ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಡೆದಾಡುವ ರಾಯರು ಎಂದೇ ಖ್ಯಾತರಾಗಿದ್ದ ಶ್ರೀ ಸುಶಮೀಂದ್ರ ಶ್ರೀಪಾದಂಗಳವರ ಆರಾಧನಾ ಮಹೋತ್ಸವವನ್ನು ಇಲ್ಲಿನ ನಂಜನಗೂರು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ಧೂರಿಯಾಗಿ ನೆರವೇರಿತು.
ಆರಾಧನೆಯ ಅಂಗವಾಗಿ ಭದ್ರಾವತಿಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ Bhadravathi Shri Raghavendra swamy mutt ಇಂದು ಬೆಳಗ್ಗೆ ಪಂಚಾಮೃತ ಅಭಿಷೇಕದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ, ಪಂಡಿತ ಭೀಮಾಚಾರ್ ಇವರಿಂದ ಶ್ರೀ ಸುಶಮೀಂದ್ರತೀರ್ಥ ಶ್ರೀಪಾದಂಗಳವರ ಬಗ್ಗೆ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಬಗ್ಗೆ ಪ್ರವಚನ ಕಾರ್ಯಕ್ರಮ ನೆರವೇರಿತು.
ನಂತರದಲ್ಲಿ ಶ್ರೀಮಠದ ಪ್ರಾಕಾರದಲ್ಲಿ ಸಮಸ್ತ ಭಕ್ತಾದಿಗಳ ಸಮಕ್ಷಮದಲ್ಲಿ ಶ್ರೀ ಸುಶಮೀಂದ್ರ ತೀರ್ಥರ ಭಾವಚಿತ್ರದ ರಥೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನೆರವೇರಿತು. ಅಷ್ಟಾವಧಾನ ಕಾರ್ಯಕ್ರಮ ಮತ್ತು ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಿತು.
Also read: ‘ವಿಜಯ ಪತಾಕೆ’ ಟೈಟಲ್ ಅನಾವರಣ…
ಈ ಕಾರ್ಯಕ್ರಮದಲ್ಲಿ ಶ್ರೀಮಠದ ವಿಚಾರಣಕರ್ತರಾದ ಶ್ರೀ ಶೇಷಗಿರಿ ಆಚಾರ್ ಮತ್ತು ಗೋಪಾಲಾಚಾರ್, ಶ್ರೀನಿವಾಸಾಚಾರ್ ಶ್ರೀ ಮಠದ ಪ್ರಧಾನ ಅರ್ಚಕರಾದ ಶ್ರೀ ಜಗನ್ನಾಥಾಚಾರ್, ವೆಂಕಟೇಶ ಜೈ ತೀರ್ಥ, ರಮಾಕಾಂತ್, ವೆಂಕಟೇಶ, ಬಿಜೆಪಿ ರಾಘಣ್ಣ, ವಾಸುದೇವಮೂರ್ತಿ ಇನ್ನಿತರ ಸಮಸ್ತ ಭಗವದ್ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post