No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

35 ಸಾವಿರ ಮತಗಳ ಅಂತರದಿಂದ ಸಂಗಮೇಶ್ವರ್ ಗೆಲುವು: ಬಿ.ಕೆ. ಮೋಹನ್ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 25, 2023
in ಭದ್ರಾವತಿ
0
35 ಸಾವಿರ ಮತಗಳ ಅಂತರದಿಂದ ಸಂಗಮೇಶ್ವರ್ ಗೆಲುವು: ಬಿ.ಕೆ. ಮೋಹನ್ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ್ #BKSangameshwar ರವರು ಈ ಭಾರಿ ನಡೆಯುವ ಚುನಾವಣೆಯಲ್ಲಿ ಸುಮಾರು 30 ರಿಂದ 35 ಸಾವಿರ ಮತಗಳ ಅಂತರದಿಂದ ಗೆಲುವು ನಿಶ್ಚಿತ ಎಂದು ಶಾಸಕರ ಸಹೋದರ ಹಾಗೂ ನಗರಸಭಾ ಸದಸ್ಯ ಬಿ.ಕೆ. ಮೋಹನ್ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಚುನಾವಣೆಯಲ್ಲಿ ಪಕ್ಷದ ಪ್ರಚಾರದ ಮಾಹಿತಿಯನ್ನು ನೀಡಿ ಶಾಸಕರ ಐದು ವರ್ಷದ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಪುಸ್ತಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು.

ಚುನಾವಣೆ ನಮಗೆ ಹೊಸದಲ್ಲ. ಕಳೆದ ಭಾರಿ ಶಾಸಕರಾಗಿ ಆಯ್ಕೆಯಾದಾಗಿನಿಂದ ನಾವು ಜನರ ಮಧ್ಯೆ ಇದ್ದು ಅವರ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದೇವೆ. ಎಲ್ಲದಕ್ಕಿಂತ ಬಹು ಮುಖ್ಯವಾಗಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಾಗಿದೆ. ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟಾಗಿಲ್ಲ. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಎಂದೂ ಅವಕಾಶ ನೀಡಲ್ಲ. ಇದರ ಫಲ ಜೆಡಿಎಸ್ #JDS ಹಾಗೂ ಬಿಜೆಪಿ #BJP ಪಕ್ಷದಿಂದ ಸಾವಿರಾರು ಕಾರ್ಯಕರ್ತರುಗಳು ಕಾಂಗ್ರೆಸ್ ಪಕ್ಷದ ನೀತಿ ಸಿದ್ದಾಂತಗಳನ್ನು ಮೆಚ್ಚಿ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದರು.
ಚುನಾವಣೆಗೂ ಮೊದಲು 42 ಕೋಟಿ ರೂ. ವೆಚ್ಚದಲ್ಲಿ ಸುಮಾರು 110 ಕ್ಕೂ ಹೆಚ್ಚು ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಗೆ ಸರ್ಕಾರದ ಮಂಜೂರಾತಿ ದೊರೆತಿದೆ. ಇದು ಕ್ಷೇತ್ರದ ರೈತರ ಪಾಲಿಗೆ ವರದಾನವಾಗಲಿದೆ ಎಂದರು.

ನಗರಾಧ್ಯಕ್ಷ ಹಾಗೂ ನ್ಯಾಯವಾದಿ ಟಿ. ಚಂದ್ರೇಗೌಡ ಮಾತನಾಡಿ, ಶಾಸಕರು ಐದು ವರ್ಷದಲ್ಲಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ಮಾಡಲಾಗುತ್ತಿದೆ. ಈಗಾಗಲೇ ನಗರದ ಎಲ್ಲಾ 35 ವಾರ್ಡ್’ಗಳಲ್ಲಿ ಒಂದು ಸುತ್ತಿನ ಪ್ರಚಾರವನ್ನು ಮಾಡಲಾಗಿದ್ದು ಮತದಾರರಿಂದ ಉತ್ತಮವಾದ ಪ್ರತಿಕ್ರಿಯೆ ದೊರೆಯುತ್ತಿದೆ ಎಂದರು.

ಮುಂದಿನ ತಿಂಗಳಿನಲ್ಲಿ ಕಾಂಗ್ರೆಸ್ ನಾಯಕರುಗಳಾದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಇತರ ನಾಯಕರುಗಳು ಚುನಾವಣಾ ಪ್ರಚಾರಕ್ಕೆ ಆಗಮಿಸುವ ನಿರೀಕ್ಷೆ ಇದೆ. ಅದಕ್ಕೆ ಪೂರ್ವ ಭಾವಿ ಸಿದ್ದತೆಗಳನ್ನು ಮಾಡಲಾಗುತ್ತಿದೆ ಎಂದರು.

ನಗರದ ಎಂಪಿಎಂ ಹಾಗೂ ವಿಐಎಸ್’ಎಲ್ ಅವಳಿ ಕಾರ್ಖಾನೆಗಳ ಬಗ್ಗೆ ಬಿಜೆಪಿ ಯವರು ಕಾರ್ಮಿಕರ ಬದುಕಿನ ಬಗ್ಗೆ ಚಲ್ಲಾಟವಾಡಿದ್ದು, ಇದಕ್ಕೆ ಈ ಬಾರಿ ಚುನಾವಣೆಯಲ್ಲಿ ತಕ್ಕ ಪಾಠವನ್ನು ಮತದಾರರು ಕಲಿಸಲಿದ್ದಾರೆ ಎಂದರು.
ರಾಷ್ಟ್ರ ಯುವ ಕಾಂಗ್ರೆಸ್ ಅಧ್ಯಕ್ಷ ಭದ್ರಾವತಿ ಮೂಲದ ಬಿ.ವಿ. ಶ್ರೀನಿವಾಸ್ ರವರ ಮೇಲೆ ಅಸ್ಸಾಂ ನ ಯುವ ಕಾಂಗೈ ಘಟಕದ ಅಧ್ಯಕ್ಷೆ ಅಂಕಿತಾ ದತ್ತಾ ಅಲ್ಲಿನ ಸಿಎಂ ರವರ ಕುಮ್ಮಕ್ಕಿನಿಂದ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿದ್ದು ಇದರ ಬಗ್ಗೆ ಪಕ್ಷವು ಸಮರ್ಥವಾಗಿ ಉತ್ತರ ನೀಡುತ್ತದೆ ಎಂದರು.

