ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕು ವಕೀಲರ ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ.ಎನ್. ಶ್ರೀಹರ್ಷ, ಉಪಾಧ್ಯಕ್ಷರಾಗಿ ಡಿ.ಎಂ. ವಿಶ್ವನಾಥ್, ಕಾರ್ಯದರ್ಶಿಯಾಗಿ ಉದಯಕುಮಾರ್ ಆಯ್ಕೆಯಾಗಿದ್ದಾರೆ.
ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದಲ್ಲಿ ನಡೆದ ದ್ವೈ ವಾರ್ಷಿಕ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಕ್ಕೆ ಸಂಘದ 185 ಸದಸ್ಯರ ಪೈಕಿ 178 ಜನ ಮತಚಲಾಯಿಸಿದ್ದರು.
ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿ.ಸಿ. ಕೇಶವಮೂರ್ತಿ 80 ಮತ ಮತ್ತು ಕೆ.ಎನ್. ಶ್ರೀಹರ್ಷ 98 ಮತಗಳನ್ನು ಪಡೆದು ಅಂತಿಮವಾಗಿ ತಮ್ಮ ಪ್ರತಿಸ್ಪರ್ಧಿ ಬಿ.ಸಿ. ಕೇಶವಮೂರ್ತಿ ಗಿಂತ 18 ಮತಗಳನ್ನು ಆಧಿಕವಾಗಿ ಗಳಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷ ಸ್ಥಾನಕ್ಕೆ ಡಿ.ಎಂ. ವಿಶ್ವನಾಥ್ 128 ಮತಗಳನ್ನು ಪಡೆದು ಆಯ್ಕೆಯಾಗಿದ್ದು, ಅವರ ಪ್ರತಿಸ್ಪರ್ಧಿ ಆರ್.ಎಸ್. ಶೋಭ 50 ಮತಗಳನ್ನು ಗಳಿಸಿ ಪರಾಭವ ಗೊಂಡಿದ್ದಾರೆ.
ಕಾರ್ಯದರ್ಶಿ ಸ್ಥಾನಕ್ಕೆ ಉದಯಕುಮಾರ್ 96 ಮತಗಳನ್ನು ಪಡೆದು ಆಯ್ಕೆಯಾಗಿದ್ದು, ಅವರ ಪ್ರತಿಸ್ಪರ್ಧಿ ಕೆ. ರಾಜೇಶ್ 82 ಮತಗಳನ್ನು ಗಳಿಸಿ ಪರಾಭವಗೊಂಡಿದ್ದಾರೆ.
ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಮಂಜಪ್ಪ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದು ನೂತನವಾಗಿ ಆಯ್ಕೆ ಆಗಿರುವ ಪದಾಧಿಕಾರಿಗಳ ಕಾರ್ಯಾವಧಿ ಮುಂದಿನ ಎರಡು ವರ್ಷಗಳವರೆಗೆ ಇರುತ್ತದೆ.
ನ್ಯಾಯವಾದಿಗಳಾದ ಸೈಯದ್ನಿಯಾಜ್, ಉಮಾಶಂಕರ್, ಕೂಡ್ಲಿಗೆರೆ ಮಂಜುನಾಥ್ ಅವರುಗಳು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post