Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಕ್ರೀಡೆ

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

ಮಲೆನಾಡ ಕೀರ್ತಿಯನ್ನು ವಿಶ್ವಮಟ್ಟದಲ್ಲಿ ಹಾರಿಸಿದ ಕ್ರೀಡಾಪಟು ಈತ

December 4, 2019
in ಕ್ರೀಡೆ, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ:
ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಖೊ ಖೋ ಕ್ರೀಡಾಕೂಟದಲ್ಲಿ ತಮ್ಮ ನೇತೃತ್ವದ ಭಾರತೀಯ ತಂಡವನ್ನು ಗೆಲ್ಲಿಸಿಕೊಂಡು ಬರುವಲ್ಲಿ ನಮ್ಮ ಭದ್ರಾವತಿಯ ಹೆಮ್ಮೆಯ ಕ್ರೀಡಾಪಟು ಮುನಿರ್ ಬಾಷಾ ಯಶಸ್ವಿಯಾಗಿದ್ದಾರೆ.

ನೇಪಾಳದ ಕಠ್ಮಂಡುವಿನಲ್ಲಿ ನಿನ್ನೆ ನಡೆದ ಕ್ರೀಡಾಕೂಟದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಜಯಗಳಿಸಿದ್ದು, ಇದರ ನೇತೃತ್ವವನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮುನಿರ್ ಬಾಷಾ ವಹಿಸಿದ್ದರು ಎಂಬುದು ಮಲೆನಾಡಿಗರ ಹೆಮ್ಮೆಯಾಗಿದೆ.

ಮುನಿರ್ ಬಾಷಾ ಅವರ ಕುರಿತು ಓದಿ:
ಭದ್ರಾವತಿಯ ಭಾಷಾ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲಿ ಅಂದರೆ ಸುಮಾರು ಅವರ ಎಂಟನೆಯ ವಯಸ್ಸಿನಲ್ಲಿ ನಾಲ್ಕನೇ ತರಗತಿಯಲ್ಲಿ ಓದುವಾಗಲೇ ಖೊಖೋ ಕ್ರೀಡೆಯಲ್ಲಿ ಅತೀವ ಆಸಕ್ತಿಯಿಂದ ಹೊಂದಿದ್ದರು.

ಪ್ರತಿನಿತ್ಯ ಮೈದಾನಕ್ಕೆ ತೆರಳುತ್ತಿದ್ದ ಅವರು ಹಿರಿಯ ಕ್ರೀಡಾಪಟುಗಳಿಗೆ ಮೈದಾನವನ್ನು ಸಜ್ಜು ಮಾಡಿಕೊಡುವ ಜೊತೆಯಲ್ಲಿ ಅವರ ತಯಾರಿಯನ್ನು ನೋಡುತ್ತಾ ಕಲಿಯಲು ಆರಂಭಿಸಿದರು ಬಾಷಾ.

ಭದ್ರಾವತಿಯ ಖ್ಯಾತ ದೈಹಿಕ ಶಿಕ್ಷಕ ಎಚ್.ಟಿ. ತಿಮ್ಮಪ್ಪ ಅವರ ಮಾರ್ಗದರ್ಶನ ಗರಡಿಗೆ ಬಂದ ಇವರು, ಎಸ್’ಸಿಎಫ್’ಐಯಿಂದ ಕರ್ನಾಟಕವನ್ನು ಪ್ರತಿನಿಧಿಸಿ ವಿಜೇತರಾಗಿದ್ದರು. ಕರ್ನಾಟಕ ರಾಜ್ಯ ಸಂಸ್ಥೆಯಿಂದ ಹದಿನಾಲ್ಕನೆಯ ವರ್ಷದ ಸಬ್ ಜೂನಿಯರ್ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದು, ಅದರಲ್ಲಿ ಅವರು ವಿಜೇತರಾಗಿ ಹಾಗೂ ಅತ್ಯುತ್ತಮ ಆಟಗಾರರಾಗಿ ಖೊಖೋ ಫೆಡರೇಷನ್ ಆಫ್ ಇಂಡಿಯಾದಿಂದ ನೀಡುವಂತಹ ಗೌರವಾನ್ವಿತ ಭಾರತ್ ಅವಾರ್ಡ್ ಪಡೆದಿದ್ದಾರೆ.


ಹೈಸ್ಕೂಲ್ ವಿಭಾಗದಲ್ಲಿಯೂ ರಾಜ್ಯವನ್ನು ಪ್ರತಿನಿಧಿಸಿದ್ದ ಬಾಷಾ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಎರಡು ಬಾರಿ ರಾಜ್ಯವನ್ನು ಪ್ರತಿನಿಧಿಸಿ ವಿಜೇತರಾಗಿದ್ದರು.

ತಮ್ಮ ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಅದನ್ನೆಲ್ಲಾ ಪಕ್ಕಕ್ಕಿಟ್ಟ ಎಂಪಿಎಂಸಿ ಆವರಣದಲ್ಲಿ ಹಮಾಲಿ ಕೆಲಸ ಮಾಡುವ ಬಾಷಾ ಅವರ ತಂದೆ ಅಹ್ಮದ್ ಜಾನ್, ತಾಯಿ ಆರಿಫಾ ಬೇಗಂ ಅವರುಗಳು ಮಗನ ಕ್ರೀಡಾಸಕ್ತಿಗೆ ನೀರೆರೆದು ಪ್ರೋತ್ಸಾಹಿಸುತ್ತಾ ಬಂದರು.

ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಿಸಿದ ಬಾಷಾ ಜೀವನಕ್ಕಾಗಿ ಚಿಕ್ಕ ವಯಸ್ಸಿನಲ್ಲೇ ಗಾರೆ ಕೆಲಸ ಆರಂಭಿಸುತ್ತಾರೆ. ಮೂರು ವರ್ಷಗಳ ಕಾಲ ಗಾರೆ ಕೆಲಸ ಮಾಡುತ್ತಲೇ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣಕ್ಕೆ ತೆರಳುತ್ತಿದ್ದ ಬಾಷಾ, ತಮ್ಮ ಕ್ರೀಡಾಸಕ್ತಿಯನ್ನು ಮಾತ್ರ ಬಿಡದೇ ನಿರಂತರ ಅಭ್ಯಾಸ ಮಾಡುತ್ತಿದ್ದರು.

ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾ ಸಂಸ್ಥೆಯವರು ಇವರನ್ನು ಗುರುತಿಸಿ ವಿದ್ಯಾಭ್ಯಾಸ ಮುಂದುವರೆಸಲು ಪ್ರೋತ್ಸಾಹಿಸಿದರು. ಹೀಗಾಗಿ, ಮತ್ತೆ ವಿದ್ಯಾಭ್ಯಾಸ ಆರಂಭಿಸಿದ ಅವರು ಬಿಎ ಪದವಿ ಪಡೆದು ಕುವೆಂಪು ವಿವಿಯನ್ನು ಮೂರು ಬಾರಿ ಖೊಖೊ ತಂಡವನ್ನು ಪ್ರತಿನಿಧಿಸಿ, ರನ್ನರ್ ಅಪ್ ಆಗಿದ್ದರು.


ಕರ್ನಾಟಕ ರಾಜ್ಯ ಖೊಖೊ ಸಂಸ್ಥೆಯ ವತಿಯಿಂದ ತುಮಕೂರಿನಲ್ಲಿ ನಡೆದ ಖೊಖೊ ಫೆಡರೇಶನ್ ಕಪ್’ನಲ್ಲಿ ರಾಜ್ಯವನ್ನು ವಿಜೇತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸರಿಸುಮಾರು ಸೀನಿಯರ್ ನ್ಯಾಷನಲ್ಸ್‌’ನ್ನು ರಾಜ್ಯದ ಪರವಾಗಿ ನಾಲ್ಕು ಬಾರಿ ಪ್ರತಿನಿಧಿಸಿದ್ದು, ಕೇರಳದಲ್ಲಿ ನಡೆದ ನ್ಯಾಷನಲ್ಸ್ ಗೇಮ್’ನಲ್ಲಿ ರಾಜ್ಯವನ್ನು ಮೂರನೇ ಸ್ಥಾನ ಹಾಗೂ ಸೀನಿಯರ್ ನ್ಯಾಷನಲ್ಸ್’ಗಳಲ್ಲಿ ಎರಡು ಮತ್ತು ಮೂರು ಸ್ಥಾನ ಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ರಾಜ್ಯ ಮಟ್ಟದಲ್ಲಿ ಹಾಗೂ ದಸರಾ ಕ್ರೀಡಾಕೂಟದಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನಗೊಳಿಸಲು ಅತಿ ಹೆಚ್ಚು ಪಾತ್ರ ವಹಿಸಿದ್ದು ಹಾಗೂ ನಮ್ಮ ಸಂಸ್ಥೆಯಲ್ಲಿ ಎಲ್ಲ ಆಟಗಾರರು ಅವನ ಜೊತೆಗೆ ಸಂಪೂರ್ಣ ಸಹಕಾರದಿಂದ ನಮ್ಮ ಸಂಸ್ಥೆಯ ಹೆಸರನ್ನು ಉನ್ನತ ಮಟ್ಟಕ್ಕೆ ಏರಲು ಪ್ರಮುಖ ಪಾತ್ರರಾಗಿದ್ದಾರೆ.