ಗ್ರಾಮಾಂತರ ಅಧ್ಯಕ್ಷ ಎಚ್.ಎಲ್. ಷಡಾಕ್ಷರಿ ಮಾತನಾಡಿ, ಕಳೆದ ಭಾರಿ ಶಾಸಕರಾಗಿ ಚುನಾಯಿತರಾದ ನಂತರ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಜನರ ಒಲವುಗಳಿಸಲಾಗಿದೆ. ಅವರು ಐದು ಭಾರಿ ಸ್ಪರ್ಧಿಸಿದ್ದು ಮೂರು ಬಾರಿ ಗೆದ್ದಿದ್ದು, ಎರಡು ಭಾರಿ ಸೋತಿದ್ದಾರೆ. ಈ ಭಾರಿ ಗೆಲುವು ಸಾಧಿಸುವ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ನೂತನ ಸರ್ಕಾರದಲ್ಲಿ ತಮ್ಮ ಸಹೋದರ ಸಂಗಮೇಶ್ವರ್ ಮಂತ್ರಿ ಆಗುವುದು ನಿಶ್ಚಿತ. ಇದರಿಂದ ಭದ್ರಾವತಿ ಅಭಿವೃಧ್ಧಿ ಕಾರ್ಯಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಆಗುತ್ತದೆ ಎಂದರು.

ಲಿಂಗಾಯಿತ ಸಮುದಾಯದ ಬಗ್ಗೆ ಕಾಂಗ್ರೆಸ್’ನವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿರುವ ಬಗ್ಗೆ ಪಕ್ಷದ ಮುಖಂಡರುಗಳು ತೀವ್ರವಾಗಿ ಆಕ್ಷೇಪಿಸಿ ಇದು ಬಿಜೆಪಿಗೆ ತಿರುಗು ಬಾಣವಾಗುವುದರಲ್ಲಿ ಯಾವುದೆ ಅನುಮಾನ ಇಲ್ಲ. ಕಾರಣ ಅವರ ಪಕ್ಷದ ಸಿಎಂ ಯಡಿಯೂರಪ್ಪ ನವರನ್ನು ಹೀನಾಯಮಾನವಾಗಿ ಅಧಿಕಾರದಿಂದ ಕೆಳಗಿಳಿಸಿದ್ದಾರೆ. ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಪಕ್ಷವನ್ನು ತೊರೆದಿರುವುದು ಲಿಂಗಾಯಿತ ಸಮುದಾಯವು ಆಕ್ರೋಶಗೊಂಡಿದೆ. ಇದರ ತಪ್ಪನ್ನು ಮುಚ್ಚಿಕೊಳ್ಳುವುದಕ್ಕಾಗಿ ಸುಖಾ ಸುಮ್ಮನೆ ಕಾಂಗೈ ಪಕ್ಷದೆ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು ಸ್ಪಷ್ಟನೆ ನೀಡಿದರು.

ನಗರಸಭಾ ಅಧ್ಯಕ್ಷೆ ಅನುಸುಧಾ ಮೋಹನ್, ಉಪಾಧ್ಯಕ್ಷೆ ಸರ್ವಮಂಗಳಮ್ಮ, ಬಿ.ಟಿ. ನಾಗರಾಜ್, ಪೀರ್ ಫರೀಫ್, ಅಂತೋಣಿ ವಿಲ್ಸ್ನ್, ಬಲ್ಕೀಶ್ ಭಾನು, ಲತಾ ಚಂದ್ರಶೇಖರ್, ಕಾಂತರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023B K SangameshwarBhadravathicongressKannada News WebsiteKarnataka Election 2023Latest News KannadaLocal NewsMalnad NewsShimogaShivamoggaShivamogga Newsಕಾಂಗ್ರೆಸ್ಬಿ.ಕೆ.ಸಂಗಮೇಶ್ವರ್ಭದ್ರಾವತಿ
Share197Tweet123Send
Previous Post

ರಾಜ್ಯದಲ್ಲಿ ಕಳ್ಳರ ಕಾಟವಿದೆ ಎಚ್ಚರ: ಮಲ್ಲಿಕಾರ್ಜುನ ಖರ್ಗೆ ಹೀಗೆ ಹೇಳಿದ್ದೇಕೆ?

Next Post

ಅಪಾಯಕಾರಿ ವ್ಹೀಲಿಂಗ್: ಯುವಕನನ್ನು ಪತ್ತೆ ಮಾಡಿ ದಂಡ ವಿಧಿಸಿದ ಪೊಲೀಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪಾಯಕಾರಿ ವ್ಹೀಲಿಂಗ್: ಯುವಕನನ್ನು ಪತ್ತೆ ಮಾಡಿ ದಂಡ ವಿಧಿಸಿದ ಪೊಲೀಸರು

ಅಪಾಯಕಾರಿ ವ್ಹೀಲಿಂಗ್: ಯುವಕನನ್ನು ಪತ್ತೆ ಮಾಡಿ ದಂಡ ವಿಧಿಸಿದ ಪೊಲೀಸರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL