No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ದೇಶದ ರಕ್ಷಣೆಗೆ ಸೈನಿಕ-ನಗರದ ಸ್ವಚ್ಚತೆಗೆ ಪೌರಕಾರ್ಮಿಕ: ಭದ್ರಾವತಿ ಶಾಸಕ ಸಂಗಮೇಶ್ವರ್

ಪೌರ ಕಾರ್ಮಿಕರ ದಿನಾಚರಣೆ, ಹಿರಿಯ ಪೌರ ಕಾರ್ಮಿಕರಿಗೆ ಸನ್ಮಾನ, ಖ್ಯಾತ ವೈದ್ಯೆ ಡಾ.ವೀಣಾ ಭಟ್ ಉಪನ್ಯಾಸ

kalpa News by kalpa News
September 23, 2019
in ಭದ್ರಾವತಿ
0
ದೇಶದ ರಕ್ಷಣೆಗೆ ಸೈನಿಕ-ನಗರದ ಸ್ವಚ್ಚತೆಗೆ ಪೌರಕಾರ್ಮಿಕ: ಭದ್ರಾವತಿ ಶಾಸಕ ಸಂಗಮೇಶ್ವರ್
Share on FacebookShare on TwitterShare on WhatsApp

ಭದ್ರಾವತಿ: ದೇಶದ ರಕ್ಷಣೆಗೆ ಸೈನಿಕ ಹಗಲಿರುಳು ಸೇವೆ ಸಲ್ಲಿಸಿದ ರೀತಿಯಲ್ಲಿ ನಗರದ ಸ್ವಚ್ಚತೆಗೆ ಪೌರಕಾರ್ಮಿಕರು ಶ್ರಮಿಸುತ್ತಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.

ಅವರು ಸೋಮವಾರ ನಗರದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಗರಸಭೆ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜನರ ಸೇವೆ ಮಾಡುತ್ತಾ ನಗರವನ್ನು ಸ್ವಚ್ಚತೆ, ನೈರ್ಮಲ್ಯ ಸ್ವಾಸ್ಥ್ಯ ಕಾಪಾಡುವಲ್ಲಿ ಪೌರಕಾರ್ಮಿಕರು ಕಠಿಣ ಶ್ರಮಕ್ಕೆ ಮುಂದಾಗಿದ್ದಾರೆ. ಇವರ ಸೇವೆ ನಿಜಕ್ಕೂ ಶ್ಲಾಘನೀಯ. ಕಾರ್ಮಿಕರು ಸ್ವಾಭಿಮಾನದಿಂದ ಬದುಕು ರೂಪಿಸಿಕೊಳ್ಳಲು ದುಶ್ಚಟಗಳಿಂದ ದೂರವಾಗಿ ಕುಟುಂಬದಲ್ಲಿ ಮಕ್ಕಳ ಭವಿಷ್ಯ ರೂಪಿಸಲು ಮುಂದಾಗಬೇಕಿದೆ. ನಿಸ್ವಾರ್ಥ ಸೇವೆ ಸಲ್ಲಿಸುವ ಪೌರ ಕಾರ್ಮಿಕರಿಗೆ ಗೌರವದಿಂದ ಕಾಣುವಂತಾಗಬೇಕು. ಇಂದಿನ ದಿನಗಳಲ್ಲಿ ಅವರ ಬದುಕು ಸಾಕಷ್ಟು ಬದಲಾವಣೆಯಾಗಿರುವುದು ಕಂಡು ಬರುತ್ತಿದೆ. ಪರಿಪೂರ್ಣ ಬದಲಾವಣೆಗೊಂಡು ಆರೋಗ್ಯದೆಡೆ ಹೆಚ್ಚು ಗಮನ ಹರಿಸುವ ಮೂಲಕ ಸುಂದರ ಬದುಕು ರೂಪಿಸಿಕೊಳ್ಳಬೇಕು. ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಚಾಚು ತಪ್ಪದೆ ಒದಗಿಸಿಕೊಡಲು ಬದ್ದರಾಗಿದ್ದೇವೆ ಎಂದರು.

