Read - < 1 minute

ಭದ್ರಾವತಿ ನಗರದ ಹೊಸಮನೆ ಬಡಾವಣೆಯಲ್ಲಿ ಹಿಂದೂ ಮಹಾಸಭಾ ಮತ್ತು ಹಿಂದೂ ರಾಷ್ಟ್ರ ಸೇನಾ ಸಮಿತಿಯು ಪ್ರತಿಷ್ಟಾಪಿಸಿರುವ 46 ನೇ ವರ್ಷದ ಶ್ರೀ ವಿನಾಯಕ ಸ್ವಾಮಿ.

ಭದ್ರಾವತಿ ಹಳೇನಗರದ ಹೊಸಮನೆ ಮುಖ್ಯರಸ್ತೆಯಲ್ಲಿರುವ ಭೋವಿ ಕಾಲೋನಿ ಯುವಕರ ಸಂಘ ನಿರ್ಮಿಸಿರುವ 34 ನೇ ವರ್ಷದ ವಿಘ್ನ ನಿವಾರಕ ಶ್ರೀ ವಿಘ್ನೇಶ್ವರ ಮೂರ್ತಿ ಪ್ರತಿಷ್ಟಾಪನೆ.
ಭದ್ರಾವತಿ: ಇಲ್ಲಿನ ಹೊಸಮನೆಯಲ್ಲಿ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಸಭಾ ಗಣಪತಿ ಸನ್ನಿಧಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಇಂದು ಸಂಜೆ 7.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಇದೇ 21ರ ಶುಕ್ರವಾರ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ನಡೆಯಲಿದ್ದು, ಸಕಲ ಸಿದ್ದತೆ ನಡೆದಿದೆ.
ವರದಿ: ಆರ್.ವಿ. ಕೃಷ್ಣ, ಭದ್ರಾವತಿ
Discussion about this post