ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ Hindi Divas day ಮೂಲಕ ದೇಶಾದ್ಯಂತ ಹಿಂದಿ ಭಾಷೆ ಕಡ್ಡಾಯಗೊಳಿಸುವ ಹುನ್ನಾರ ನಡೆಸುತ್ತಿದ್ದು, ಇದನ್ನು ಎಲ್ಲರೂ ಒಗ್ಗಟ್ಟಾಗಿ ವಿರೋಧಿಸಬೇಕೆಂದು ಜೆಡಿಎಸ್ ಪಕ್ಷದ ಮುಖಂಡರಾದ ಶಾರದ ಅಪ್ಪಾಜಿ Sharadha Appaji ಹೇಳಿದರು.
ಅವರು ಬುಧವಾರ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಬಲವಂತದ ಹಿಂದಿ ಹೇರಿಕೆ ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಅನಗತ್ಯವಾಗಿ ಹಿಂದಿ ದಿವಸ್ ಆಚರಣೆ ನಡೆಸುವ ಮೂಲಕ ಶ್ರೀಸಾಮಾನ್ಯರ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ತೊಡಗಿವೆ. ಹಲವಾರು ಸಮಸ್ಯೆಗಳಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗಮನ ಹರಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ. ಪಕ್ಷದ ವರಷ್ಠರ ಸೂಚನೆ ಮೇರೆಗೆ ಎಲ್ಲಾ ಜಿಲ್ಲಾ ಹಾಗು ತಾಲೂಕು ಕೇಂದ್ರಗಳಲ್ಲಿ ಇಂದು ಹೋರಾಟ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಇದೆ ರೀತಿ ಧೋರಣೆ ಮುಂದುವರೆಸಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪಕ್ಷದ ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ನಗರಸಭಾ ಸದಸ್ಯರಾದ ಬಸವರಾಜ ಬಿ. ಆನೇಕೊಪ್ಪ, ಪಲ್ಲವಿ ದಿಲೀಪ್, ಮಾಜಿ ಸದಸ್ಯರಾದ ಮುರ್ತುಜಾಖಾನ್, ಮೈಲಾರಪ್ಪ, ಆನಂದ್, ಎಚ್.ಬಿ ರವಿಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಜೆ.ಪಿ ಯೋಗೇಶ್, ಮುಖಂಡರಾದ ನಂಜುಂಡೇಗೌಡ ಸೇರಿದಂತೆ ಇನ್ನಿತರರು ಮಾತನಾಡಿ, ಕೇಂದ್ರ ಹಾಗು ರಾಜ್ಯ ಸರ್ಕಾರ ಹಿಂದಿ ದಿವಸ್ ಆಚರಣೆ ಮೂಲಕ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಿದೆ. ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳು ಅಧಿಕೃತವಾಗಿವೆ. ಬಲವಂತವಾಗಿ ಹಿಂದಿ ಹೇರಿಕೆ ಮೂಲಕ ದಬ್ಬಾಳಿಕೆ ನಡೆಸುತ್ತಿರುವುದು ಸರಿಯಲ್ಲ. ದೇಶಾದ್ಯಂತ ಹಿಂದಿ ದಿವಸ್ ಆಚರಣೆ ಜಾರಿಗೊಳಿಸುವುದನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ನಗರಸಭಾ ಸದಸ್ಯರಾದ ವಿಜಯ, ರೂಪಾವತಿ ಗುಣಶೇಖರ್, ರೇಖಾ ಪ್ರಕಾಶ್, ನಾಗರತ್ನ ಅನಿಲ್ಕುಮಾರ್, ಮಾಜಿ ಸದಸ್ಯರಾದ ವಿಶಾಲಾಕ್ಷಿ, ಎಂ. ರಾಜು, ಸಾವಿತ್ರಮ್ಮ ಪುಟ್ಟೇಗೌಡ, ಮುಖಂಡರಾದ ಎನ್. ರಾಮಕೃಷ್ಣ, ಉಮೇಶ್, ಸುಬ್ಬಣ್ಣ, ಭಾಗ್ಯಮ್ಮ, ಉಮೇಶ್ ಸುರಗಿತೋಪು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Also read: ಸೇನಾಪುರವನ್ನು ಗ್ರಾಮ ಪಂಚಾಯತ್ ಆಗಿ ಮಂಜೂರು ಮಾಡಿ: ಸಿಎಂಗೆ ಮನವಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















