No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

ಪೊಲೀಸರಿಗೆ ತಾಯಿ ನೀಡಿದ ದೂರಿನಲ್ಲಿ ಏನಿದೆ? ಸಾವಿಗೆ ಪೋಲೀಸಪ್ಪನೇ ಕಾರಣವೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2026
in Small Bytes, ಭದ್ರಾವತಿ
0
ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಭದ್ರಾವತಿಯಲ್ಲಿ ನಡೆದಿದ್ದು, ಈ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯಲ್ಲಿ ಸ್ವಾತಿ(26) ಎಂದು ಗುರುತಿಸಲಾಗಿದೆ.

ಕೆಎಸ್’ಐಎಫ್’ಎಸ್`ನಲ್ಲಿ ಡಿ ದರ್ಜೆ ನೌಕರರಾಗಿದ್ದ ಜಗದೀಶ್ ಎನ್ನುವವರು ಶಿವರಾತ್ರಿ ದಿನದಂದು ಮನೆಯಲ್ಲೇ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದರು. ಈ ವೇಳೆ ಭದ್ರಾವತಿಯ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಅಸ್ವಭಾವಿಕ ಸಾವು ಎಂದು ದೂರು ದಾಖಲಾಗಿತ್ತು.

ಇದಾದ ಒಂದು ವಾರದಲ್ಲೇ ಜಗದೀಶ್ ಪತ್ನಿ ಸ್ವಾತಿ ಅವರೂ ಸಹ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ವಾತಿ ತನ್ನ ತಾಯಿಗೆ ಕಳುಹಿಸಿದ ವಾಟ್ಸಪ್ ನಲ್ಪಿ ಮೆಸೇಜ್ ಕಳುಹಿಸಿರುವುದು ಪ್ರಕರಣಕ್ಕೆ ತಿರುವು ನೀಡಿದೆ. ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ.ಶಿವಮೊಗ್ಗದ ಮಾಳೂರು ಪೊಲೀಸ್ ಠಾಣೆಯೊಂದರಲ್ಲಿ ದಫೇದಾರ್ ಆಗಿದ್ದವರೊಬ್ಬರು ಸ್ವಾತಿಗೆ `ನಿನ್ನ ಪತಿ’ ಸಾವಿಗೆ ನೀನೆ ಕಾರಣ ಎಂದು ಆರೋಪಿಸಿರುವುದನ್ನು ಉಲ್ಲೇಖಿಸಿ ತನ್ನ ತಾಯಿಗೆ ಮೆಸೇಜ್ ಮಾಡಿರುವುದು ಈಗ ಸಂಚಲನ ಉಂಟು ಮಾಡಿದೆ.

ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊನೆಯ ವಾಟ್ಸಪ್ ಚಾಟ್’ನಲ್ಲಿ ಏನಿದೆ?
ಅಮ್ಮ sry ಅಮ್ಮ 😭
Nanna ಬಗ್ಗೆ ಇಲ್ದೆ ಇರೋದೆಲ್ಲ ಕೆಟದಾಗಿ ಜನಗಳ ಅತಿರ ಹೇಳಿದರೆ ಮೋಹನ್ ಅಂತ ನಂಗೆ ತಡಿಯೋಕೆ ಹಾಗ್ತಿಲ
ನನ್ನ ಗಂಡ ಸತ್ತಿದು ಫುಲ್ ಡ್ರಿಂಗ್ಸ್ ಮಾಡಿದ್ರು ಹೆದ್ರುಸೋಕೆ ಹೋಗಿ ಮಾಡ್ಕೊಂಡಿದ್ದು
But
ಈ ಮೋಹನ್ ಅನೋ ಪೊಲೀಸ್ ನನ್ ಬಗ್ಗೆ ಕೆಟದಾಗಿ ಹೇನೇನೋ ಜನಗಳ ಅತಿರ ಹೇಳಿರೋದು ನಂಗೆ ega ಬೆಳಿಗ್ಗೆ ವಿಷಯ ಗೊತಾಯ್ತು ಆವ್ನುನ್ನ ಮಾತ್ರ sumne ಬಿಡ್ಬೇಡಿ
ಅವ್ರು ಯಾರು ಅಂತಾನೆ ನಂಗೆ ಗೊತ್ತಿಲ
Fb li msg madtidru ನನ್ ಬ್ಲಾಕ್ ಮಾಡ್ದೆ ha ಸಿಟಿಗೆ ಹೇನೇನೋ ಹೇಳಿದರೆ
ನನ್ನ ಮಕ್ಳುನ ಚನ್ನಾಗಿ ನೋಡ್ಕೊಳಿ 😭plz ಅಮ್ಮ ನಿನ್ನ ಅಮೌಂಟ್ ಫೋನ್ pay posswod 242021 sry ಅಮ್ಮ 😭😭😭😭😭

ಮೃತರ ತಾಯಿ ನೀಡಿದ ದೂರಿನಲ್ಲಿ ಏನಿದೆ?
ಪ್ರಕರಣ ಕುರಿತಂತೆ ಮೃತ ಸ್ವಾತಿ ತಾಯಿ ನ್ಯೂ ಟೌನ್ ಪೊಲೀಸರಿಗೆ ಲಿಖಿತ ದೂರು ನೀಡಿದ್ದು, ದೂರಿನ ಸಾರಾಂಶ ಹೀಗಿದೆ.

ನನಗೆ ಒಂದು ಗಂಡು ಮಗ ಸಂಜಯ್ ಮತ್ತು ಒಬ್ಬಳು ಹೆಣ್ಣು ಮಗಳಾದ ಸ್ವಾತಿ ಇದ್ದು ಇವಳನ್ನು ಭದ್ರಾವತಿ ಹೊಸ ಸಿದ್ದಾಪುರ ವಾಸಿಯಾದ ಜಗದೀಶ ಬಿನ್ ಪುಟ್ಟೇಗೌಡ ಇವರಿಗೆ 2019ರಲ್ಲಿ ಮದುವೆ ಮಾಡಿಕೊಟ್ಟಿದ್ದು ಅವರ ದಾಂಪತ್ಯ ಜೀವನದ ಫಲವಾಗಿ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇರುತ್ತಾರೆ.

ಹೀಗಿರುವಾಗ ನನ್ನ ಅಳಿಯ ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು ಕುಡಿಯವ ಚಟ ಕಲಿತಿದ್ದು ಇದಕ್ಕೆ ಕಾರಣ ನಮ್ಮ ಮಗಳ ಕುಟುಂಬದ ಬಗ್ಗೆ ಪೋಲೀಸ್ ಪೇದೆಯಾದ ಮೋಹನ್ ರವರು ಅಪಪ್ರಚಾರ ಮಾಡಿದ್ದು ಇದರಿಂದ ಮನ ನೊಂದು ನನ್ನ ಅಳಿಯ ದಿನಾಂಕ:14-02-2026ರAದು ರಾತ್ರಿ 9.30 ಗಂಟೆ ಸಮಯದಲ್ಲಿ ನೇಣು ಹಾಕಿಕೊಂಡು ಹೊಸ ಸಿದ್ದಾಪುರದಲ್ಲಿ ಮೃತರಾಗಿರುತ್ತಾರೆ.ಈತನ ಸಾವಿನ ಬಗ್ಗೆ ನಮಗೆ ಸಮಗ್ರ ಮಾಹಿತಿ ಇಲ್ಲದ ಕಾರಣ ಯಾವುದೇ ದೂರು ನೀಡದೇ ಪಿ.ಎಂ ವರದಿಯಾದ ನಂತರ ಶವ ಸಂಸ್ಕಾರ ಮಾಡಿರುತ್ತೇವೆ. ಹೀಗಿರುವಾಗ ನನ್ನ ಮಗಳು ಸ್ವಾತಿ ಹೊಸಸಿದ್ದಾಪುರ ಗಂಡ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಆರೋಪಿತ ಪೋಲೀಸ್ ಪೇದೆ ಮೋಹನ್ ನನ್ನ ಮಗಳ ಬಗ್ಗೆ ಅಪಪ್ರಚಾರ ಮಾಡಿದ್ದು ಅಲ್ಲದೇ ಫೋನ್ ಮುಖೇನ ನನ್ನ ಮಗಳಿಗೆ ಕಿರುಕುಳ ನೀಡಿದ್ದಾರೆ. ಈ ವಿಚಾರವಾಗಿ ಅವಳು ಜೀವಂತವಿರುವಾಗ ನನಗೆ ವಿಷಯ ತಿಳಿಸಿದ್ದಳು. ಆಗ ನಾನು ನನ್ನ ಗಂಡ ಜಯರಾಮ್ ಅವಳಿಗೆ ಸಮಾಧಾನ ಹೇಳಿರುದ್ದೆವು.

20-02-2026ರಂದು ನನಗೆ ಬೆಳಿಗ್ಗೆ ಮೋಹನ್ ನನ್ನ ಮಗಳ ಬಗ್ಗೆ ಕೆಟ್ಟದಾಗಿ ಜನಗಳ ಮುಂದೆ ಅಪಪ್ರಚಾರ ಮಾಡಿರುವ ಬಗ್ಗೆ ಈ ವಿಷಯದ ಹಿನ್ನೆಲೆಯಲ್ಲಿ ಆಕೆಯ ಗಂಡ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅಲ್ಲದೇ ನನ್ನ ಮಗಳಿಗೆ ಬ್ಲಾಕ್ಮೇಲ್ ಮಾಡಿ ನನ್ನ ಮಗಳ ಮೊಬೈಲ್’ಗೆ ಆರೋಪಿ ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ನನಗೆ ವಿಷಯ ತಿಳಿಸಿದ್ದಳು. ನನ್ನ ಮಗಳು ಮಾನಸಿಕ ನೊಂದಿರುತ್ತಾಳೆ ಅಲ್ಲದೇ ಆರೋಪಿ ನನ್ನ ಮಗಳಿಗೆ ಧಮ್ಮಿ ಹಾಕಿ ನಾನು ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಮೇಲೆ ದೂರು ಕೊಟ್ಟರೇ ಏನು ಮಾಡಲು ಸಾಧ್ಯವಿಲ್ಲ. ನಾನು ಹೇಳಿದಂತೆ ಕೇಳಿದರೆ ನಿನ್ನ ಬದುಕು ಸರಿಯಾಗುತ್ತದೆಂದು ಬೆದರಿಕೆ ಹಾಕಿರುವ ಬಗ್ಗೆ ಸಹ ನನ್ನ ಮಗಳು ನನಗೆ ಹೇಳಿದ್ದಳು.ನನಗೆ ನನ್ನ ಮೊಬೈಲ್’ಗೆ ಮೆಸೇಜ್ ಮಾಡಿ ಮೋಹನ್ ಕಿರುಕುಳ ನೀಡಿದ್ದು ಆಕೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ದುಷ್ಪರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನನ್ನ ಮಗಳು ಸ್ವಾತಿ ಭದ್ರಾವತಿ ತಾ ಹೊಸಸಿದ್ದಾಪುರದ ಗಂಡನ ಮನೆಯಲ್ಲಿ ನನ್ನ ಮಗಳು ನನ್ನ ಮೊಬೈಲ್’ಗೆ ಮೆಸೇಜ್ ಹಾಕಿ ಕಾರಣ ತಿಳಿಸಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಷಯ ತಿಳಿದ ನಾನು ಸ್ಥಳಕ್ಕೆ ಹೋಗಿ ನೋಡಿದಾಗಿ ನನ್ನ ಮಗಳು ಮೃತರಾಗಿದ್ದಳು.

ನನ್ನ ಮಗಳ ಸಾವಿಗೆ ಕಾರಣರಾದ ಪೋಲೀಸ್ ಪೇದೆ ಮೋಹನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಅವಳು ಆತ್ಮಹತ್ಯೆ ಮಾಡಿಕೊಳ್ಳವಂತೆ ಅಪಪ್ರಚಾರ ಮಾಡಿ ಬ್ಲಾಕ್ಮೇಲ್ ಮಾಡಿ, ಲೈಂಗಿಕ ಕಿರುಕುಳ ನೀಡಿ, ದುಷ್ಟೇರಣೆ ಮಾಡಿರುವ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಂಡು ಶಿಕ್ಷಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: BhadravathiCrime NewsKannada News WebsiteLatest News KannadaPolice NewsShimogaShivamoggaShivamogga Newssuicideಆತ್ಮಹತ್ಯೆಭದ್ರಾವತಿಶಿವರಾತ್ರಿ
Share278Tweet174Send
Previous Post

ಭದ್ರಾವತಿ | ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ನೇಣಿಗೆ ಶರಣು

Next Post

ಗಾಯನದಲ್ಲಿ ರಂಜಿಸಿದ ಬೇಗಂ ಪರ್ವೀನ್ ಸುಲ್ತಾನಾ | ‘ಉಡುಪ ಸಂಗೀತೋತ್ಸವ’ ಕ್ಕೆ ವಿಧ್ಯುಕ್ತ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಾಯನದಲ್ಲಿ ರಂಜಿಸಿದ ಬೇಗಂ ಪರ್ವೀನ್ ಸುಲ್ತಾನಾ | ‘ಉಡುಪ ಸಂಗೀತೋತ್ಸವ’ ಕ್ಕೆ ವಿಧ್ಯುಕ್ತ ಚಾಲನೆ

ಗಾಯನದಲ್ಲಿ ರಂಜಿಸಿದ ಬೇಗಂ ಪರ್ವೀನ್ ಸುಲ್ತಾನಾ | ‘ಉಡುಪ ಸಂಗೀತೋತ್ಸವ’ ಕ್ಕೆ ವಿಧ್ಯುಕ್ತ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

April 2, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL