ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂಡೆಪ್ಪ ಖಾಶೆಂಪುರ್ Bandeppa Khashempur ಅವರು ಅವರು ವಿವಿಧ ದೇವಾಲಯ ಹಾಗೂ ದರ್ಗಾಗಳಿಗೆ ಭೇಟಿ ನೀಡಿದ ವಿಶೇಷ ಪೂಜೆ ಸಲ್ಲಿಸಿದರು.
ಮಂಗಳಪೇಟಾದ ಶ್ರೀ ಭವಾನಿ ಮಾತೆಯ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಬಳಿಕ ಜಿಲ್ಲೆಯ ಬಸವಕಲ್ಯಾಣದಲ್ಲಿರುವ ಮಾಜಿ ಶಾಸಕರಾದ ಶ್ರೀ ಮಲ್ಲಿಕಾರ್ಜುನ ಖೂಬಾ ಅವರ ಮನೆಗೆ ಭೇಟಿ ನೀಡಿದರು. ನಂತರ ಬಸವಕಲ್ಯಾಣದ ಜೆಡಿಎಸ್ ಅಭ್ಯರ್ಥಿ ಸಂಜಯ್ ವಾಡೇಕರ್ ರವರ ನಾಮಪತ್ರ ಸಲ್ಲಿಕೆ ಯಾತ್ರೆಯಲ್ಲಿ ಪಾಲ್ಗೊಂಡರು.
ಬಳಿಕ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ್’ನಲ್ಲಿ ನಡೆದ ಇಪ್ತಾರ್ ಕೂಟದಲ್ಲಿ ಪಾಲ್ಗೊಂಡು, ಅಲ್ಲಿನ ಬಗದಲ್ ಸಾಹೇಬ್ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನಂತರ ಖಾಶೆಂಪುರ್ ಪಿ ಗ್ರಾಮದ ಸದ್ಗುರು ಸಚ್ಚಿದಾನಂದ ಸ್ವಾಮೀಜಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
Also read: ಪಿಯು ಫಲಿತಾಂಶ: ಟ್ಯೂಷನ್ ಇಲ್ಲದೇ ಸ್ವಪ್ರಯತ್ನದಿಂದ ಸಾಧಿಸಿದ ಚಾಮರಾಜನಗರದ ವೈಷ್ಣವಿ
ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಕ್ಷೇತ್ರದ ಆಯಸಪೂರ, ಮದರಗಿ, ಕಮಠಾಣಾ, ಮನ್ನಾಎಖೇಳ್ಳಿ, ಯದಲಾಪೂರ, ಕೋಳಾರ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಜನ ಮುಖಂಡರು, ಯುವಕರನ್ನು ನಮ್ಮ ನಾಯಕರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post