಕ್ಕೆ ಯಾವುದೇ ಬೇಧ ಭಾವವಿಲ್ಲ ಎಂದರು.

ಒಂದೆಡೆ ಸಮಾಜದಲ್ಲಿ ಕೂಡಿ ಬಾಳುವ ಸಂಸ್ಕೃತಿ ಮರೆಯಾಗುತ್ತಿದ್ದರೆ, ಇನ್ನೊಂದೆಡೆ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಇದು ನಮ್ಮ ಸಂಸ್ಕೃತಿಗೆ ಮಾರಕವಾಗಿದೆ. ತಂದೆ ತಾಯಿಗಳೂ ಹಾಗೂ ಹಿರಿಯರು ಇದ್ಧಾಗ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಶ್ರದ್ಧೆಯಿಂದ ಮಾಡುವುದೇ ಶ್ರಾದ್ಧಾ ಎನಿಸಿಕೊಳ್ಳುತ್ತದೆ. ಹೀಗಾಗಿ, ಪೋಷಕರನ್ನು ಭಕ್ತಿ ಹಾಗೂ ಶ್ರದ್ಧೆಯಿಂದ ನೋಡಿಕೊಳ್ಳುವ ಮಕ್ಕಳು ಎಂದಿಗೂ ಸುಖವಾಗಿರುತ್ತಾರೆ ಎಂದರು.

ಕೂಡಿ ಬಾಳುವ ಮನಃಸ್ಥಿತಿಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು. ಮಾತ್ರವಲ್ಲ, ನಮ್ಮ ನೆಲದ ಸಂಸ್ಕೃತಿಯನ್ನು ಉಳಿಸಲು ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಸಂಬಂಧಗಳಲ್ಲಿ ಸುಳ್ಳು ಹೇಳುವುದು ಸಲ್ಲ. ಸುಳ್ಳು ಹೇಳುವ ಸಂಬಂಧ ಹೆಚ್ಚು ದಿನ ಉಳಿಯುವುದಿಲ್ಲ. ವ್ರತಗಳಲ್ಲಿ ಸತ್ಯ ವ್ರತವೇ ದೊಡ್ಡದು ಎಂಬುದನ್ನು ಸದಾ ನೆನಪಿನಲ್ಲಿ ಇಡಬೇಕು ಎಂದರು.
ಶಾಸಕ ಬಿ.ಕೆ. ಸಂಗಮೇಶ್ವರ್ ಮಾತನಾಡಿ, ವಿನಯ್ ಗುರೂಜಿ ಅವರು ಇಂದು ನಗರಕ್ಕೆ ಆಗಮಿಸಿರುವುದು ನಮ್ಮೆಲ್ಲರ ಭಾಗ್ಯ. ಗುರೂಜಿಯರ ಆರ್ಶೀವಾದ ಪಡೆದ ನಮ್ಮ ಕುಟುಂಬಕ್ಕೆ ಬಹಳಷ್ಟು ಒಳ್ಳೆಯದಾಗಿದೆ. ಇದೇ ರೀತಿಯ ಇಡಿಯ ಭದ್ರಾವತಿ ನಗರದ ಎಲ್ಲ ನಾಗರಿಕರಿಗೆ ಒಳ್ಳೆಯದಾಗಬೇಕು. ಇದಕ್ಕಾಗಿ ಗುರುಗಳು ಅನುಗ್ರಹಿಸಬೇಕು ಎಂದು ಕೋರಿದರು.

ನಗರಸಭೆ ಮಹಿಳಾ ಪೌರಕಾರ್ಮಿಕರಿಗೆ ಭಕ್ತವೃಂದದ ವತಿಯಿಂದ ಸನ್ಮಾನಿಸಲಾಯಿತು. ಸುಮಾರು 150ಕ್ಕೂ ಅಧಿಕ ಮಹಿಳೆಯರು ದುರ್ಗಾಸಪ್ತಶತಿ ಪಾರಾಯಣ ಮಾಡಿದರು.

ನಗರಕ್ಕೆ ಆಗಮಿಸಿದ ವಿನಯ್ ಗುರೂಜಿ ಅವರನ್ನು ಬೈಕ್ ರ‍್ಯಾಲಿ ಮೂಲಕ ಕರೆತರಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಶ್ರೀಚಾಮುಂಡೇಶ್ವರಿ ಭಾವಚಿತ್ರಕ್ಕೆ ಗುರೂಜಿ ಪುಷ್ಪನಮನ ಸಲ್ಲಿಸಿದರು.

