ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಕಾರೇಹಳ್ಳಿ ಗ್ರಾಮ ಪಂಚಾಯತಿಯಲ್ಲಿ ವಿಜೇತರಾಗಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಜಿ. ಮಮತಾ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಪಾರ್ವತಮ್ಮ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಇನ್ನು, ಅಂತರಗಂಗೆ ಗ್ರಾಮಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಸವಿತಾ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಶೋಭಾ ಅವರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಆಯ್ಕೆಯಾದ ಅಧ್ಯಕ್ಷರು, ಉಪಾಧ್ಯಕ್ಷರು ಪಂಚಾಯತಿ ಸದಸ್ಯರು ತಮ್ಮ ಗೃಹ ಕಚೇರಿಯಲ್ಲಿ ಶಾಸಕರು ಸಿಹಿ ಹಂಚುವ ಮೂಲಕ ಸಂತಸವನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಯುವ ಮುಖಂಡರಾದ ಗಣೇಶ್ ಹಾಗೂ ಕಾರೇಹಳ್ಳಿ ಪಂಚಾಯತಿ ಸದಸ್ಯರಾದ ವೆಂಕಟೇಶ್, ತಿಮ್ಮಯ್ಯ, ಯೋಗೇಶ್, ಅಂಬಿಕಾ, ಶಾಂತಿಬಾಯಿ ಹಾಗೂ ಕಾಂಗ್ರೆಸ್ ಮುಖಂಡರು ಗ್ರಾಮಸ್ಥರು, ಅಂತರಗಂಗೆ ಪಂಚಾಯತಿ ಸದಸ್ಯರಾದ ಬಿ. ನಾಗೇಶ್, ಜಿ. ಆನಂದಪ್ಪ, ಮಂಜುಳಾ, ಗೀತಾ, ರವಿಕುಮಾರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post