ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹೃದಯಾಘಾತದಿಂದ #CardiacArrest ಮೃತಪಟ್ಟ ಮಗಳ ಅಂಗಾಂಗ ದಾನ ಮಾಡುವ ಮೂಲಕ ಪೋಷಕರು ಮಾನವೀಯತೆ ಮೆರೆದಿದ್ದಾರೆ.
ಭದ್ರಾವತಿಯ #Bhadravathi ಹಳೆನಗರದ ಸುಭಾಷ್ ನಗರದ ನಿವಾಸಿ ಕುಮಾರ್ ಮತ್ತು ಲೀಲಾ ಎಂಬುವರ ಪುತ್ರಿ ಕೆ. ಕೀರ್ತನಾ (23) ಭಾನುವಾರ ಮೃತಪಟ್ಟಿದ್ದರು. ಅವರ ಅಂಗಾಂಗಗಳನ್ನು ದಾನ ಮಾಡಲಾಗಿದೆ.
Also Read>> ಡಿಕೆಶಿ ಸಂಪುಟದಲ್ಲಿ ಪರಮೇಶ್ವರ್’ಗೆ ಡಿಸಿಎಂ ಖಚಿತ? ಯಾರಿಗೆಲ್ಲಾ ಸಚಿವ ಸ್ಥಾನ ದೊರೆಯಲಿದೆ?
ಕೀರ್ತನಾ ತುಮಕೂರಿನ #Tumkur ಸಿದ್ಧಗಂಗಾ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇವರು ಕರ್ತವ್ಯದಲ್ಲಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ನೆಲಕ್ಕುರುಳಿ ಬಿದ್ದಿದ್ದು, ಅವರನ್ನು ಚಿಕಿತ್ಸೆಗೆ ಒಳಪಡಿಸಿ ಭದ್ರಾವತಿಯಲ್ಲಿನ ಅವರ ತಂದೆ ಕುಮಾರ್ಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾರೆ.
ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದ್ದರೂ ಸಹ ಚಿಕಿತ್ಸೆಗೆ ಸ್ಪಂದಿಸದೇ ಸಾವು ಕಂಡಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಮಗಳು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದುದರಿಂದ, ಹಲವು ಬಾರಿ ನನ್ನ ಬಳಿ ಸಾವಿನ ನಂತರ ಅಂಗಾಂಗ ದಾನ ಮಾಡುವ ಇಂಗಿತ ವ್ಯಕ್ತಪಡಿಸಿದ್ದಳು. ಅವಳ ಇಚ್ಛೆಯಂತೆ ಈ ಕಾರ್ಯ ನಡೆಸಿದ್ದೇವೆ ಎಂದು ಕೀರ್ತನಾ ತಂದೆ ವಿ. ಕುಮಾರ್ ಹೇಳಿದ್ದಾರೆ.
ಮಗಳ ಸಾವಿನ ನಂತರವೂ ಆಕೆ ಸಾರ್ಥಕತೆ ಮೆರೆದ ಹೆಮ್ಮೆ ನಮ್ಮದು ಎಂದು ತಾಯಿ ಲೀಲಾ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್




