ನಗರಸಭೆ ಅಧ್ಯಕ್ಷೆ ಅನುಸುಧಾ ಪಳನಿ ಮೋಹನ್, ಉಪಾಧ್ಯಕ್ಷ ಚನ್ನಪ್ಪ, ಪ್ರಮುಖರಾದ ಮೂರ್ತಿ, ಭಾಗ್ಯ, ನರಸಿಂಹಾಚಾರ್, ಶಾಸಕರ ಕುಟುಂಬಸ್ಥರು ಇದ್ದರು. ಗುರೂಜಿಯವರ ದರ್ಶನಕ್ಕಾಗಿ ನಗರದ ವಿವಿದೆಢೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ದುರ್ಗಾಸಪ್ತಶತಿ ಪಾರಾಯಣ ಹಾಗೂ ದೆವರ ಭಜನೆ, ಹಾಡುಗಳನ್ನು ಹಾಡಿದರು. ಗುರುಗಳಿಂದ ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಮಕ್ಕಳಿಗೆ ಮತ್ತು ಮಹಿಳೆಯರಿಗೆ ಬಾಗಿನ ವಿತರಿಸಲಾಯಿತು.

ನಗರಸಭಾ ಆಯುಕ್ತ ಮನುಕುಮಾರ್, ಅಧ್ಯಕ್ಷೆ ಅನುಸುಧಾ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿಸಮಿತಿ ಅದ್ಯಕ್ಷ ಸುದೀಪ್ ಸೇರಿದಂತೆ ಅನೇಕ ಗಣ್ಯರು ಸಾವಿರಾರು ಜನರು ಕಾರ್ಯಕ್ರಲದಲಿ ಭಾಗವಹಿಸಿ ಅವದೂತರಿಂದ ಆಶೀರ್ವಾದ ಪಡೆದು ಫಲ ಸ್ವೀಕರಿಸಿದರು.

ಕಳಸಪೂರ್ವಕವಾಗಿ ಗುರುಗಳನ್ನು ಸ್ವಾಗಿತಿಸಲಾಯಿತು. ಅವದೂತರು ಮಗುವೊಂದನ್ನು ಹಾಗೂ ಹಿರಿಯ ಮಹಿಳೆಯೋರ್ವರನ್ನು ತಾವು ಕುಳಿತುಕೋಳ್ಳುವ ಆಸನದಲ್ಲಿ ಕುಳ್ಳಿರಿಸಿ ಪುಷ್ಪವೃಷ್ಠಿ ಮಾಡಿದರು.

ಪುಷ್ಪಾಸುಬ್ರಹ್ಮಣ್ಯ ಪ್ರಾರ್ಥಿಸಿ, ಭಾಗ್ಯಮೂರ್ತಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ನರಸಿಂಹಾಚಾರ್ ನಿರೂಪಿಸಿದರು. ಕಾರ್ಯಕ್ರಮದ ಆಯೋಜಕರಾದ ಬಸವರಾಜ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiGowri Gadde Vinay GurujiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA SangameshkarNewsinKannadaNewsKannadaShimogaShivamogga Newsಗೌರಿ ಗದ್ದೆ ವಿನಯ್ ಗುರೂಜಿಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share207Tweet123Send
Previous Post

ಮನೋರೋಗ ತಜ್ಞ ಡಾ. ಚಂದ್ರಶೇಖರ್ ಅವರಿಗೆ 2022ನೇ ದಿನದರ್ಶೀ ವರ್ಷದ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

Next Post

ಸುರಕ್ಷಿತ ಮತ್ತು ಕಾನೂನು ಪ್ರಕಾರ ಗರ್ಭಪಾತಕ್ಕೆ ಎಲ್ಲಾ ಮಹಿಳೆಯರು ಅರ್ಹರು: ಸುಪ್ರೀಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಹಿಜಾಬ್ ವಿವಾದ: ಮೇಲ್ಮನವಿ ಅರ್ಜಿ ಸಲ್ಲಿಕೆ

ಸುರಕ್ಷಿತ ಮತ್ತು ಕಾನೂನು ಪ್ರಕಾರ ಗರ್ಭಪಾತಕ್ಕೆ ಎಲ್ಲಾ ಮಹಿಳೆಯರು ಅರ್ಹರು: ಸುಪ್ರೀಂ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL