No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಎಲ್ಲಾ ಧರ್ಮಗುರು, ಹಿರಿಯರಿಂದ ಯುವಕರ ನಿಯಂತ್ರಣ ಸಾಧ್ಯ: ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ

kalpa News by kalpa News
August 22, 2022
in ಭದ್ರಾವತಿ
0
ಎಲ್ಲಾ ಧರ್ಮಗುರು, ಹಿರಿಯರಿಂದ ಯುವಕರ ನಿಯಂತ್ರಣ ಸಾಧ್ಯ: ಶಾಂತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  |

ಡಿಜೆ ಬಳಸಲು ನಮಗೂ ಇಷ್ಟವಿದೆ ಆದರೆ ಸುಪ್ರೀಂ ಕೋರ್ಟ್ ಆದೇಶ ಎಲ್ಲರೂ ಪಾಲಿಸಬೇಕಾಗಿದೆ. ಹಿನ್ನೆಲೆಯಲ್ಲಿ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಮನವಿ ಮಾಡಿದರು.

ಅವರು ಸೋಮವಾರ ನಗರದ ನ್ಯೂಟೌನ್ ರೋಟರಿ ಕ್ಲಬ್ ಸಭಾಂಗಣದಲ್ಲಿ ಗೌರಿ-ಗಣೇಶ ಹಬ್ಬದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಡಿಜೆ ಅಂದರೆ ಎಲ್ಲರಿಗೂ ಇಷ್ಟ. ನಾನು ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಅವಧಿಯಲ್ಲಿ ಸಂಭ್ರಮಿಸಿದ್ದೇನೆ. ಆದರೆ ಸುಪ್ರೀಂ ಕೋರ್ಟ್ ಆದೇಶಕ್ಕೆ ನಾವೆಲ್ಲರೂ ತಲೆಬಾಗಬೇಕಾಗಿದೆ. ಈ ಬಾರಿ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.
ಸಂಭ್ರಮಾಚರಣೆ ಸಂದರ್ಭದಲ್ಲಿ ಊರಿನ ಎಲ್ಲಾ ಧರ್ಮಗುರುಗಳು ಹಾಗು ಹಿರಿಯರು ಜಿಲ್ಲಾಡಳಿತಕ್ಕೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ, ಯುವಕರನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಸಣ್ಣಪುಟ್ಟ ಸಮಸ್ಯೆಗಳು ಸಹಜ. ಅವುಗಳನ್ನು ಅಲ್ಲಿಯೇ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ನಮ್ಮ ಜಾಣ್ಮೆ ಪ್ರದರ್ಶಿಸಬೇಕು. ಕೆಲವೊಂದು ಅನಿವಾರ್ಯ ಸಂದರ್ಭದಲ್ಲಿ ಕಠಿಣ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಇದನ್ನು ಯಾರು ಸಹ ತಪ್ಪಾಗಿ ಅರ್ಥೈಸಿಕೊಳ್ಳಬಾರದು. ಇಂತಹ ಸಂದರ್ಭದಲ್ಲಿ ನಮ್ಮ ಮನಸ್ಸಿಗೂ ತುಂಬಾ ನೋವಾಗುತ್ತದೆ. ಜನರು ಕಠಿಣ ಸಂದರ್ಭದಲ್ಲೂ ಹೆಚ್ಚಿನ ಸಹಕಾರ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ. ನಾನು ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಎಲ್ಲರೂ ಶಾಂತಿ-ನೆಮ್ಮದಿಯಿಂದ ಬದುಕುವ ವಾತಾವರಣ ಕಲ್ಪಿಸಿ ಕೊಡುವುದು ನನ್ನ ಆಶಯವಾಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಎಲ್ಲರೂ ಹಬ್ಬವನ್ನು ಸಂಭ್ರಮದಿಂದ ಶಾಂತಿ-ಸೌಹಾರ್ದತೆಯಿಂದ ಆಚರಿಸುವಂತೆ ಮನವಿ ಮಾಡಿದರು.
ಉಳಿದಂತೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಸರ್ಕಾರ ರೂಪಿಸುವ ಮಾರ್ಗದರ್ಶಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರಿಸರಕ್ಕೆ ಧಕ್ಕೆಯಾಗದಂತೆ ಮೂರ್ತಿಗಳನ್ನು ಪ್ರತಿಷ್ಠಾಪಿಸುವುದು, ವಿದ್ಯುತ್ ಹಾಗು ಅಗ್ನಿ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವುದು. ಸ್ವಚ್ಛತೆ ಕಾಪಾಡುವುದು ಹಾಗು ಮೂರ್ತಿ ವಿಸರ್ಜನೆ ದಿನವನ್ನು ಮೊದಲೇ ತಿಳಿಸುವ ಮೂಲಕ ಸಹಕರಿಸುವಂತೆ ಕೋರಿದರು.

50 ವರ್ಷಗಳಿಂದ ಶಾಂತಿಯುತವಾಗಿ ಆಚರಣೆ:
ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಕಳೆದ 50 ವರ್ಷಗಳಿಂದ ಹಬ್ಬವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ ಎಂದು ಸಭೆಯಲ್ಲಿ ಸಮಿತಿ ಅಧ್ಯಕ್ಷ, ಹಿರಿಯ ನಗರಸಭಾ ಸದಸ್ಯ ಕೆ. ಕದಿರೇಶ್ ಸ್ಪಷ್ಟಪಡಿಸಿದರು.
ಕ್ಷೇತ್ರದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಉತ್ತಮ ಬಾಂಧವ್ಯ ಹೊಂದಿದ್ದೇವೆ. ಮುಸ್ಲಿಂ ಸಮುದಾಯದವರಿಂದ ಇದುವರೆಗೂ ಯಾವುದೇ ರೀತಿ ತೊಂದರೆಯಾಗಿಲ್ಲ. ಹಬ್ಬದ ಸಂದರ್ಭದಲ್ಲಿ ವಿನಾಕಾರಣ ಗೊಂದಲ ಹಾಗು ಭಯದ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಕೆಲವು ಕಿಡಿಗೇಡಿಗಳಿಂದ ಸಣ್ಣ-ಪುಟ್ಟ ಗಲಾಟೆಗಳು ನಡೆಯುವುದು ಸಹಜ. ಇದಕ್ಕೆ ಯಾರು ಸಹ ಕಿವಿಗೊಡಬಾರದು ಎಂದು ಮನವಿ ಮಾಡಿದರು.

Also read: ಅತಿವೃಷ್ಟಿಯಿಂದ ಬಹಳಷ್ಟು ಬೆಳೆ ಹಾನಿ: ರಾಷ್ಟ್ರೀಯ ವಿಪತ್ತು ಘೋಷಣೆಗೆ ರೈತ ಸಂಘ ಒತ್ತಾಯ

ವಿನಾಕಾರಣ ವ್ಯಾಪಾರಸ್ಥರಿಗೆ ತೊಂದರೆ :
ಪ್ರತಿಯೊಂದು ಘಟನೆ ಸಂದರ್ಭದಲ್ಲೂ ವಿನಾಕಾರಣ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಿಸುವುದು ಸರಿಯಲ್ಲ. ಇದರಿಂದಾಗಿ ವ್ಯಾಪಾರಸ್ಥರು ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಎಂ.ಎಸ್ ಜನಾರ್ಧನ ಅಯ್ಯಂಗಾರ್ ಅಳಲು ವ್ಯಕ್ತಪಡಿಸಿದರು.
ವ್ಯಾಪಾರ ವಹಿವಾಟು ಇಲ್ಲದೆ ಆರ್ಥಿಕವಾಗಿ ಸಂಕಷ್ಟ ಎದುರಿಸುವಂತಾಗಿದೆ. ವ್ಯಾಪಾರಸ್ಥರಿಂದ ಯಾರಿಗೂ ಯಾವುದೇ ರೀತಿ ತೊಂದರೆಯಾಗುವುದಿಲ್ಲ. ಬಲವಂತವಾಗಿ ಬಂದ್ ಮಾಡಿಸದೆ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.

