ಕಲ್ಪ ಮೀಡಿಯಾ ಹೌಸ್ | ಬೀದರ್ |
ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿಯಾಗಲಿದ್ದು ಹೀಗಾಗಿ ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಅನುದಾನವನ್ನು ನೀಡಲಾಗುತ್ತಿದೆ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ MLA Shylendra Beldale ಅವರು ತಿಳಿಸಿದರು.
ಈತ್ತೀಚೆಗೆ ಬೀದರ್ ದಕ್ಷಿಣ ಕ್ಷೇತ್ರದ ಕರಕನಳ್ಳಿ ಗ್ರಾಮದಿಂದ ಸುಮಾರು ಎಸ್ಎಚ್ 15ರವರೆಗೆ ಲೋಕೋಪಯೋಗಿ ಇಲಾಖೆಯ ೨ ಕೋಟಿ 50 ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆ ಹಾಗೂ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಶ್ರೀ ಗುರು ಗಂಗಾಧರ ಬಕ್ಕಪ್ರಭುಗಳ ಆಶೀರ್ವಾದ ಪಡೆದು ಗ್ರಾಮಸ್ಥರ ಅಹವಾಲು ಸ್ವೀಕರಿಸಿ ಮಾತನಾಡಿದರು.

Also read: ಇಂದಿರಾ ಫುಡ್ಸ್ ರಸಂ ಪೇಸ್ಟ್ ಎಫ್ಎಂಸಿಜಿ ಮಾರುಕಟ್ಟೆಗೆ ಬಿಡುಗಡೆ
ಬೀದರ್ ದಕ್ಷಿಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ ಆಗಿದೆ. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ಮಾಡಬೇಕು. ಕಾಮಗಾರಿ ನಡೆಯುವಾಗ ಸ್ಥಳೀಯರು ನಿಂತು ಕಾಮಗಾರಿ ಮಾಡಿಸಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ನಮ್ಮ ಕಚೇರಿಗೆ ಅಥವಾ ತಮ್ಮನ್ನು ಸಂಪರ್ಕಿಸಿ ಪರಿಹಾರ ಮಾಡಿಕೊಳ್ಳಬಹುದು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post