ಕಲ್ಪ ಮೀಡಿಯಾ ಹೌಸ್
ಬೀದರ್: ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬೀದರ್ ಜಿಲ್ಲೆಯ ಅನೇಕ ಕಡೆಗಳಲ್ಲಿ ರೈತರ ಜಮೀನುಗಳಲ್ಲಿ ನೀರು ತುಂಬಿ ಬೆಳೆಗಳು ಹಾಳಾಗಿದ್ದು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ರೈತರ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಬೀದರ್ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ಕಾಡವಾದ ಗ್ರಾಮದ ಜಮೀನುಗಳಿಗೆ ಸೋಮವಾರ ಭೇಟಿ ನೀಡಿದ ಶಾಸಕರು, ಮಳೆಯಿಂದ ಹಾನಿಗಿಡಾದ ಉದ್ದು, ಸೋಯಾ, ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ವೀಕ್ಷಣೆ ನಡೆಸಿ ಮಾತನಾಡಿ, ಮಳೆಯಿಂದ ಹಾನಿಗಿಡಾದ ಬೆಳೆಗಳನ್ನು ಕೂಡಲೇ ಸಮೀಕ್ಷೆ ನಡೆಸಬೇಕು. ಬೆಳೆ ಕಳೆದುಕೊಂಡ ರೈತರಿಗೆ ಕೂಡಲೇ ಪರಿಹಾರ ನೀಡುವ ಕೆಲಸ ಮಾಡಬೇಕು. ಬೆಳೆ ಹಾನಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವ ಕೆಲಸ ಕೂಡಲೇ ಆಗಬೇಕು.
ಅಲ್ಲಿ ಇಲ್ಲಿ ಸಾಲ ಮಾಡಿ ಬಿತ್ತನೆ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ರೈತರು ಉತ್ತಮ ಇಳುವರಿಯ ನಿರೀಕ್ಷೆಯಲ್ಲಿರುವಾಗ ಸುರಿದ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಫಸಲು ಕೈಗೆ ಬಂತು ಎನ್ನುವಾಗಲೇ ಮಳೆ ಸುರಿಯುತ್ತಿದ್ದು, ರೈತರಿಗೆ ಗಾಯದ ಮೇಲೆ ಬರೆ ಹೇಳದಂತಾಗಿದೆ. ಸರ್ಕಾರ ಕೂಡಲೇ ರೈತರ ನೆರವಿಗೆ ಬರಬೇಕು. ಈ ವಿಷಯವಾಗಿ ಸಂಬಂಧಿಸಿದ ಸಚಿವರು, ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ದೂಳಪ್ಪ ಹೊಸಾಳೆ, ಬಗದಲ್ ಕೃಷಿ ಅಧಿಕಾರಿ ಸಂಗಮೇಶ, ಸಹಾಯಕ ಕೃಷಿ ಅಧಿಕಾರಿ ಅಂಬುಜಾ, ಮುಖಂಡರಾದ ಇಸ್ಮಾಯಿಲ್, ಗಾಳಪ್ಪ, ಬಸವರಾಜ, ಸಂತೋಷ ರೆಡ್ಡಿ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು, ರೈತರು, ಮುಖಂಡರು, ಗ್ರಾಮಸ್ಥರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post