Sunday, September 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೀದರ್

ಅಗ್ನಿಶಾಮಕ ಠಾಣೆಗೆ ಜಾಗ ನೀಡದ ಜಿಲ್ಲಾಡಳಿತ, ಸದನದಲ್ಲಿ ಧ್ವನಿ ಎತ್ತಿದ ಶಾಸಕ ಬೆಲ್ದಾಳೆ, ಗೃಹ ಮಂತ್ರಿ ಅಸಹಾಯಕ ನುಡಿ

August 13, 2025
in ಬೀದರ್
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೀದರ್  |

ದಕ್ಷಿಣ ವಿಧಾನಸಭೆ ಕ್ಷೇತ್ರದ ಮನ್ನಾಎಖ್ಖೆಳ್ಳಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಜಿಲ್ಲಾಡಳಿತ ಎರಡು ವರ್ಷಗಳಿಂದ ಅಗತ್ಯವಾದ ಎರಡು ಎಕರೆ ಜಾಗ ಹುಡುಕಿ ಕೊಡುತ್ತಿಲ್ಲ. ರಾಜ್ಯ ಸರ್ಕಾರದಿಂದ ಮೂರು ಸಲ ಈ ಸಂಬಂಧ ಪತ್ರ ಬರೆದರೂ ಬೀದರ್ ಜಿಲ್ಲಾಧಿಕಾರಿ ಇದಕ್ಕೆ ಸ್ಪಂದಿಸಿಲ್ಲ! ಇದು ಗೃಹ ಸಚಿವ ಡಾ. ಪರಮೇಶ್ವರ #Home Minister Parameshwar ಅವರ ಅಸಹಾಯಕ ನುಡಿ.

ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ #MLA Shylendra Beldale ಅವರು ಈ ವಿಷಯ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸುವ ವೇಳೆ ಗೃಹ ಸಚಿವ ಪರಮೇಶ್ವರ ಅವರು ಮೂರು ಬಾರಿ ಪತ್ರ ಬರೆದರೂ ನಿಮ್ಮ ಜಿಲ್ಲಾಧಿಕಾರಿ ಜಾಗ ಕೊಡುತ್ತಿಲ್ಲ. ನೀವು ಡಿಸಿಯವರ ಜೊತೆಗೆ ಚರ್ಚಿಸಿ ಜಾಗ ಕೊಡಿಸಿ. ನಾನು ಅಗ್ನಿಶಾಮಕ ಠಾಣೆ ಮಂಜೂರಿ ಮಾಡಿಸಿ ಕೆಲಸ ಆರಂಭಿಸುವೆ ಎಂದು ಭರವಸೆ ನೀಡಿದರು.
ಸಚಿವರ ಉತ್ತರದಿಂದ ತೃಪ್ತರಾಗದ ಶಾಸಕ ಬೆಲ್ದಾಳೆ ಅವರು, ಮೂರು ಬಾರಿ ಸರ್ಕಾರದಿಂದ (ಗೃಹ ಇಲಾಖೆಯಿಂದ) ಪತ್ರ ಬರೆದರೂ ಡಿಸಿಯವರು ಸ್ಪಂದಿಸುತ್ತಿಲ್ಲ ಎಂದರೆ ಹೇಗೆ? ಸರ್ಕಾರ, ಸಚಿವರ ಪತ್ರಕ್ಕೆ ತಕ್ಷಣ ಸ್ಪಂದಿಸುವುದು ಡಿಸಿ (ಜಿಲ್ಲಾಡಳಿತದ) ಕೆಲಸವಲ್ಲವೆ? ಈ ತರಹ ಅಸಡ್ಡೆ ತೋರಿಸುವುದು ಜಿಲ್ಲಾಡಳಿತದ ಕಾರ್ಯವೈಖರಿ ಜೊತೆಗೆ ಸರ್ಕಾರದ ವ್ಯವಸ್ಥೆ ಮೇಲೂ ಪ್ರಶ್ನೆ ಚಿಹ್ನೆ ಹಾಕಿದೆ. ಸರ್ಕಾರದ ಪತ್ರಗಳಿಗೆ ಡಿಸಿ ಸ್ಪಂದಿಸಿಲ್ಲ ಎಂದಾದರೆ ಸರ್ಕಾರ ಏಕೆ ಸುಮ್ಮನೆ ಕುಳಿತಿದೆ ಎಂದರು.

