No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಇಲ್ಲಿದೆ ಪೊಲೀಸರ ಮಹತ್ವದ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 18, 2025
in Small Bytes, ಭದ್ರಾವತಿ
0
ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಗೌರಿ ಮತ್ತು ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಿದ್ದು, ಹಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಸಭೆಯಲ್ಲಿ ಮಾತನಾಡಿದ ಅವರು, ಹಬ್ಬಗಳನ್ನು ವೈಯಕ್ತಿಕವಾಗಿ ಮನೆಗಳಲ್ಲಿ ಹಾಗೂ ಸಾರ್ವಜನಿಕವಾಗಿ ಎಲ್ಲರೂ ಸೇರಿ ಆಚರಣೆ ಮಾಡುತ್ತೇವೆ. ಸಾರ್ವಜನಿಕವಾಗಿ ಹಬ್ಬಗಳನ್ನು ಆಚರಣೆ ಮಾಡುವಾಗ ಸಾರ್ವಜನಿಕರ ಹಿತ ದೃಷ್ಟಿಯಿಂದ ಕೆಲವು ನಿರ್ಬಂಧನೆಗಳನ್ನು ಹಾಕುವುದು ಸೂಕ್ತವಾಗಿರುತ್ತದೆ ಮತ್ತು ಅನಿವಾರ್ಯವಾಗಿರುತ್ತದೆ ಎನ್ನುವುದನ್ನು ಎಲ್ಲರೂ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದರು.

ಸಾರ್ವಜನಿಕರು ಹಬ್ಬ ಆಚರಿಸುವಾಗ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು ಪೊಲೀಸ್ ಇಲಾಖೆಯ ಮೂಲ ಉದ್ದೇಶವಾಗಿರುತ್ತದೆ. ಆ ನಿಟ್ಟಿನಲ್ಲಿ ಮಾತ್ರ ಕೆಲವು ಸೂಚನೆಗಳನ್ನು ನೀಡಿ, ನಿಬಂಧನೆಗಳನ್ನು ವಿಧಿಸಲಾಗುತ್ತದೆಯೇ ಹೊರತು, ಸಾರ್ವಜನಿಕರಿಗೆ ತೊಂದರೆ ನೀಡುವ ಯಾವುದೇ ಉದ್ದೇಶವಿರುವುದಿಲ್ಲ ಎಂದರು.

ಎಲ್ಲರೂ ಸೇರಿ ಹಬ್ಬ ಆಚರಿಸುವಾಗ ಕೆಲವು ಜನ ಕಿಡಿಗೇಡಿಗಳು ತಮ್ಮ ವೈಯಕ್ತಿಕ ಹಿತಾಸಕ್ತಿಯನ್ನು ಸಾಧಿಸಲು ಕಿಡಿಗೇಡಿತನ ತೋರಿ ಹಬ್ಬದ ಆಚರಣೆಗೆ ತೊಂದರೆ ನೀಡುವ ಸಾಧ್ಯತೆಗಳಿರುತ್ತವೆ. ಪೊಲೀಸ್ ಇಲಾಖೆಯಿಂದ ಈಗಾಗಲೇ ಆ ರೀತಿಯ ವ್ಯಕ್ತಿಗಳನ್ನು ಗಮನಿಸಿ, ಕಳೆದ 02 ತಿಂಗಳಿಂದ ಅಂತಹವರ ಮೇಲೆ ಕೈಗೊಳ್ಳಬೇಕಾದ ಎಲ್ಲಾ ರೀತಿಯ ಕ್ರಮಗಳನ್ನು ಜರುಗಿಸಿದೆ ಎಂದಿದ್ದಾರೆ.ಪ್ರಮುಖವಾಗಿ ಭದ್ರಾವತಿಯಲ್ಲಿ ಲಕ್ಷಾಂತರ ಜನ ಸೇರಿ ಹಬ್ಬದ ಆಚರಣೆಯಲ್ಲಿ ತೊಡಗಿದ್ದಾಗ ಕೆಲವರು ಮಾಡುವ ಕಿಡಿಗೇಡಿತನದಿಂದ ಎಲ್ಲರ ಮೇಲೆ ಅದರ ದುಷ್ಪರಿಣಾಮಗಳು ಆಗುತ್ತವೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ 86 ಜನರ ವಿರುದ್ಧ ಗಡಿಪಾರು ಕ್ರಮ ಕೈಗೊಂಡಿದ್ದು, ಇಲಾಖೆಯಿಂದ 1000 ಕ್ಕೂ ಹೆಚ್ಚು ಪೋರ್ಟಬಲ್ ಕ್ಯಾಮೆರಾಗಳನ್ನು ಖರೀಸಿದಿಸಿ, ಮೆರವಣಿಗೆಯ ವೇಳೆ ಸೂಕ್ಷ್ಮ ಹಾಗೂ ಪ್ರಮುಖ ಪ್ರದೇಶಗಳಲ್ಲಿ ಅಳವಡಿಸಲಾಗುತ್ತದೆ ಎಂದರು.

ಇನ್ನು, ಪ್ರತಿ ಗಣಪತಿ ಪೆಂಡಾಲ್ ರವರು, ನಿಮ್ಮ ಸುರಕ್ಷತೆಯ ದೃಷ್ಠಿಯಿಂದ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಿರಿ. ಇದರಿಂದ ಅಪರಾಧಿಕ ಕೃತ್ಯಗಳು ಆಗದಂತೆ ಮತ್ತು ಮುಂಜಾಗ್ರತಾ ಕ್ರಮ ಕೈಗೊಂಡಂತೆ ಆಗುತ್ತದೆ. ಸುರಕ್ಷತೆಯ ದೃಷ್ಠಿಯಿಂದ ಇದು ಮುಖ್ಯವಾದ ಕ್ರಮವಾಗಿರುತ್ತದೆ. ಗಣಪತಿ ಪೆಂಡಾಲ್ ಗಳ ಬಳಿ ಸಾವಿರಾರು ಜನರು ಬಂದು ಹೋಗುವುದರಿಂದ ಅಲ್ಲಿ ಜರುಗುವು ಸಣ್ಣ ಪುಟ್ಟ ಸಮಸ್ಯೆಗಳನ್ನು ಸಹಾ ತಡೆ ಗಟ್ಟಲು ಸಾಧ್ಯ ಎಂದು ಸಲಹೆ ನೀಡಿದರು.

ಈಗಾಗಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಎಲ್ಲರೂ ಸೇರಿ ವಿಜೃಂಭಣೆಯಿಂದ ಆಚರಿಸೋಣ. ಹಬ್ಬವನ್ನು ಆಚರಿಸುವಾಗ ಇನ್ನೊಬ್ಬರ ಭಾವನೆಗಳಿಗೆ ತೊಂದರೆಯಾಗದಂತೆ ಆಚರಿಸಬೇಕು. ಪ್ರತೀ ಹಬ್ಬವು ಶ್ರೇಷ್ಠ ಎಂಬ ಭಾವನೆಯಿಂದ ಹಬ್ಬ ಆಚರಿಸೋಣ ಎಂದು ಕರೆ ನೀಡಿದರು.

ಕಳೆದ 2 ವರ್ಷದಿಂದಲೂ ಸಹಾ ಈದ್ ಮಿಲಾದ್ ಹಾಗೂ ಗಣೇಶ ಹಬ್ಬಗಳು ಒಂದೇ ಬಾರಿ ಬರುತ್ತಿದ್ದು ಇದು ಸಾಮರಸ್ಯವನ್ನು ತೋರಲು ಒಂದು ಸುವರ್ಣಾವಕಾಶವಿರುತ್ತದೆ. ನಾವೆಲ್ಲರೂ ಸೇರಿ ಹಬ್ಬವನ್ನು ವಿಜ್ಞವಿಲ್ಲದ ರೀತಿ ವಿಜೃಂಭಣೆಯಿಂದ ಆಚರಿಸೋಣ ಎಂದು ಸಲಹೆ ನೀಡಿದರು.ಸಾಮಾಜಿಕ ಜಾಲತಾಣ ಬಳಕೆದಾರರಿಗೆ ಎಚ್ಚರಿಕೆ
ಹಬ್ಬಗಳ ಆಚರಣೆಯ ವೇಳೆ, ಕಿಡಿಗೇಡಿಗಳು ಶಾಂತಿಕದಡಲು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವಿಚಾರವನ್ನು ಹರಿಬಿಡುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಸತ್ಯಾಸತ್ಯತೆಯನ್ನು ಅರಿಯದೇ ನೀವು ಯಾವುದೇ ವಿಚಾರವನ್ನು ಶೇರ್ ಮಾಡಬೇಡಿ. ಯಾವುದೇ ಮೆಸೇಜ್, ಪೋಸ್ಟ್ ಹಾಗೂ ಇಮೇಜ್ ಗಳಲ್ಲಿ ಪ್ರಚೋದನಾಕಾರಿಯಾದ ವಿಚಾರ ಇರುವುದು ಕಂಡು ಬಂದಲ್ಲಿ, ಈ ರೀತಿ ಕಿಡಿಗೇಡಿತನ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಫ್ಲೆಕ್ಸ್ ಹಾಗೂ ಬ್ಯಾನರ್ಸ್ ಮತ್ತು ಪೋಸ್ಟರ್’ಗಳನ್ನು ಅಳವಡಿಸುವ ಮುಂಚಿತವಾಗಿ ವ್ಯಾಪ್ತಿಯ ಪೊಲೀಸ್ ಠಾಣೆಯ ಅನುಮತಿ ಪಡೆದು ಪ್ರಿಂಟ್ ಮಾಡಿ ಅಳವಡಿಸಲು ಪ್ರಿಂಟರ್ಸ್ ಅವರಿಗೆ ಸೂಚನೆ ನೀಡಿದ್ದು, ಎಲ್ಲರೂ ಸೇರಿ ಸಹಕರಿಸಬೇಕು ಎಂದರು.

ಈ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಲು ಎಲ್ಲಾ ಇಲಾಖೆಗಳು ಹಾಗೂ ಜನ ಪ್ರತಿನಿಧಿಗಳು ಸೇರಿ ಸಹಕಾರ ನೀಡುತ್ತಿದ್ದು, ಹಬ್ಬಗಳನ್ನು ಭಕ್ತಿಯಿಂದ ಮತ್ತು ಶ್ರದ್ಧೆಯಿಂದ ಆಚರಿಸೋಣ ಎಂದರು.

ಭದ್ರಾವತಿ ಡಿವೈಎಸ್’ಪಿ ನಾಗರಾಜ್, ಅಂಜುಮಾನ್ ಕಮಿಟಿ ಅಧ್ಯಕ್ಷ ಅಯೂಬ್ ಖಾನ್, ತಹಶೀಲ್ದಾರ್ ಪರಸಪ್ಪ ಕುರುಬರ್, ಪೌರಾಯುಕ್ತ ಕೆ.ಎನ್. ಹೇಮಂತ್, ಮೆಸ್ಕಾಂ ಎಇಕ ವಿನಾಯಕ್, ಫೈರ್ ಆಫೀಸರ್ ಹುಲಿಗಪ್ಪ, ಭದ್ರಾವತಿ ನಗರಸಭೆ ಉಪಾಧ್ಯಕ್ಷ ಮಣಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: BhadravathiEid MiladGanesha FestivalKannada News WebsiteLatest News KannadaShimogaShivamoggaShivamogga Newsಈದ್ ಮಿಲಾದ್ಗಣೇಶ ಹಬ್ಬಜಿ.ಕೆ. ಮಿಥುನ್ ಕುಮಾರ್ಜಿಲ್ಲಾ ರಕ್ಷಣಾಧಿಕಾರಿಪೊಲೀಸ್ ಇಲಾಖೆಭದ್ರಾವತಿ
Share196Tweet123Send
Previous Post

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

Next Post

ಮುಂಜಾನೆ ಸುವಿಚಾರ | ಮುಪ್ಪು ದೇಹದ ಶಕ್ತಿಗೆ, ಆತ್ಮದ ಶಕ್ತಿಗಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಂಜಾನೆ ಸುವಿಚಾರ | ಮುಪ್ಪು ದೇಹದ ಶಕ್ತಿಗೆ, ಆತ್ಮದ ಶಕ್ತಿಗಲ್ಲ

ಮುಂಜಾನೆ ಸುವಿಚಾರ | ಮುಪ್ಪು ದೇಹದ ಶಕ್ತಿಗೆ, ಆತ್ಮದ ಶಕ್ತಿಗಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

June 12, 2026
ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

June 12, 2026
ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

ಆರೋಗ್ಯವಾಗಿದ್ದಾರೆ ಹಿರಿಯ ನಟ ದೊಡ್ಡಣ್ಣ | ಸುಳ್ಳು ಸುದ್ದಿಗೆ ಕಿವಿಗೊಡದಿರಿ, ಶೇರ್ ಮಾಡದಿರಿ

June 12, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಶಿವಮೊಗ್ಗ-ಮೈಸೂರು, ಯಶವಂತಪುರ ನಡುವಿನ 3 ರೈಲುಗಳ ಮಹತ್ವದ ತುರ್ತು ಅಪ್ಡೇಟ್

June 12, 2026
ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಮೈಸೂರು | ಎಲ್ಲ ವ್ರತಗಳಿಗಿಂತ ಏಕಾದಶಿ ವ್ರತವು ಅತ್ಯಂತ ಶ್ರೇಷ್ಠ | ಸತ್ಯಾತ್ಮ ತೀರ್ಥ ಸ್ವಾಮೀಜಿ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL