ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನಗಳು ಕಳ್ಳತನವಾಗಿರುವ ಘಟನೆ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದಿದೆ.
ಶಂಕರ್ ತಮ್ಮ ಮನೆಯ ಹಿಂಬದಿಯ ಕೊಟ್ಟಿಗೆಯಲ್ಲಿದ್ದ ದನಗಳಿಗೆ ರಾತ್ರಿ 11 ಗಂಟೆ ಸುಮಾರಿಗೆ ಮೇವು, ನೀರು ಕೊಟ್ಟು ಬಂದಿದ್ದು, ಬೆಳಗ್ಗೆ 5 ಗಂಟೆಗೆ ಎದ್ದು ನೋಡಿದಾಗ ಕೊಟ್ಟಿಗೆಯಲ್ಲಿ ದನಗಳು ಇರಲಿಲ್ಲ. ಗಾಬರಿಯಿಂದ ಎಲ್ಲೆಡೆ ಹುಡುಕಾಡಿದ್ದಾರೆ. ಗ್ರಾಮದ ಮಂಜುನಾಥ್ ಎಂಬುವವರ ತೋಟದಲ್ಲಿ ಎರಡು ದನಗಳನ್ನು ಕಟ್ಟಿಹಾಕಲಾಗಿತ್ತು. ಉಳಿದ ಎರಡು ದನಗಳು, ಒಂದು ಕರು ನಾಪತ್ತೆ ಯಾಗಿದೆ. ಎಲ್ಲೆಡೆ ಹುಡುಕಾಡಿದ ಶಂಕರ್ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ.
Also read: ಶಂಕಿತ ಉಗ್ರ ರಿಹಾನ್ ಶೇಖ್ ತಂದೆ ಕೈ ಮುಖಂಡರ ಆಪ್ತ ಹಿನ್ನೆಲೆ ಶಾಸಕ ರಘುಪತಿ ಭಟ್ ವಾಗ್ದಾಳಿ












Discussion about this post