Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ದೇಶದ ರಕ್ಷಣೆಗೆ ಸೈನಿಕ-ನಗರದ ಸ್ವಚ್ಚತೆಗೆ ಪೌರಕಾರ್ಮಿಕ: ಭದ್ರಾವತಿ ಶಾಸಕ ಸಂಗಮೇಶ್ವರ್

ಪೌರ ಕಾರ್ಮಿಕರ ದಿನಾಚರಣೆ, ಹಿರಿಯ ಪೌರ ಕಾರ್ಮಿಕರಿಗೆ ಸನ್ಮಾನ, ಖ್ಯಾತ ವೈದ್ಯೆ ಡಾ.ವೀಣಾ ಭಟ್ ಉಪನ್ಯಾಸ

September 23, 2019
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ದೇಶದ ರಕ್ಷಣೆಗೆ ಸೈನಿಕ ಹಗಲಿರುಳು ಸೇವೆ ಸಲ್ಲಿಸಿದ ರೀತಿಯಲ್ಲಿ ನಗರದ ಸ್ವಚ್ಚತೆಗೆ ಪೌರಕಾರ್ಮಿಕರು ಶ್ರಮಿಸುತ್ತಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.

ಅವರು ಸೋಮವಾರ ನಗರದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಗರಸಭೆ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನರ ಸೇವೆ ಮಾಡುತ್ತಾ ನಗರವನ್ನು ಸ್ವಚ್ಚತೆ, ನೈರ್ಮಲ್ಯ ಸ್ವಾಸ್ಥ್ಯ ಕಾಪಾಡುವಲ್ಲಿ ಪೌರಕಾರ್ಮಿಕರು ಕಠಿಣ ಶ್ರಮಕ್ಕೆ ಮುಂದಾಗಿದ್ದಾರೆ. ಇವರ ಸೇವೆ ನಿಜಕ್ಕೂ ಶ್ಲಾಘನೀಯ. ಕಾರ್ಮಿಕರು ಸ್ವಾಭಿಮಾನದಿಂದ ಬದುಕು ರೂಪಿಸಿಕೊಳ್ಳಲು ದುಶ್ಚಟಗಳಿಂದ ದೂರವಾಗಿ ಕುಟುಂಬದಲ್ಲಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಬೇಕಿದೆ. ನಿಸ್ವಾರ್ಥ ಸೇವೆ ಸಲ್ಲಿಸುವ ಪೌರ ಕಾರ್ಮಿಕರಿಗೆ ಗೌರವದಿಂದ ಕಾಣುವಂತಾಗಬೇಕು. ಇಂದಿನ ದಿನಗಳಲ್ಲಿ ಅವರ ಬದುಕು ಸಾಕಷ್ಟು ಬದಲಾವಣೆಯಾಗಿರುವುದು ಕಂಡು ಬರುತ್ತಿದೆ. ಪರಿಪೂರ್ಣ ಬದಲಾವಣೆಗೊಂಡು ಆರೋಗ್ಯದೆಡೆ ಹೆಚ್ಚು ಗಮನ ಹರಿಸುವ ಮೂಲಕ ಸುಂದರ ಬದುಕು ರೂಪಿಸಿಕೊಳ್ಳಬೇಕು. ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಚಾಚು ತಪ್ಪದೆ ಒದಗಿಸಿಕೊಡಲು ಬದ್ದರಾಗಿದ್ದೇವೆ ಎಂದರು.

