ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿರುವ ಹಿನ್ನೆಲೆ ಬೆಳಿಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ನಗರದಲ್ಲಿ ಬಹುತೇಕ ತರಕಾರಿ ಮತ್ತು ದಿನಸಿ ಅಂಗಡಿಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಜನ ಕಂಡುಬಂದಿತು.
ನಗರಸಭೆ ಅಧಿಕಾರಿಗಳು ಇಂದು ಬೆಳಿಗ್ಗೆ 8:30ರಿಂದಲೇ 10ಗಂಟೆಯ ಒಳಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಧ್ವನಿವರ್ಧಕದ ಮೂಲಕ ಬಹಿರಂಗಪಡಿಸುತ್ತಿದ್ದರು. ಹಾಗೂ 9:30ರಿಂದಲೇ ಪೊಲೀಸರು ಖುದ್ದು ರಸ್ತೆಗಿಳಿದು ಅಂಗಡಿಗಳನ್ನು ಮುಚ್ಚುವಂತೆ ಎಚ್ಚರಿಸುತ್ತಿದ್ದರೂ, 10:30ರವರೆಗೆ ವರ್ತಕರು ವ್ಯವಹಾರ ನಡೆಸುತ್ತಿದ್ದುದು ಸಾಮಾನ್ಯವಾಗಿತ್ತು. ತದನಂತರ ಒತ್ತಾಯಪೂರ್ವಕವಾಗಿ ಪೊಲೀಸರು ಅಂಗಡಿಗಳನ್ನು ಮುಚ್ಚಿಸಿದರು.
ಮೆಡಿಕಲ್ ಶಾಪ್ ಮತ್ತು ಆಸ್ಪತ್ರೆಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ವ್ಯಾಪಾರ, ವ್ಯವಹಾರಗಳು ಸ್ಥಗಿತಗೊಂಡಿತ್ತು. ಅಂಡರ್ ಬ್ರಿಡ್ಜ್, ರಂಗಪ್ಪ ಸರ್ಕಲ್ ಮತ್ತು ಬಸ್ಸ್ಟ್ಯಾಂಡ್ ಭಾಗದಲ್ಲಿ ರಸ್ತೆಗಳಿಗೆ ಬ್ಯಾರಿಕೇಡ್ಗಳನ್ನು ಅಡ್ಡಹಾಕಿ ಬಂದ್ ಮಾಡಲಾಗಿತ್ತು. ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡುತ್ತಿದ್ದ ವಾಹನ ಸವಾರರನ್ನು ಹೊರಗೆ ಬರದಂತೆ ಎಚ್ಚರಿಕೆ ನೀಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕರ್ಫ್ಯೂ ಸದುಪಯೋಗ:
ಕರ್ಫ್ಯೂ ಜಾರಿಯಲ್ಲಿರುವ ಹಿನ್ನೆಲೆ ಜನಸಂದಣಿ ಕಡಿಮೆ ಆಗಿರುವುದರಿಂದ ಹಳೆ ಸೇತುವೆ ಪಕ್ಕದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸೇತುವೆಯ ನಿರ್ಮಾಣ ಕಾರ್ಯ ನಡೆಸಿದರು. ಕ್ರೇನ್ ಬಳಸಿ ಕಾಮಗಾರಿ ಮಾಡುವ ಮೂಲಕ ವೀಕೆಂಡ್ ಕರ್ಫ್ಯೂವನ್ನು ಸದುಪಯೋಗಪಡಿಸಿಕೊಳ್ಳಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post