ಕಲ್ಪ ಮೀಡಿಯಾ ಹೌಸ್
ಬೀದರ್: ರಾಷ್ಟ್ರದೆಲ್ಲೆಡೆ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಸೋಂಕು ಹರಡುವುದನ್ನು ನಿಯಂತ್ರಿಸಲು ವ್ಯಾಕ್ಸಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಅರ್ಹತೆ ಹೊಂದಿರುವ ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆದುಕೊಳ್ಳಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು.
ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೋನಾ ವ್ಯಾಕ್ಸಿನ್ ಎರಡನೆಯ ಡೋಸ್ ಪಡೆದುಕೊಂಡ ಬಳಿಕ ಮಾತನಾಡಿದ ಅವರು, ನಾನು ಈ ಹಿಂದೆ ಮೊದಲನೆಯ ಹಂತದ ಕೊರೊನಾ ವ್ಯಾಕ್ಸಿನ್ ಅನ್ನು ಇದೇ ಆಸ್ಪತ್ರೆಯಲ್ಲೆ ಪಡೆದುಕೊಂಡಿದ್ದೆ. ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿರಲಿಲ್ಲ. ಈಗಲೂ ಏನು ಸಮಸ್ಯೆಯಾಗಿಲ್ಲ ಎಂದರು.
ಜಿಲ್ಲೆಯಲ್ಲಿ ಕೊರೋನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.ಇಂತಹ ಪರಿಸ್ಥಿತಿಯಲ್ಲಿ ಜಿಲ್ಲೆಯ ಜನತೆ ಅನವಶ್ಯಕ ಓಡಾಟ ಮಾಡಬೇಡಿ. ಅತ್ಯವಶ್ಯಕ ಸಂದರ್ಭವಿದ್ದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಓಡಾಡಿ. ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಕೊರೋನಾದಿಂದ ದೂರವಿರಲು ಬೇಕಾಗುವ ಎಲ್ಲಾ ನಿಯಮಗಳನ್ನು ಪಾಲಿಸಿ. ವ್ಯಾಕ್ಸಿನ್ ಪಡೆದುಕೊಳ್ಳಲು ಅರ್ಹರಿರುವ ಪ್ರತಿಯೊಬ್ಬರೂ ವ್ಯಾಕ್ಸಿನ್ ಪಡೆದುಕೊಳ್ಳಿ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ.ಸೋಹಿಲ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post