ಕಿಡಿಗೇಡಿಗಳು ಯಾರೇ ಇರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಿ :
ಎಲ್ಲಾ ಹಬ್ಬಗಳನ್ನು ಇಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಒಗ್ಗಟ್ಟಾಗಿ ಆಚರಿಸಿಕೊಂಡು ಬರುತ್ತಿದ್ದೇವೆ. ಕೆಲವು ಕಿಡಿಗೇಡಿಗಳಿಂದ ಸಣ್ಣ-ಪುಟ್ಟ ಗಲಾಟೆಗಳು ನಡೆಯುತ್ತಿದ್ದು, ಅಂತಹ ಕಿಡಿಗೇಡಿಗಳು ಯಾರೇ ಇರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಸ್ಲಿಂ ಸಮುದಾಯದ ಮುಖಂಡರಾದ ಫೀರ್ ಷರೀಫ್, ಅಮೀರ್‌ಜಾನ್ ಸೇರಿದಂತೆ ಇನ್ನಿತರರು ಆಗ್ರಹಿಸಿದರು.
ಕ್ಷೇತ್ರದಲ್ಲಿರುವ ಎಲ್ಲರೂ ಎಚ್ಚರವಹಿಸಬೇಕು. ಕಿಡಿಗೇಡಿಗಳು ಕಂಡು ಬಂದಲ್ಲಿ ಅವರನ್ನು ದೂರವಿಡುವ ಕೆಲಸ ಮಾಡಬೇಕು. ಎಲ್ಲರೂ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಗಮನ ನೀಡಬೇಕೆಂದರು.

ಜಿಲ್ಲೆಯಲ್ಲಿರುವ ಪ್ರಮುಖ ರಾಜಕಾರಣಿಗಳ ಸಭೆ ನಡೆಸಿ :
ಜಿಲ್ಲೆಯಲ್ಲಿರುವ ಕೆಲವು ರಾಜಕಾರಣಿಗಳು ಘಟನೆಗಳನ್ನು ದುರ್ಬಳಕೆ ಮಾಡಿಕೊಂಡು ವಿನಾಕಾರಣ ಹೇಳಿಕೆ ನೀಡುವ ಮೂಲಕ ಜನರನ್ನು ಪ್ರಚೋದನೆಗೊಳಿಸುತ್ತಿದ್ದಾರೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆರೋಪಿಸಿದರು.

ಘಟನೆಯನ್ನು ನೋಡದಿದ್ದರೂ, ಘಟನಾ ಸ್ಥಳದಲ್ಲಿ ಇರದಿದ್ದರೂ ಸಹ ಬೇಕಾಬಿಟ್ಟಿಯಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರಿಂದಾಗಿ ಗಲಭೆಗಳು ಹೆಚ್ಚಾಗುತ್ತಿವೆ. ರಾಜಕೀಯ ಲಾಭಕ್ಕಾಗಿ ಜನರ ಬದುಕನ್ನು ಸಂಕಷ್ಟಕ್ಕೆ ತಳ್ಳುವುದು ಸರಿಯಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಎಲ್ಲರೂ ಬದ್ಧತೆಯಿಂದ ನಡೆದುಕೊಳ್ಳಬೇಕಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪ್ರಮುಖ ರಾಜಕಾರಣಿಗಳ ಸಭೆ ನಡೆಸಿ ಅವರಿಗೆ ಶಾಂತಿ ಸೌಹಾರ್ದತೆ ಕಾಪಾಡಲು ಮನವರಿಕೆ ಮಾಡಿಕೊಡಬೇಕೆಂದು ಕೋರಿದರು.
ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಡಾ. ಬಿ.ಎಂ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ವಿಕ್ರಮ್ ಅಮಟೆ, ಪೊಲೀಸ್ ಉಪಾಧೀಕ್ಷಕ, ಐಪಿಎಸ್ ಅಧಿಕಾರಿ ಜಿತೇಂದ್ರಕುಮಾರ್ ದಯಾಮ, ಉಪವಿಭಾಗಾಧಿಕಾರಿ ದೊಡ್ಡೇಗೌಡರ್, ತಹಸೀಲ್ದಾರ್ ಆರ್. ಪ್ರದೀಪ್, ಪೌರಾಯುಕ್ತ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿವಿಧ ಧರ್ಮಗಳ ಪ್ರಮುಖರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಪ್ರಮುಖರು, ಪೊಲೀಸ್ ವೃತ್ತ ನಿರೀಕ್ಷಕರು, ವಿವಿಧ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು,  ನಗರಸಭೆ, ಮೆಸ್ಕಾಂ, ಅರಣ್ಯ ಹಾಗು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮತ್ತು  ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhadravathiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಭದ್ರಾವತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅತಿವೃಷ್ಟಿಯಿಂದ ಬಹಳಷ್ಟು ಬೆಳೆ ಹಾನಿ: ರಾಷ್ಟ್ರೀಯ ವಿಪತ್ತು ಘೋಷಣೆಗೆ ರೈತ ಸಂಘ ಒತ್ತಾಯ

Next Post

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಬೇಕಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

kalpa News

kalpa News

Next Post
ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಬೇಕಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಬೇಕಾಗಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL