ಕಲ್ಪ ಮೀಡಿಯಾ ಹೌಸ್
ಬೀದರ್ : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಲಿರುವ ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಯ ಮೂರನೇ ಹಂತದಲ್ಲಿ ಮನ್ನಾಎಖೇಳ್ಳಿಯಿಂದ ಜಿಲ್ಲಾ ಮುಖ್ಯ ರಸ್ತೆ 3 ವರೆಗೆ (MDR) ಮಾರ್ಗ: ಬೋರಾಳ, ಬಸಿರಾಪೂರ, ಮತ್ತು ಉಡಬಾಳ – ಹಳ್ಳಿಖೇಡ ಜಿಲ್ಲಾ ಮುಖ್ಯ ರಸ್ತೆಯಿಂದ ನಿರ್ಣಾ ಜಿಲ್ಲಾ ಮುಖ್ಯ ರಸ್ತೆಯವರೆಗೆ (MDR) ಮಾರ್ಗ: ನಾಗೇನಕೇರಾ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಚಾಲನೆ ನೀಡಿದರು.
ಕ್ಷೇತ್ರ ವ್ಯಾಪ್ತಿಯ ಬೋರಾಳ ಮತ್ತು MLAನಾಗೇನಕೇರಾ ಗ್ರಾಮಗಳಿಗೆ ಸೋಮವಾರ ಭೇಟಿ ನೀಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಅವರು, ಕಾಮಗಾರಿಗಳನ್ನು ಸರಿಯಾಗಿ ನಿರ್ವಹಿಸಬೇಕು. ನೀಡಿರುವ ಸಮಯದಲ್ಲಿ ಉತ್ತಮ ಗುಣಮಟ್ಟದ ಕೆಲಸ ಮಾಡಬೇಕು. ನೀಡಿರುವ ಸಲಹೆ ಸೂಚನೆಗಳನ್ನು ಸರಿಯಾಗಿ ಪಾಲಿಸಬೇಕು. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಅವಶ್ಯಕವಾಗಿದ್ದು, ಹೆಚ್ಚು ಕಾಲ ಬಾಳಿಕೆ ಬರುವ ರೀತಿಯಲ್ಲಿ ಕೆಲಸ ಮಾಡಬೇಕೆಂದು ಸಂಬಂಧಿಸಿದ ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಬೀದರ್ ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸಂಜುರೆಡ್ಡಿ ನಿರ್ಣಾ, ಸೈರಾದ್ದೀನ್ ಪಟೇಲ್ ಮನ್ನಾಎಖ್ಖೇಳ್ಳಿ, ದತ್ತು ರಾಚೂರು ಮನ್ನಾಎಖ್ಖೇಳ್ಳಿ, ರಾಜು ಬೋರಾಳ, ಶರಣಪ್ಪ ಬೋರಾಳ, ಶಂಕರ್ ಮನ್ನಾಎಖ್ಖೇಳ್ಳಿ, ಮಲ್ಲಪ್ಪ ಮನ್ನಾಎಖ್ಖೇಳ್ಳಿ, ರಾಜಶೇಖರ ಬನ್ನಳ್ಳಿ, ಬದ್ರಪ್ಪ, ಬಕ್ಕಾರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post