ಹಿರಿಯ ಪೌರ ಕಾರ್ಮಿಕರಿಗೆ ಸನ್ಮಾನ

ಖ್ಯಾತ ವೈದ್ಯೆ ಡಾ.ವೀಣಾ ಭಟ್ ಉಪನ್ಯಾಸ ನೀಡಿ, ಪರಿಸರ ಸ್ವಚ್ಚತೆಯಿಂದ ಮಾತ್ರ ಉತ್ತಮ ಆರೋಗ್ಯ ಪಡೆಯಲು ಸಾಧ್ಯ. ಇಂತಹ ಕಾರ್ಯಗಳನ್ನು ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ ನಗರದ ಸ್ವಚ್ಚತೆಯನ್ನು ಚಾಚು ತಪ್ಪದೆ ಮಾಡುತ್ತಿರುವುದರಿಂದ ಇಂದು ಎಲ್ಲೆಡೆ ಉತ್ತಮ ಪರಿಸರ ಕಾಣಲು ಸಾಧ್ಯವಾಗಿದೆ. ಮನುಷ್ಯನ ಹಣದ ದುರಾಸೆಯಿಂದ ಪ್ಲಾಸ್ಟಿಕ್ ಎಂಬ ಬಸ್ಮಾಸುರ ವ್ಯಾಪಿಸಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಾಗಿದೆ.
ಪೌರ ಕಾರ್ಮಿಕರು ಆರೋಗ್ಯದೃಷ್ಟಿಯಿಂದ ಇಲಾಖೆ ನೀಡುವ ರಕ್ಷಾಕವಚಗಳನ್ನು ಧರಿಸಿ ಕಾರ್ಯಪ್ರವೃತ್ತರಾಗಬೇಕು. ಮದ್ಯ ಸೇವನೆ, ತಂಬಾಕು ಮುಂತಾದ ದುಶ್ಚಟಗಳಿಂದ ದೂರವಾಗಿ ಸಕಾಲದಲ್ಲಿ ಚುಚ್ಚುಮದ್ದು ಹಾಗು ಔಷಧಿಗಳನ್ನು ಸೇವಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಕಂದಾಯಾಧಿಕಾರಿ ಎಂ.ಎಸ್.ರಾಜಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿ, ನಗರವನ್ನು ಸ್ವಚ್ಚತೆ ಮಾಡುವ ಮೂಲಕ ಎಲ್ಲರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರು ದೇಶದ ಮೊದಲ ವೈದ್ಯರಾಗಿದ್ದಾರೆ. ನಗರಸಭೆಯಿಂದ ಶೇ. 24.1 ರ ಅನುಪಾತದಲ್ಲಿ ಪೌರ ಕಾರ್ಮಿಕರಿಗೆ ಸುರಕ್ಷಾ ಕವಚಗಳನ್ನು ನೀಡಲಾಗುತ್ತಿದೆ. ಎಲ್ಲಾ ಹುದ್ದೆಗಳಿಗೆ ನೀಡುವಂತೆ ಪೌರ ಕಾರ್ಮಿಕರಿಗೆ ಹೆಚ್ಚಿನ ವೇತನಕ್ಕೆ ಮನ್ನಣೆ ನೀಡುವಂತಾಗಬೇಕು ಎಂದರು.

ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಶಾಖಾಧ್ಯಕ್ಷ ಆರ್. ಕೃಷ್ಣಮೂರ್ತಿ ಮಾತನಾಡಿ ಕಾರ್ಮಿಕರ ಅನೇಕ ವರ್ಷಗಳ ಹೋರಾಟದಿಂದ ಪೌರ ಕಾರ್ಮಿಕರಿಗೆ ರಾಜ್ಯ ಸರಕಾರ ಪೌರಕಾರ್ಮಿಕರಿಗೆ ರಜೆ ಘೋಷಿಸಿ ಪೌರ ಕಾರ್ಮಿಕರ ದಿನಾಚರಣೆ ಆಚರಿಸಲು ಮುಂದಾಗಿರುವುದು ಶ್ಲಾಘನೀಯ. ರಾಜ್ಯದಲ್ಲಿ ಇತರೆ ಸರಕಾರಿ ನೌಕರರಿಗೆ ನೀಡುವ ಮಾದರಿಯಲ್ಲಿ ಕೆಜಿಐಡಿ ಜಾರಿಗೆ ತಂದು ಏಕರೂಪ ಜಾರಿಗೆ ತರಬೇಕು. ರಾಜ್ಯದ ಎಲ್ಲಾ ಶಾಸಕರು ಒಗ್ಗೂಡಿ ಸಭೆಯಲ್ಲಿ ಪ್ರಸ್ತಾಪಿಸಿ ಜಾರಿಗೆ ತರಲು ಮುಂದಾಗಬೇಕೆಂದು ಒತ್ತಾಯಿಸಿದರು.

ಸಭೆಯ ಕಾರ್ಯಕ್ರಮಕ್ಕೂ ಮುನ್ನ ರಂಗಪ್ಪವೃತ್ತದಿಂದ ಮಾಧವಚಾರ್ ವೃತ್ತ, ಹಾಲಪ್ಪವೃತ್ತ, ಡಾ.ರಾಜಕುಮಾರ್ ರಸ್ತೆ, ಡಾ. ಅಂಬೇಡ್ಕರ್ ವೃತ್ತಕ್ಕೆ ಬೃಹತ್ ಮೆರವಣಿಗೆ ಮೂಲಕ ತೆರಳಿದರು. ಮೆರವಣಿಗೆಯಲ್ಲಿ ವಿವಿಧ ಕಲಾವಿದರ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನೂರಾರು ಪೌರ ಕಾರ್ಮಿಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ನಗರಸಭಾ ಪೌರಾಯುಕ್ತ ಮನೋಹರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಅಧಿಕಾರಿಗಳಾದ ಮಹಮದ್ ಅಲಿ, ರುದ್ರೇಗೌಡ, ಸುವಾಸಿನಿ, ಸುನಿತಾಕುಮಾರಿ, ರಾಘವೇಂದ್ರ, ರಂಗರಾಜ್ ಹಾಗು ಹಿರಿಯ ಪೌರ ಕಾರ್ಮಿಕರಾದ ನರಸಿಂಹ, ಆದಿಯಮ್ಮ ಮುಂತಾದವರಿದ್ದರು. ಸಿದ್ದರ ಅಂಧರ ಕೇಂದ್ರದ ವಿದ್ಯಾರ್ಥಿಗಳು ನಾಡಗೀತೆ ಹಾಗು ಪ್ರಾರ್ಥನೆ ನಡೆಸಿದರೆ, ಕಪಿಲ್‍ದೇವ್ ಸ್ವಾಗತಿಸಿ, ಪಿ.ಸಿ.ಪ್ರಸಾದ್ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ವಿಜೇತರಾದ ಪೌರ ಕಾರ್ಮಿಕರಿಗೆ ಹಾಗು ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಿ ಗೌರವಿಸಲಾಯಿತು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiCivil Labor DayDr. Veena BhatKannada NewsMalnad NewsMLA B K Sangameshwaraಡಾ.ವೀಣಾ ಭಟ್ದೇಶ ರಕ್ಷಣೆಪೌರ ಕಾರ್ಮಿಕರ ದಿನಾಚರಣೆಪೌರಕಾರ್ಮಿಕಭದ್ರಾವತಿಶಾಸಕ ಬಿ.ಕೆ. ಸಂಗಮೇಶ್ವರ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉಪ್ಪಾರ ಸಂಘದ ವಸತಿ ನಿಲಯದ ಊಟದ ವೆಚ್ಚಕ್ಕೆ 15 ಲಕ್ಷ ಅನುದಾನ: ಸಚಿವ ಈಶ್ವರಪ್ಪ

Next Post

ವಿಶ್ವದ ಇಬ್ಬರು ಬಲಿಷ್ಠ ನಾಯಕರನ್ನೇ ಕರೆದು ನಿಲ್ಲಿಸಿ, ಸೆಲ್ಫಿ ಕ್ಲಿಕ್ಕಿಸಿಕೊಂಡ ಆ ಬಾಲಕ ನಮ್ಮ ಉತ್ತರ ಕನ್ನಡದವನು

kalpa News

kalpa News

Next Post
ವಿಶ್ವದ ಇಬ್ಬರು ಬಲಿಷ್ಠ ನಾಯಕರನ್ನೇ ಕರೆದು ನಿಲ್ಲಿಸಿ, ಸೆಲ್ಫಿ ಕ್ಲಿಕ್ಕಿಸಿಕೊಂಡ ಆ ಬಾಲಕ ನಮ್ಮ ಉತ್ತರ ಕನ್ನಡದವನು

ವಿಶ್ವದ ಇಬ್ಬರು ಬಲಿಷ್ಠ ನಾಯಕರನ್ನೇ ಕರೆದು ನಿಲ್ಲಿಸಿ, ಸೆಲ್ಫಿ ಕ್ಲಿಕ್ಕಿಸಿಕೊಂಡ ಆ ಬಾಲಕ ನಮ್ಮ ಉತ್ತರ ಕನ್ನಡದವನು

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL