ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಐಎಸ್ಎಲ್ ಕಾರ್ಖಾನೆಯನ್ನು ಉಳಿಸಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ಮನವೊಲಿಸುವಂತೆ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರಿಗೆ ಕಾರ್ಮಿಕರು ಮನವಿ ಮಾಡಿದ್ದಾರೆ.
ನಾಗಮಂಗಲ ತಾಲೂಕಿನಲ್ಲಿರುವ ಶ್ರೀ ಮಠಕ್ಕೆ ತೆರಳಿದ ಕರ್ತವ್ಯನಿರತ ಕಾರ್ಮಿಕರು, ನಿವೃತ್ತ ಕಾರ್ಮಿಕರು ಹಾಗೂ ಗುತ್ತಿಗೆ ಕಾರ್ಮಿಕರ ಪ್ರಮುಖರು ಸ್ವಾಮೀಜಿಯವರನ್ನು ಭೇಟಿಯಾಗಿ ಈ ಕುರಿತಂತೆ ಮನವಿ ಸಲ್ಲಿಸಿದ್ದಾರೆ.

ದೇಶದ ಪ್ರಧಾನಿಗೆ ತನ್ನದೇ ಆದ ಕೊಡುಗೆ ನೀಡಿರುವ ಈ ಕಾರ್ಖಾನೆಯನ್ನು ನಂಬಿ ಲಕ್ಷಾಂತರ ಮಂದಿ ಬದುಕು ಕಟ್ಟಿಕೊಂಡಿದ್ದಾರೆ. ಹೀಗಾಗಿ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಟ್ಟು ಆಧುನಿಕ ತಂತ್ರಜ್ಞಾನ ಬಳಸಿ ಬಂಡವಾಳ ತೊಡಗಿಸಿ ಗತ ವೈಭವವನ್ನು ಮರುಕಳಿಸಬೇಕಿದೆ. ಈ ನಿಟ್ಟಿನಲ್ಲಿ ತಾವು ಪ್ರಧಾನಿಯವರ ಮನವೊಲಿಸುವ ಪ್ರಯತ್ನ ಮಾಡಬೇಕು ಎಂದು ವಿನಂತಿಸಿದರು.












Discussion about this post