ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ನಗರಸಭೆ ಅಧ್ಯಕ್ಷೆಯಾಗಿ 35ನೇ ವಾರ್ಡ್ ಕಾಂಗ್ರೆಸ್ ಸದಸ್ಯೆ ಶೃತಿ ವಸಂತಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯೆ ಶೃತಿ ವಸಂತಕುಮಾರ್ ಅವಿರೋಧ ಆಯ್ಕೆಯಾಗಿದ್ದು, ಉಪವಿಭಾಗಾಧಿಕಾರಿ ರವಿಚಂದ್ರನಾಯಕ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್, ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್, ಪೌರಾಯುಕ್ತ ಮನುಕುಮಾರ್ ಉಪಸ್ಥಿತರಿದ್ದರು.
Also read: Shah confident of BJP storming back to power in Rajasthan; Modi PM for the third-term
ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಶೃತಿ ವಸಂತಕುಮಾರ್ರವರನ್ನು ನಗರಸಭೆ ಬಹುತೇಕ ಸದಸ್ಯರು ಅಭಿನಂದಿಸಿದರು. ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಂಡು ಅವಿರೋಧ ಆಯ್ಕೆ ಘೋಷಿಸಿದ ತಕ್ಷಣ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಅಧಿಕಾರ ಹಂಚಿಕೆ :
35 ಸದಸ್ಯ ಬಲ ಹೊಂದಿರುವ ನಗರಸಭೆ ಆಡಳಿತ ಚುಕ್ಕಾಣಿ ಕಾಂಗ್ರೆಸ್ ಪಕ್ಷ ಹಿಡಿದಿದ್ದು, 30 ತಿಂಗಳ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗು ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದೆ. 30 ತಿಂಗಳ ಅವಧಿಯಲ್ಲಿ ಮೀಸಲಾತಿ ಹೊಂದಿರುವ ಎಲ್ಲಾ ಸದಸ್ಯರಿಗೆ ಅಧಿಕಾರ ಲಭಿಸಬೇಕೆಂಬ ಉದ್ದೇಶದೊಂದಿಗೆ ಒಪ್ಪಂದ ಪ್ರಕಾರ ಅಧಿಕಾರ ಹಂಚಿಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಗೀತಾ ರಾಜ್ಕುಮಾರ್ ಮತ್ತು ಅನುಸುಧಾ ಮೋಹನ್ ಪಳನಿ ಅಧ್ಯಕ್ಷರಾಗಿ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಅಧಿಕಾರಾವಧಿ ಪೂರೈಸಿದ್ದು, ಪ್ರಸ್ತುತ ಸರ್ವಮಂಗಳ ಭೈರಪ್ಪ ಉಪಾಧ್ಯಕ್ಷರಾಗಿ ಹಾಗು ಶೃತಿ ವಸಂತಕುಮಾರ್ ಅಧ್ಯಕ್ಷರಾಗಿದ್ದಾರೆ ಆಯ್ಕೆಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post