ಇವರ ಈ ಎಲ್ಲ ಕ್ರೀಡಾ ಸಾಧನೆಯನ್ನು ಗಮನಿಸಿ ಕರ್ನಾಟಕ ರಾಜ್ಯ ಸರ್ಕಾರದಿಂದ ನೀಡುವ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಯನ್ನು 2017ರಲ್ಲಿ ನೀಡಿ ಗೌರವಿಸಿದೆ.


ಇನ್ನು ಈ ಹಿಂದೆ ನೀಡುತ್ತಿದ್ದಂತಹ ಏಕಲವ್ಯ ಪ್ರಶಸ್ತಿಯನ್ನು ಖೊಖೊ ಕ್ರೀಡೆಗೆ ಪರಿಗಣಿಸಿ ಅವರಿಗೆ ನೀಡಬೇಕೆಂದು ರಾಜ್ಯ ಸರ್ಕಾರದಲ್ಲಿ ಕಳಕಳಿಯ ವಿನಂತಿ ಮಾಡುತ್ತಾರೆ.

ರಾಷ್ಟ್ರವೇ ಮೆಚ್ಚುವಂತಹ ಸಾಧನೆ ಮಾಡಿರುವ ಮುನಿರ್ ಬಾಷಾ ಅವರ ಕ್ರೀಡಾ ಸೇವೆಯನ್ನು ರಾಜ್ಯ ಸರ್ಕಾರ ಪರಿಗಣಿಸಿ, ಇವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಇವರಿಗೊಂದು ಸರ್ಕಾರಿ ಉದ್ಯೋಗ ನೀಡುವ ಮೂಲಕ ಪ್ರೋತ್ಸಾಹಿಸಬೇಕಿದೆ ಎಂಬುದು ಭದ್ರಾವತಿ ನಾಗರಿಕರ ಮನವಿಯಾಗಿದೆ.

(ವರದಿ: ಡಾ.ಸುಧೀಂದ್ರ)

Get in Touch With Us info@kalpa.news Whatsapp: 9481252093

Tags: BhadravathiIndian SportsKannada NewsKhokhoMalnad NewsMunir BashaShivamoggaSouth Asian Olympic GamesSports NewsSriLankaಏಕಲವ್ಯ ಪ್ರಶಸ್ತಿಕರ್ನಾಟಕ ರಾಜ್ಯ ಖೊಖೊ ಸಂಸ್ಥೆಕ್ರೀಡಾ ಸುದ್ಧಿಕ್ರೀಡಾಂಗಣಖೊಖೊಭದ್ರಾವತಿಮುನಿರ್ ಬಾಷಾಶಿವಮೊಗ್ಗಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌
Previous Post

ತುಮಕೂರು: ದೇವಸ್ಥಾನದ ಹುಂಡಿ ಒಡೆದು ಸರಣಿ ಕಳ್ಳತನ

Next Post

ವಾಟ್ಸಪ್ ಗ್ರೂಪ್’ಗೂ ನಾಲ್ಕನೆಯ ವಾರ್ಷಿಕೋತ್ಸವ ಸಂಭ್ರಮ: ಅರ್ಥಪೂರ್ಣ ಆಚರಣೆ ಹೇಗಿತ್ತು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾಟ್ಸಪ್ ಗ್ರೂಪ್’ಗೂ ನಾಲ್ಕನೆಯ ವಾರ್ಷಿಕೋತ್ಸವ ಸಂಭ್ರಮ: ಅರ್ಥಪೂರ್ಣ ಆಚರಣೆ ಹೇಗಿತ್ತು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!