ಈ ಚರ್ಚೆ ಇನ್ನಷ್ಟು ಮುಂದುವರಿಯುವುದು ಅರಿತ ಸಭಾಧ್ಯಕ್ಷ ಯು.ಟಿ.ಖಾದರ್ ಮಧ್ಯೆ ಪ್ರವೇಶಿಸಿ, ಜಿಲ್ಲಾಡಳಿತ ಜಾಗ ನೀಡಬೇಕಾದ ಸರ್ಕಾರದ ಪತ್ರಕ್ಕೆ ಸ್ಪಂದಿಸದೆ ಕಡೆಗಣಿಸಿದ ವಿಷಯದ ಬಗ್ಗೆ ಕಂದಾಯ ಸಚಿವರು ಗಮನ ಹರಿಸುತ್ತಾರೆ. ಬೇಕಾದರೆ ಈ ಬಗ್ಗೆ ನಿವು ಕಂದಾಯ ಸಚಿವರಿಗೆ ಪತ್ರ ಬರೆಯಿರಿ ಎಂದು ಶಾಸಕ ಬೆಲ್ದಾಳೆ ಅವರಿಗೆ ಸಲಹೆ ನೀಡಿದರು. ನೀವು ಸ್ಥಳೀಯರು. ಒಳ್ಳೆಯ ಶಾಸಕರು. ಈಗಾಗಲೇ ನಿಮ್ಮಲ್ಲಿ ಸುಮಾರು ೧೬ ಕೋಟಿ ರೂ.ನಷ್ಟವಾದ ಮಾಹಿತಿ ಸಹ ಬಂದಿದೆ. ಒಮ್ಮೆ ಡಿಸಿಯವರಿಗೆ ನೀವು ಭೇಟಿ ಮಾಡಿ ಚರ್ಚಿಸಿ ಜಾಗದ ಸಮಸ್ಯೆ ಬಗೆಹರಿಸಿಕೊಳ್ಳಿ. ಮುಂದಿನ ಕೆಲಸ ನಾನು ಬೇಗ ಮಾಡಿಕೊಟ್ಟು ಕ್ಷೇತ್ರದ ಜನರಿಗೆ ಅನುಕೂಲ ಕಲ್ಪಿಸುವೆ ಎಂದು ಗೃಹ ಸಚಿವರು ಸಹ ಬೆಲ್ದಾಳೆ ಅವರಿಗೆ ಸಲಹೆ ನೀಡಿ ಚರ್ಚೆಗೆ ತೆರೆ ಎಳೆದರು.
ಜನರ ಜೀವ, ಆಸ್ತಿಪಾಸ್ತಿ ರಕ್ಷಿಸಿ

ದಕ್ಷಿಣ ವಿಧಾನಸಭೆ ಕ್ಷೇತ್ರ ಸಂಪೂರ್ಣ ಹಳ್ಳಿಗಳಿಂದ ಕೂಡಿದೆ. ಕ್ಷೇತ್ರದಲ್ಲಿ ಅಗ್ನಿಶಾಮಕ ಠಾಣೆ ಇಲ್ಲದ ಕಾರಣ ಸಾಕಷ್ಟು ಆಸ್ತಿಪಾಸ್ತಿ, ಜೀವಹಾನಿ ಸಂಭವಿಸುತ್ತಿದೆ. ಏನಾದರೂ ಅಗ್ನಿ ಅವಘಡ ಸಂಭವಿಸಿದರೆ 40 ಕಿಮೀ ದೂರದ ಬೀದರ್, ಹುಮನಾಬಾದ್ ನಿಂದ ಅಗ್ನಿಶಾಮಕ ವಾಹನ ಬರಲು ವಿಳಂಬವಾಗುತ್ತಿದೆ. ಈ ವಾಹನ ಬರುವಷ್ಟಲ್ಲಿ ಪೂರ್ಣ ಹಾಳಾಗುತ್ತಿದೆ. ಜನರ ಜೀವ, ಆಸ್ತಿ ರಕ್ಷಣೆಗಾಗಿ ಕ್ಷೇತ್ರದ ಕೇಂದ್ರವಾದ ಮನ್ನಾಎಖ್ಖೆಳ್ಳಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆ ಅತ್ಯಂತ ಅಗತ್ಯವಿದೆ. ಜನಹಿತದ ಈ ವಿಷಯ ಹಿಂದಿನ ನಾಲ್ಕು ಅಧಿವೇಶನದಲ್ಲಿ ನಾನು ಪ್ರಸ್ತಾಪಿಸಿದರೂ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಪ್ರಶ್ನೋತ್ತರ ಚರ್ಚೆ ವೇಳೆ ಗಮನ ಸೆಳೆದರು. ಕ್ಷೇತ್ರದಲ್ಲಿ ಬೆಂಗಳೂರು-ಹೈದರಾಬಾದ್-ಪುಣೆ-ಮುAಬೈ ಹೆದ್ದಾರಿ 30 ಕಿಮೀ ಹಾದುಹೋಗಿದೆ. ಅಪಘಾತ ಸಂಭವಿಸಿದ ವೇಳೆ ಬೆಂಕಿ ಹೊತ್ತಿ ಹಾನಿಯಾದ ಉದಾಹರಣೆಗಳಿವೆ. ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಬೆಳೆಗಳಿಗೆ ಬೆಂಕಿ ತಗುಲಿ ರೈತರು ಅಪಾರ ಹಾನಿ ಅನುಭವಿಸುತ್ತಿದ್ದಾರೆ. ಸಕಾಲಕ್ಕೆ ಅಗ್ನಿಶಾಮಕ ವಾಹನ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದರೆ ಜನರ ಜೀವ ಜೊತೆಗೆ ಆಸ್ತಿಪಾಸ್ತಿ ರಕ್ಷಣೆ ಸಾಧ್ಯ. ತಕ್ಷಣ ಬೇಡಿಕೆಗೆ ಸ್ಪಂದಿಸಿ ಎಂದು ಕೋರಿದರು. ಎರಡು ಎಕರೆ ಜಾಗ ಸಿಕ್ಕ ಕೂಡಲೇ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಸರ್ಕಾರ ಬದ್ಧವಿದೆ. ಇದಕ್ಕೆ ಹಣದ ಕೊರತೆ ಸಹ ಇಲ್ಲ ಎಂದು ಗೃಹ ಸಚಿವ ಡಾ.ಪರಮೇಶ್ವರ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BidarHome Minister ParameshwarKannada NewsKannada News LiveKannada News OnlineKannada News WebsiteKannada WebsiteLatest News KannadaMLA Shylendra BeldaleNews in KannadaNews Kannadaಗೃಹ ಸಚಿವ ಡಾ. ಪರಮೇಶ್ವರಬೀದರ್ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ
Previous Post

ಗಮನಿಸಿ! ಆ.14ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ಹಿಂದೂ ಸಮಾಜದ ಭಾವನೆಗಳಿಗೆ ಧಕ್ಕೆ-ಸರ್ಕಾರದ ವಿರುದ್ಧ ಗರ್ಜಿಸಿದ ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿಂದೂ ಸಮಾಜದ ಭಾವನೆಗಳಿಗೆ ಧಕ್ಕೆ-ಸರ್ಕಾರದ ವಿರುದ್ಧ ಗರ್ಜಿಸಿದ ಡಿ.ಎಸ್. ಅರುಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಬೆಳಗಿನ ಸಮಯ ಮನುಷ್ಯನ ಚೈತನ್ಯವನ್ನು ಹೆಚ್ಚಿಸುತ್ತದೆ

September 7, 2025

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!