Thursday, October 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಇಲ್ಲಿದೆ ಪೊಲೀಸರ ಮಹತ್ವದ ಸೂಚನೆ

August 18, 2025
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಗೌರಿ ಮತ್ತು ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಿದ್ದು, ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು, ಹಬ್ಬಗಳನ್ನು ವೈಯಕ್ತಿಕವಾಗಿ ಮನೆಗಳಲ್ಲಿ ಹಾಗೂ ಸಾರ್ವಜನಿಕವಾಗಿ ಎಲ್ಲರೂ ಸೇರಿ ಆಚರಣೆ ಮಾಡುತ್ತೇವೆ. ಸಾರ್ವಜನಿಕವಾಗಿ ಹಬ್ಬಗಳನ್ನು ಆಚರಣೆ ಮಾಡುವಾಗ ಸಾರ್ವಜನಿಕರ ಹಿತ ದೃಷ್ಟಿಯಿಂದ ಕೆಲವು ನಿರ್ಬಂಧನೆಗಳನ್ನು ಹಾಕುವುದು ಸೂಕ್ತವಾಗಿರುತ್ತದೆ ಮತ್ತು ಅನಿವಾರ್ಯವಾಗಿರುತ್ತದೆ ಎನ್ನುವುದನ್ನು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದರು.

ಸಾರ್ವಜನಿಕರು ಹಬ್ಬ ಆಚರಿಸುವಾಗ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆಯ ಮೂಲ ಉದ್ದೇಶವಾಗಿರುತ್ತದೆ. ಆ ನಿಟ್ಟಿನಲ್ಲಿ ಮಾತ್ರ ಕೆಲವು ಸೂಚನೆಗಳನ್ನು ನೀಡಿ, ನಿಬಂಧನೆಗಳನ್ನು ವಿಧಿಸಲಾಗುತ್ತದೆಯೇ ಹೊರತು, ಸಾರ್ವಜನಿಕರಿಗೆ ತೊಂದರೆ ನೀಡುವ ಯಾವುದೇ ಉದ್ದೇಶವಿರುವುದಿಲ್ಲ ಎಂದರು.

ಎಲ್ಲರೂ ಸೇರಿ ಹಬ್ಬ ಆಚರಿಸುವಾಗ ಕೆಲವು ಜನ ಕಿಡಿಗೇಡಿಗಳು ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಸಾಧಿಸಲು ಕಿಡಿಗೇಡಿತನ ತೋರಿ ಹಬ್ಬದ ಆಚರಣೆಗೆ ತೊಂದರೆ ನೀಡುವ ಸಾಧ್ಯತೆಗಳಿರುತ್ತವೆ. ಪೊಲೀಸ್ ಇಲಾಖೆಯಿಂದ ಈಗಾಗಲೇ ಆ ರೀತಿಯ ವ್ಯಕ್ತಿಗಳನ್ನು ಗಮನಿಸಿ, ಕಳೆದ 02 ತಿಂಗಳಿಂದ ಅಂತಹವರ ಮೇಲೆ ಕೈಗೊಳ್ಳಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಿದೆ ಎಂದಿದ್ದಾರೆ.ಪ್ರಮುಖವಾಗಿ ಭದ್ರಾವತಿಯಲ್ಲಿ ಲಕ್ಷಾಂತರ ಜನ ಸೇರಿ ಹಬ್ಬದ ಆಚರಣೆಯಲ್ಲಿ ತೊಡಗಿದ್ದಾಗ ಕೆಲವರು ಮಾಡುವ ಕಿಡಿಗೇಡಿತನದಿಂದ ಎಲ್ಲರ ಮೇಲೆ ಅದರ ದುಷ್ಪರಿಣಾಮಗಳು ಆಗುತ್ತವೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 86 ಜನರ ವಿರುದ್ಧ ಗಡಿಪಾರು ಕ್ರಮ ಕೈಗೊಂಡಿದ್ದು, ಇಲಾಖೆಯಿಂದ 1000 ಕ್ಕೂ ಹೆಚ್ಚು ಪೋರ್ಟಬಲ್ ಕ್ಯಾಮೆರಾಗಳನ್ನು ಖರೀಸಿದಿಸಿ, ಮೆರವಣಿಗೆಯ ವೇಳೆ ಸೂಕ್ಷ್ಮ ಹಾಗೂ ಪ್ರಮುಖ ಪ್ರದೇಶಗಳಲ್ಲಿ ಅಳವಡಿಸಲಾಗುತ್ತದೆ ಎಂದರು.

ಇನ್ನು, ಪ್ರತಿ ಗಣಪತಿ ಪೆಂಡಾಲ್ ರವರು, ನಿಮ್ಮ ಸುರಕ್ಷತೆಯ ದೃಷ್ಠಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಿರಿ. ಇದರಿಂದ ಅಪರಾಧಿಕ ಕೃತ್ಯಗಳು ಆಗದಂತೆ ಮತ್ತು ಮುಂಜಾಗ್ರತಾ ಕ್ರಮ ಕೈಗೊಂಡಂತೆ ಆಗುತ್ತದೆ. ಸುರಕ್ಷತೆಯ ದೃಷ್ಠಿಯಿಂದ ಇದು ಮುಖ್ಯವಾದ ಕ್ರಮವಾಗಿರುತ್ತದೆ. ಗಣಪತಿ ಪೆಂಡಾಲ್ ಗಳ ಬಳಿ ಸಾವಿರಾರು ಜನರು ಬಂದು ಹೋಗುವುದರಿಂದ ಅಲ್ಲಿ ಜರುಗುವು ಸಣ್ಣ ಪುಟ್ಟ ಸಮಸ್ಯೆಗಳನ್ನು ಸಹಾ ತಡೆ ಗಟ್ಟಲು ಸಾಧ್ಯ ಎಂದು ಸಲಹೆ ನೀಡಿದರು.

ಈಗಾಗಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಎಲ್ಲರೂ ಸೇರಿ ವಿಜೃಂಭಣೆಯಿಂದ ಆಚರಿಸೋಣ. ಹಬ್ಬವನ್ನು ಆಚರಿಸುವಾಗ ಇನ್ನೊಬ್ಬರ ಭಾವನೆಗಳಿಗೆ ತೊಂದರೆಯಾಗದಂತೆ ಆಚರಿಸಬೇಕು. ಪ್ರತೀ ಹಬ್ಬವು ಶ್ರೇಷ್ಠ ಎಂಬ ಭಾವನೆಯಿಂದ ಹಬ್ಬ ಆಚರಿಸೋಣ ಎಂದು ಕರೆ ನೀಡಿದರು.

ಕಳೆದ 2 ವರ್ಷದಿಂದಲೂ ಸಹಾ ಈದ್ ಮಿಲಾದ್ ಹಾಗೂ ಗಣೇಶ ಹಬ್ಬಗಳು ಒಂದೇ ಬಾರಿ ಬರುತ್ತಿದ್ದು ಇದು ಸಾಮರಸ್ಯವನ್ನು ತೋರಲು ಒಂದು ಸುವರ್ಣಾವಕಾಶವಿರುತ್ತದೆ. ನಾವೆಲ್ಲರೂ ಸೇರಿ ಹಬ್ಬವನ್ನು ವಿಜ್ಞವಿಲ್ಲದ ರೀತಿ ವಿಜೃಂಭಣೆಯಿಂದ ಆಚರಿಸೋಣ ಎಂದು ಸಲಹೆ ನೀಡಿದರು.ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಎಚ್ಚರಿಕೆ
ಹಬ್ಬಗಳ ಆಚರಣೆಯ ವೇಳೆ, ಕಿಡಿಗೇಡಿಗಳು ಶಾಂತಿಕದಡಲು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವಿಚಾರವನ್ನು ಹರಿಬಿಡುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಸತ್ಯಾಸತ್ಯತೆಯನ್ನು ಅರಿಯದೇ ನೀವು ಯಾವುದೇ ವಿಚಾರವನ್ನು ಶೇರ್ ಮಾಡಬೇಡಿ. ಯಾವುದೇ ಮೆಸೇಜ್, ಪೋಸ್ಟ್ ಹಾಗೂ ಇಮೇಜ್ ಗಳಲ್ಲಿ ಪ್ರಚೋದನಾಕಾರಿಯಾದ ವಿಚಾರ ಇರುವುದು ಕಂಡು ಬಂದಲ್ಲಿ, ಈ ರೀತಿ ಕಿಡಿಗೇಡಿತನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಫ್ಲೆಕ್ಸ್ ಹಾಗೂ ಬ್ಯಾನರ್ಸ್ ಮತ್ತು ಪೋಸ್ಟರ್’ಗಳನ್ನು ಅಳವಡಿಸುವ ಮುಂಚಿತವಾಗಿ ವ್ಯಾಪ್ತಿಯ ಪೊಲೀಸ್ ಠಾಣೆಯ ಅನುಮತಿ ಪಡೆದು ಪ್ರಿಂಟ್ ಮಾಡಿ ಅಳವಡಿಸಲು ಪ್ರಿಂಟರ್ಸ್ ಅವರಿಗೆ ಸೂಚನೆ ನೀಡಿದ್ದು, ಎಲ್ಲರೂ ಸೇರಿ ಸಹಕರಿಸಬೇಕು ಎಂದರು.

ಈ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲಾ ಇಲಾಖೆಗಳು ಹಾಗೂ ಜನ ಪ್ರತಿನಿಧಿಗಳು ಸೇರಿ ಸಹಕಾರ ನೀಡುತ್ತಿದ್ದು, ಹಬ್ಬಗಳನ್ನು ಭಕ್ತಿಯಿಂದ ಮತ್ತು ಶ್ರದ್ಧೆಯಿಂದ ಆಚರಿಸೋಣ ಎಂದರು.

ಭದ್ರಾವತಿ ಡಿವೈಎಸ್’ಪಿ ನಾಗರಾಜ್, ಅಂಜುಮಾನ್ ಕಮಿಟಿ ಅಧ್ಯಕ್ಷ ಅಯೂಬ್ ಖಾನ್, ತಹಶೀಲ್ದಾರ್ ಪರಸಪ್ಪ ಕುರುಬರ್, ಪೌರಾಯುಕ್ತ ಕೆ.ಎನ್. ಹೇಮಂತ್, ಮೆಸ್ಕಾಂ ಎಇಕ ವಿನಾಯಕ್, ಫೈರ್ ಆಫೀಸರ್ ಹುಲಿಗಪ್ಪ, ಭದ್ರಾವತಿ ನಗರಸಭೆ ಉಪಾಧ್ಯಕ್ಷ ಮಣಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: BhadravathiEid MiladGanesha FestivalKannada News WebsiteLatest News KannadaShimogaShivamoggaShivamogga Newsಈದ್ ಮಿಲಾದ್ಗಣೇಶ ಹಬ್ಬಜಿ.ಕೆ. ಮಿಥುನ್ ಕುಮಾರ್ಜಿಲ್ಲಾ ರಕ್ಷಣಾಧಿಕಾರಿಪೊಲೀಸ್ ಇಲಾಖೆಭದ್ರಾವತಿ
Previous Post

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

Next Post

ಮುಂಜಾನೆ ಸುವಿಚಾರ | ಮುಪ್ಪು ದೇಹದ ಶಕ್ತಿಗೆ, ಆತ್ಮದ ಶಕ್ತಿಗಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂಜಾನೆ ಸುವಿಚಾರ | ಮುಪ್ಪು ದೇಹದ ಶಕ್ತಿಗೆ, ಆತ್ಮದ ಶಕ್ತಿಗಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Wife Donates Kidney to Save Husband’s Life

October 23, 2025

ಪ್ರಜಾಪ್ರಭುತ್ವದ ಲೂಟಿಯನ್ನು ಕಾಂಗ್ರೆಸ್ ಸಹಿಸುವುದಿಲ್ಲ: ರಮೇಶ್ ಶಂಕರಘಟ್ಟ

October 23, 2025

ಉತ್ತರಾದಿಮಠದ ಸುವರ್ಣ ಪುರುಷ ಶ್ರೀ ಸತ್ಯಪ್ರಮೋದ ತೀರ್ಥರು

October 23, 2025

ಕಿತ್ತೂರು ರಾಣಿ ಚೆನ್ನಮ್ಮ ಇಡೀ ವಿಶ್ವಕ್ಕೆ ಮಾದರಿ ಮಹಿಳೆ: ಸುರೇಶ್ ಋಗ್ವೇದಿ

October 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Wife Donates Kidney to Save Husband’s Life

October 23, 2025

ಪ್ರಜಾಪ್ರಭುತ್ವದ ಲೂಟಿಯನ್ನು ಕಾಂಗ್ರೆಸ್ ಸಹಿಸುವುದಿಲ್ಲ: ರಮೇಶ್ ಶಂಕರಘಟ್ಟ

October 23, 2025

ಉತ್ತರಾದಿಮಠದ ಸುವರ್ಣ ಪುರುಷ ಶ್ರೀ ಸತ್ಯಪ್ರಮೋದ ತೀರ್ಥರು

October 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!