ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ ಬಿಜೆಪಿ ಸಾಮಾಜಿಕ ಜಾಲತಾಣದ ವಿಭಾಗದ ಸಂಚಾಲಕರನ್ನಾಗಿ ಭದ್ರಾವತಿ ಹೊಸಮನೆಯ ಪಿ.ಎಸ್. ಅವಿನಾಶ್ ಅವರನ್ನು ನಿಯೋಜಿಸಲಾಗಿದೆ.
ಈ ಕುರಿತಂತೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಅವರು ನೇಮಕ ಮಾಡಿದ್ದು, ಶಿವಮೊಗ್ಗ ಜಿಲ್ಲಾ ಸಂಚಾಲಕರಾಗಿ ಶಿವಮೊಗ್ಗದ ಪ್ರಶಾಂತ್ ಪಂಡಿತ್ ಮತ್ತು ಶಿವಮೊಗ್ಗ ಜಿಲ್ಲಾ ಸಹ ಸಂಚಾಲಕರನ್ನಾಗಿ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪದ ಎಚ್.ಆರ್. ತೀರ್ಥೇಶ್ ಮತ್ತು ಶಿವಮೊಗ್ಗ ವೆಂಕಟೇಶ್ ನಗರದ ದಿನೇಶ್ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ.
Get In Touch With Us info@kalpa.news Whatsapp: 9481252093







Discussion about this post