ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್’ಎಲ್ VISL 105ನೆಯ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಗ್ರಾಮೀಣ ಶಿಕ್ಷಕರಿಗೆ ಕಂಪ್ಯೂಟರ್ ಹಾಗೂ ವೆಬ್’ಕ್ಯಾಮ್’ಗಳನ್ನು ಉಡುಗೊರೆಯನ್ನಾಗಿ ನೀಡಲಾಯಿತು.
105ನೆಯ ಸ್ಥಾಪನೆಯ ವರ್ಷದ ಅಂಗವಾಗಿ ಅತ್ಯುತ್ತಮ ಇಂಜಿನಿಯರ್, ರಾಜನೀತಿಜ್ಞ ಸರ್.ಎಂ. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ವಿಐಎಸ್’ಪಿಯ ಸಮುದಾಯವು ತಮ್ಮ ಗೌರವ ವಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದ ಸ್ಮರಣಾರ್ಥ ಎಸ್’ಎಐಎಲ್-ವಿಐಎಸ್’ಎಲ್ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆಯ ಭಾಗವಾಗಿ ಗ್ರಾಮೀಣ ಶಿಕ್ಷಕರಿಗೆ ತರಬೇತಿಗಾಗಿ ಒಂದು ಲಕ್ಷ ರೂಪಾಯಿ ಮೌಲ್ಯದ ಎರಡು ಕಂಪ್ಯೂಟರುಗಳು ಮತ್ತು ವೀಡಿಯೋ ವೆಬ್ಕ್ಯಾಮ್ಅನ್ನು ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಕೆ. ರವಿಕುಮಾರ್, ಎಜುಕೇಷನ್ ಕೋ-ಆರ್ಡಿನೇಟರ್ ಉಪಸ್ಥಿತರಿದ್ದರು.
Also read: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಆರಂಭವಾಗಿರುವ ಅಭಿಯಾನವೇನು? ಇಲ್ಲಿದೆ ಮಾಹಿತಿ
ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ, ಮುಖ್ಯ ಮಹಾಪ್ರಬಂಧಕರಾದ(ಸ್ಥಾವರ) ಕೆ.ಎಸ್. ಸುರೇಶ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್, ವಿಐಎಸ್’ಎಲ್ ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ವಿಐಎಸ್’ಎಲ್ ಅಧಿಕಾರಿಗಳ ಸಂಘದ ಅಧ್ಯಕ್ಷ ಸುಗಾಲಿ ಲೋಕನಾಥ್ ಅವರುಗಳು ವಿಐಎಸ್’ಎಲ್ ಆವರಣದಲ್ಲಿರುವ ಸರ್.ಎಂ. ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಆನಂತರ ವಿಐಎಸ್’ಎಲ್ ಅತಿಥಿಗೃಹದ ಮಾಹಿತಿ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ವಿಐಎಸ್’ಎಲ್’ನ ಸಿ ಅಂಡ್ ಐಟಿ ತಂಡವು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ್ದು, ಸಹಾಯಕ ಮಹಾಪ್ರಬಂಧಕರು (ಸಿ ಅಂಡ್ ಐಟಿ) ನಿತಿನ್ ಜೋಸ್ ನೇತೃತ್ವದ ಸಿಸ್ಟಂ ಸುಧಾರಣೆಯ ಪ್ರಕ್ರಿಯೆಯ ಭಾಗವಾಗಿ ಪ್ರಾರಂಭಿಸಲಾಗಿದೆ.
ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post