No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ | 10 ದಿನಗಳ ವೈಭವದ ನಗರಸಭೆ ದಸರಾ | ಸೆ.22ರಂದು ಉದ್ಘಾಟನೆ

ದಸರಾ ಅಂಗವಾಗಿ ಏನೆಲ್ಲಾ ಸ್ಪರ್ಧೆಗಳು, ಕಾರ್ಯಕ್ರಮಗಳು ನಡೆಯಲಿವೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 16, 2025
in Small Bytes, ಭದ್ರಾವತಿ
0
ಭದ್ರಾವತಿ | 10 ದಿನಗಳ ವೈಭವದ ನಗರಸಭೆ ದಸರಾ | ಸೆ.22ರಂದು ಉದ್ಘಾಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಸೆ.22 ರಿಂದ ಅ.2ರವರೆಗೆ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಹಲವು ವಿಭಿನ್ನ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳೊಂದಿಗೆ ವೈಭವಯುತವಾಗಿ 10 ದಿನಗಳ ಕಾಲ ಆಚರಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷೆ ಜೆ.ಸಿ. ಗೀತಾ ರಾಜ್‌ಕುಮಾರ್ ತಿಳಿಸಿದರು.

ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಾಡಹಬ್ಬ ದಸರಾ ಆಚರಿಸಲಾಗುತ್ತಿದ್ದು, ಸೆ.22ರಂದು ಬೆಳಿಗ್ಗೆ 10.30ಕ್ಕೆ ನಗರಸಭೆ ಸಭಾಂಗಣದಲ್ಲಿ ಹಿರಿಯ ಸಮಾಜ ಸೇವಕರಾದ ಎಚ್.ವಿ. ಶಿವರುದ್ರಪ್ಪ ಈ ಬಾರಿ ನಾಡಹಬ್ಬಕ್ಕೆ ಚಾಲನೆ ನೀಡುತ್ತಿದ್ದಾರೆ ಎಂದರು.

ನಗರಸಭೆ ಆವರಣದ ವೇದಿಕೆಯಲ್ಲಿ ಇದೆ ದಿನ ಬೆಳಿಗ್ಗೆ 9 ಗಂಟೆಗೆ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನರಿಂದ ಭಾವಗೀತೆ ಮತ್ತು ಸುಗಮ ಸಂಗೀತಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ಗಂಟೆಗೆ ಶಿವಮೊಗ್ಗ ಝೇಂಕಾರ ಮೆಲೋಡಿಸ್ ವತಿಯಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಲಿದೆ.

23ರಂದು ಬೆಳಿಗ್ಗೆ 9.30ಕ್ಕೆ ಜನ್ನಾಪುರ ಬಂಟರ ಭವನದಲ್ಲಿ ಮಹಿಳೆಯರಿಗೆ ಇಂಧನ ರಹಿತ ಅಡುಗೆ ಸ್ಪರ್ಧೆ ಆಯೋಜಿಸಲಾಗಿದ್ದು, ಆರ್ಟ್ ಆಫ್ ಲೀವಿಂಗ್ ಯೋಗ ಶಿಕ್ಷಕಿ ಭಾಗ್ಯಮೂರ್ತಿ ಉದ್ಘಾಟಿಸುವರು. ನಗರಸಭೆ ಆವರಣದ ವೇದಿಕೆಯಲ್ಲಿ ಸಂಜೆ 6 ಗಂಟೆಗೆ ಜನ್ನಾಪುರ ಡಾ.ಬಿ.ಆರ್. ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕಿರುನಾಟಕ ಮತ್ತು ಜಾನಪದ ಗೀತೆಗಳ ಗಾಯನ ಹಾಗೂ ನ್ಯೂಟೌನ್ ಮಿತ್ರಕಲಾ ಮಂಡಳಿಯಿಂದ ಸಂಗ್ಯಾ ಬಾಳ್ಯಾ ಜಾನಪದ ನಾಟ ಪ್ರದರ್ಶನ ಕಾರ್ಯಕ್ರಮ ನಡೆಯಲಿದ್ದು, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ಉದ್ಘಾಟಿಸುವರು ಎಂದರು.
24ರಂದು ಸಂಜೆ 6 ಗಂಟೆಗೆ ಭದ್ರಾ ಸುಗಮ ಸಂಗೀತಾ ವೇದಿಕೆಯಿಂದ ಸುಗಮ ಸಂಗೀತ ಹಾಗೂ ಆರ್.ಜೆ. ಕಲಾ ತಂಡದವರಿಂದ ಜಾನಪದ ಮತ್ತು ಸುಗಮ ಕಾರ್ಯಕ್ರಮ ನಗರಸಭೆ ಆವರಣದ ವೇದಿಕೆಯಲ್ಲಿ ನಡೆಯಲಿದ್ದು, ನಗರಸಭೆ ಹಿರಿಯ ಸದಸ್ಯ ಬಿ.ಕೆ. ಮೋಹನ್ ಕಾರ್ಯಕ್ರಮ ಉದ್ಘಾಟಿಸುವರು.

25ರಂದು ಬೆಳಿಗ್ಗೆ 9.30ಕ್ಕೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಗರದ ವಿವಿಧ ಇಲಾಖೆಗಳು, ಸಂಘ-ಸಂಸ್ಥೆಗಳು ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ಮಹಿಳಾ ಕ್ರೀಡಾ ಕೂಟ ಆಯೋಜಿಸಲಾಗಿದ್ದು, 3 ಬಾರಿ ಖೋ ಖೋ ರಾಷ್ಟ್ರ ಪ್ರಶಸ್ತಿ ವಿಜೇತ ಮಹಿಳಾ ಕ್ರೀಡಾಪಟು ಎಸ್. ಜಾನಕಿ ಸುರೇಶ್ ಕ್ರೀಡಾಕೂಟ ಉದ್ಘಾಟಿಸುವರು ಎಂದರು.

25ರಂದು ಸಂಜೆ 6 ಗಂಟೆಗೆ ನಗರಸಭೆ ಆವರಣದ ವೇದಿಕೆಯಲ್ಲಿ ಅಪರಂಜಿ ಅಭಿನಯ ಶಾಲೆ ವತಿಯಿಂದ ನಾಟಕ ಪ್ರದರ್ಶನ ಮತ್ತು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ದಸರಾ ಕವಿಗೋಷ್ಠಿ ಹಾಗೂ ಕಥೆ ಗೋಷ್ಠಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್ ಉದ್ಘಾಟಿಸುವರು.

26ರಂದು ಬೆಳಿಗ್ಗೆ 10 ಗಂಟೆಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ಹಿರಿಯ ಕುಸ್ತಿಪಟು ಎಚ್. ವಾಸುದೇವ್ ಉದ್ಘಾಟಿಸುವರು. ಸಂಜೆ 6 ಗಂಟೆಗೆ ನಗರಸಭೆ ಆವರಣದ ವೇದಿಕೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ನಗರಸಭೆ ಹಿರಿಯ ಸದಸ್ಯ ಟಿಪ್ಪುಸುಲ್ತಾನ್ ಉದ್ಘಾಟಿಸುವರು ಎಂದರು.

27ರಂದು ಕನಕಮಂಟಪ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಕಬಡ್ಡಿ ಕೇಸರಿ ಪ್ರಶಸ್ತಿ ವಿಜೇತ ಎಚ್.ಎಲ್. ರಂಗನಾಥ್ ಉದ್ಘಾಟಿಸುವರು.28ರಂದು ಬೆಳಿಗ್ಗೆ 9.30ಕ್ಕೆ ನ್ಯೂಟೌನ್ ಸರ್.ಎಂ.ವಿ ಒಳಾಂಗಣ ಕ್ರೀಡಾಂಗಣದಲ್ಲಿ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಇದೆ ಮೊದಲ ಬಾರಿಗೆ ಏರ್ಪಡಿಸಲಾಗಿದ್ದು, ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ರಾಬರ್ಟ್ ಡಿಸೋಜ ಉದ್ಘಾಟಿಸುವರು. ಸಂಜೆ 6 ಗಂಟೆಗೆ ಕನಕ ಮಂಟಪ ಮೈದಾನದಲ್ಲಿ ನಗರದ ವಿವಿಧ ಇಲಾಖೆಗಳು, ಸಂಘ-ಸಂಸ್ಥೆಗಳು ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

29ರಂದು ಸಂಜೆ 6 ಗಂಟೆಗೆ ಕನಕಮಂಟಪ ಮೈದಾನದಲ್ಲಿ ಚರಣ್ ಸಂಗೀತ ಮೆಲೋಡಿಯಿಂದ ಆರ್ಕೇಸ್ಟ್ರಾ ನಡೆಯಲಿದ್ದು, ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸುವರು.

30ರಂದು ಸಂಜೆ 6 ಗಂಟೆಗೆ ಕನಕಮಂಟಪ ಮೈದಾನದಲ್ಲಿ ಕಾಮಿಡಿ ಕಿಲಾಡಿಗಳು ಹಾಗೂ ಗಾಯಕರಿಂದ ನೃತ್ಯ/ಸಂಗೀತ/ಕಾಮಿಡಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ. ಸಂಗಮೇಶ್ವರ್ ಉದ್ಘಾಟಿಸುವರು ಎಂದರು.

ಉಳಿದಂತೆ ಅ.1ರಂದು ಬೆಳಿಗ್ಗೆ 10 ಗಂಟೆಗೆ ಆಯುಧ ಪೂಜೆ ಹಾಗೂ 2ರಂದು ಮಧ್ಯಾಹ್ನ 3 ಗಂಟೆಗೆ ದಸರಾ ಮೆರವಣಿಗೆ ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಿಂದ ನಡೆಯಲಿದ್ದು, ಸಂಜೆ 6 ಗಂಟೆಗೆ ಕನಕಮಂಟಪ ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ಜರುಗಲಿದೆ. ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪರುಸಪ್ಪ ಕುರುಬರ ಬನ್ನಿ ಮುಡಿಯುವರು ಎಂದರು.

ದಸರಾ ವಿವಿಧ ಸಮಿತಿಗಳ ಅಧ್ಯಕ್ಷರಾದ ಕೆ. ಸುದೀಪ್ ಕುಮಾರ್, ಕೆ. ಉದಯ್ ಕುಮಾರ್, ವಿ. ಕದಿರೇಶ್, ಚನ್ನಪ್ಪ, ಬಿ.ಎಂ. ಮಂಜುನಾಥ್, ಬಿ.ಪಿ. ಸರ್ವಮಂಗಳ ಭೈರಪ್ಪ, ಪೌರಾಯುಕ್ತ ಕೆ.ಎನ್. ಹೇಮಂತ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್. ಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: #NavaratriBhadravathiDasaraShimogaShivamoggaಆರ್ಟ್ ಆಫ್ ಲೀವಿಂಗ್ನಗರಸಭೆನಾಡಹಬ್ಬ ದಸರಾಭದ್ರಾವತಿಶಿವಮೊಗ್ಗಹಿಂದೂ ಮಹಾಸಭಾ
Share196Tweet123Send
Previous Post

ಗಮನಿಸಿ! ಸಾಗರದ ಪೂರ್ವಿಕಾ ಮೊಬೈಲ್ಸ್ ಕೆಲಸ ಖಾಲಿ ಇದೆ

Next Post

ಮ್ಯಾನ್ ಹ್ಯಾಟನ್ 20 ಬ್ರಿಡ್ಜಸ್ ಈಜು | ಇತಿಹಾಸ ನಿರ್ಮಿಸಿದ ಭಾರತೀಯ ರೈಲ್ವೆಯ ಅಧಿಕಾರಿ ಶ್ರೇಯಸ್ ಹೊಸೂರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮ್ಯಾನ್ ಹ್ಯಾಟನ್ 20 ಬ್ರಿಡ್ಜಸ್ ಈಜು | ಇತಿಹಾಸ ನಿರ್ಮಿಸಿದ ಭಾರತೀಯ ರೈಲ್ವೆಯ ಅಧಿಕಾರಿ ಶ್ರೇಯಸ್ ಹೊಸೂರು

ಮ್ಯಾನ್ ಹ್ಯಾಟನ್ 20 ಬ್ರಿಡ್ಜಸ್ ಈಜು | ಇತಿಹಾಸ ನಿರ್ಮಿಸಿದ ಭಾರತೀಯ ರೈಲ್ವೆಯ ಅಧಿಕಾರಿ ಶ್ರೇಯಸ್ ಹೊಸೂರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು

June 11, 2026
ILCAD-2026: Week-long Level Crossing Safety Campaign Concludes in Hubballi Division

ILCAD-2026: Week-long Level Crossing Safety Campaign Concludes in Hubballi Division

June 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಓಡಾಟ: ಮೂವರು ಯುವಕರು ಪೊಲೀಸರ ವಶಕ್ಕೆ

June 11, 2026
ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

ಜಾಗತಿಕ ಕಾರ್ಮಿಕ ಸಮ್ಮೇಳನ | ಏನಿದು ಭಾರತದ 29 ಕಾರ್ಮಿಕ ಕಾನೂನುಗಳು – 4 ಲೇಬರ್ ಕೋಡ್’ಗಳು?

June 11, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL