ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿಯ ಹಳೆನಗರ ಶ್ರೀ ರಾಮೇಶ್ವರ-ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನ.29ರ ಮಂಗಳವಾರ ಸ್ಕಂದ ಷಷ್ಠಿ ನಿಮಿತ್ತ ಸುಬ್ರಹ್ಮಣ್ಯ ಷಷ್ಠೀ ಉತ್ಸವ ಹಮ್ಮಿಕೊಳ್ಳಲಾಗಿದೆ.
ವೇ.ಬ್ರ. ಕೃಷ್ಣಮೂರ್ತಿ ಸೋಮಯಾಜಿಯವರ ಪೌರೋಹಿತ್ಯದಲ್ಲಿ ಅಂದು ಬೆಳಿಗ್ಗೆ 7 ಗಂಟೆಗೆ ಶ್ರೀಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ಮಹನ್ಯಾಸ ಪೂರ್ವಕ ರುದ್ರಾಭಿಷೇಕ ನಂತರ ವಿಶೇಷ ಅಲಂಕಾರ ನಡೆಯಲಿದೆ.
9 ಗಂಟೆಗೆ ಶ್ರೀ ಸುಬ್ರಹ್ಮಣ್ಯ ಮೂಲಮಂತ್ರದಿಂದ ಹೋಮ ಹಾಗೂ 10 ಗಂಟೆಗೆ ರಾಜಬೀದಿ ಉತ್ಸವ ನಂತರ ಪೂರ್ಣಾಹುತಿ, ಬ್ರಹ್ಮಚಾರಿಗಳ ಪೂಜೆ ಮತ್ತು ಮಹಾಮಂಗಳಾತಿ ತೀರ್ಥ ಪ್ರಸಾದ ವಿನಿಯೋಗ ಜರುಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post