ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಕನ್ನಡ ಚಿತ್ರರಂಗದ ಹಿರಿಯ ನಟ, ಕರ್ನಾಟಕ ರತ್ನ, ಸಾಹಸಸಿಂಹ ದಿ.ಡಾ.ವಿಷ್ಣುವರ್ಧನ್ ಅವರ ಜನ್ಮದಿನದ ಅಂಗವಾಗಿ ವಿವಿಧ ಸಮಿತಿಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಯಿತು.
ಭದ್ರಾವತಿಯ ಪ್ರತಿಷ್ಠಿತ ರಕ್ತ ನಿಧಿ ಕೇಂದ್ರವಾಗಿರುವ ಜೀವ ಸಂಜೀವಿನಿ ರಕ್ತ ಕೇಂದ್ರದಲ್ಲಿ ಕುವೆಂಪು ವಾಹನ ಚಾಲಕರ ಮತ್ತು ಮಾಲೀಕರ ಸಂಘ ಮತ್ತು ವಿಷ್ಣುಸೇನಾ ಸಮಿತಿ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿಯ ಪ್ರಮುಖರು ವಿಷ್ಣುವರ್ಧನ್ ಅವರ ಜೀವನ, ಚಿತ್ರರಂಗದ ಸಾಧನೆಗಳ ಕುರಿತಾಗಿ ಮಾತನಾಡಿದರು.
ವಿಷ್ಣುವರ್ಧನ್ ಅವರ ಜೀವನವೇ ಒಂದು ರೀತಿಯಲ್ಲಿ ಆದರ್ಶಪ್ರಾಯವಾಗಿದೆ. ಅವರ ಜೀವನದ ಪ್ರತಿ ಹಂತವೂ ಸಹ ಪ್ರತಿಯೊಬ್ಬರಿಗೂ ಒಂದು ಮಾದರಿಯಾಗಿದೆ ಎಂದರು.
ರಕ್ತ ನಿಧಿಯ ಮುಖ್ಯಸ್ಥರಾದ ಹರೀಶ್ ಶಿಬಿರದ ನೇತೃತ್ವ ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