ಹಿರಿಯ ಪೌರ ಕಾರ್ಮಿಕರಿಗೆ ಸನ್ಮಾನ

ಖ್ಯಾತ ವೈದ್ಯೆ ಡಾ.ವೀಣಾ ಭಟ್ ಉಪನ್ಯಾಸ ನೀಡಿ, ಪರಿಸರ ಸ್ವಚ್ಚತೆಯಿಂದ ಮಾತ್ರ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಇಂತಹ ಕಾರ್ಯಗಳನ್ನು ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ನಗರದ ಸ್ವಚ್ಚತೆಯನ್ನು ಚಾಚು ತಪ್ಪದೆ ಮಾಡುತ್ತಿರುವುದರಿಂದ ಇಂದು ಎಲ್ಲೆಡೆ ಉತ್ತಮ ಪರಿಸರ ಕಾಣಲು ಸಾಧ್ಯವಾಗಿದೆ. ಮನುಷ್ಯನ ಹಣದ ದುರಾಸೆಯಿಂದ ಪ್ಲಾಸ್ಟಿಕ್ ಎಂಬ ಬಸ್ಮಾಸುರ ವ್ಯಾಪಿಸಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಾಗಿದೆ.
ಪೌರ ಕಾರ್ಮಿಕರು ಆರೋಗ್ಯದೃಷ್ಟಿಯಿಂದ ಇಲಾಖೆ ನೀಡುವ ರಕ್ಷಾಕವಚಗಳನ್ನು ಧರಿಸಿ ಕಾರ್ಯಪ್ರವೃತ್ತರಾಗಬೇಕು. ಮದ್ಯ ಸೇವನೆ, ತಂಬಾಕು ಮುಂತಾದ ದುಶ್ಚಟಗಳಿಂದ ದೂರವಾಗಿ ಸಕಾಲದಲ್ಲಿ ಚುಚ್ಚುಮದ್ದು ಹಾಗು ಔಷಧಿಗಳನ್ನು ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಕಂದಾಯಾಧಿಕಾರಿ ಎಂ.ಎಸ್.ರಾಜಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ನಗರವನ್ನು ಸ್ವಚ್ಚತೆ ಮಾಡುವ ಮೂಲಕ ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ದೇಶದ ಮೊದಲ ವೈದ್ಯರಾಗಿದ್ದಾರೆ. ನಗರಸಭೆಯಿಂದ ಶೇ. 24.1 ರ ಅನುಪಾತದಲ್ಲಿ ಪೌರ ಕಾರ್ಮಿಕರಿಗೆ ಸುರಕ್ಷಾ ಕವಚಗಳನ್ನು ನೀಡಲಾಗುತ್ತಿದೆ. ಎಲ್ಲಾ ಹುದ್ದೆಗಳಿಗೆ ನೀಡುವಂತೆ ಪೌರ ಕಾರ್ಮಿಕರಿಗೆ ಹೆಚ್ಚಿನ ವೇತನಕ್ಕೆ ಮನ್ನಣೆ ನೀಡುವಂತಾಗಬೇಕು ಎಂದರು.

ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಶಾಖಾಧ್ಯಕ್ಷ ಆರ್. ಕೃಷ್ಣಮೂರ್ತಿ ಮಾತನಾಡಿ ಕಾರ್ಮಿಕರ ಅನೇಕ ವರ್ಷಗಳ ಹೋರಾಟದಿಂದ ಪೌರ ಕಾರ್ಮಿಕರಿಗೆ ರಾಜ್ಯ ಸರಕಾರ ಪೌರಕಾರ್ಮಿಕರಿಗೆ ರಜೆ ಘೋಷಿಸಿ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲು ಮುಂದಾಗಿರುವುದು ಶ್ಲಾಘನೀಯ. ರಾಜ್ಯದಲ್ಲಿ ಇತರೆ ಸರಕಾರಿ ನೌಕರರಿಗೆ ನೀಡುವ ಮಾದರಿಯಲ್ಲಿ ಕೆಜಿಐಡಿ ಜಾರಿಗೆ ತಂದು ಏಕರೂಪ ಜಾರಿಗೆ ತರಬೇಕು. ರಾಜ್ಯದ ಎಲ್ಲಾ ಶಾಸಕರು ಒಗ್ಗೂಡಿ ಸಭೆಯಲ್ಲಿ ಪ್ರಸ್ತಾಪಿಸಿ ಜಾರಿಗೆ ತರಲು ಮುಂದಾಗಬೇಕೆಂದು ಒತ್ತಾಯಿಸಿದರು.

ಸಭೆಯ ಕಾರ್ಯಕ್ರಮಕ್ಕೂ ಮುನ್ನ ರಂಗಪ್ಪವೃತ್ತದಿಂದ ಮಾಧವಚಾರ್ ವೃತ್ತ, ಹಾಲಪ್ಪವೃತ್ತ, ಡಾ.ರಾಜಕುಮಾರ್ ರಸ್ತೆ, ಡಾ. ಅಂಬೇಡ್ಕರ್ ವೃತ್ತಕ್ಕೆ ಬೃಹತ್ ಮೆರವಣಿಗೆ ಮೂಲಕ ತೆರಳಿದರು. ಮೆರವಣಿಗೆಯಲ್ಲಿ ವಿವಿಧ ಕಲಾವಿದರ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನೂರಾರು ಪೌರ ಕಾರ್ಮಿಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ನಗರಸಭಾ ಪೌರಾಯುಕ್ತ ಮನೋಹರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಅಧಿಕಾರಿಗಳಾದ ಮಹಮದ್ ಅಲಿ, ರುದ್ರೇಗೌಡ, ಸುವಾಸಿನಿ, ಸುನಿತಾಕುಮಾರಿ, ರಾಘವೇಂದ್ರ, ರಂಗರಾಜ್ ಹಾಗು ಹಿರಿಯ ಪೌರ ಕಾರ್ಮಿಕರಾದ ನರಸಿಂಹ, ಆದಿಯಮ್ಮ ಮುಂತಾದವರಿದ್ದರು. ಸಿದ್ದರ ಅಂಧರ ಕೇಂದ್ರದ ವಿದ್ಯಾರ್ಥಿಗಳು ನಾಡಗೀತೆ ಹಾಗು ಪ್ರಾರ್ಥನೆ ನಡೆಸಿದರೆ, ಕಪಿಲ್‍ದೇವ್ ಸ್ವಾಗತಿಸಿ, ಪಿ.ಸಿ.ಪ್ರಸಾದ್ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ಪೌರ ಕಾರ್ಮಿಕರಿಗೆ ಹಾಗು ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiCivil Labor DayDr. Veena BhatKannada NewsMalnad NewsMLA B K Sangameshwaraಡಾ.ವೀಣಾ ಭಟ್ದೇಶ ರಕ್ಷಣೆಪೌರ ಕಾರ್ಮಿಕರ ದಿನಾಚರಣೆಪೌರಕಾರ್ಮಿಕಭದ್ರಾವತಿಶಾಸಕ ಬಿ.ಕೆ. ಸಂಗಮೇಶ್ವರ್
Previous Post

ಉಪ್ಪಾರ ಸಂಘದ ವಸತಿ ನಿಲಯದ ಊಟದ ವೆಚ್ಚಕ್ಕೆ 15 ಲಕ್ಷ ಅನುದಾನ: ಸಚಿವ ಈಶ್ವರಪ್ಪ

Next Post

ವಿಶ್ವದ ಇಬ್ಬರು ಬಲಿಷ್ಠ ನಾಯಕರನ್ನೇ ಕರೆದು ನಿಲ್ಲಿಸಿ, ಸೆಲ್ಫಿ ಕ್ಲಿಕ್ಕಿಸಿಕೊಂಡ ಆ ಬಾಲಕ ನಮ್ಮ ಉತ್ತರ ಕನ್ನಡದವನು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಶ್ವದ ಇಬ್ಬರು ಬಲಿಷ್ಠ ನಾಯಕರನ್ನೇ ಕರೆದು ನಿಲ್ಲಿಸಿ, ಸೆಲ್ಫಿ ಕ್ಲಿಕ್ಕಿಸಿಕೊಂಡ ಆ ಬಾಲಕ ನಮ್ಮ ಉತ್ತರ ಕನ್ನಡದವನು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!