ಕಲ್ಪ ಮೀಡಿಯಾ ಹೌಸ್ | ಬೀದರ್ |
ಮಧ್ಯಪ್ರದೇಶದಲ್ಲಿ ನಡೆದ ಗೊಂಡ ಸಮಾಜದ ಆದಿ ಉತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಭಾಗಿ
ಮಧ್ಯಪ್ರದೇಶ ರಾಜ್ಯದ ಮಂಡ್ಲಾ ಜಿಲ್ಲೆಯ ರಾಮನಗರದಲ್ಲಿ ಶನಿವಾರ ಮತ್ತು ಭಾನುವಾರ ನಡೆದ ಗೊಂಡ ಸಮಾಜದ ರಾಷ್ಟ್ರೀಯ 5ನೇ ಆದಿ ಉತ್ಸವ ಕಾರ್ಯಕ್ರಮದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಪಾಲ್ಗೊಂಡರು.
ಎರಡು ದಿನಗಳ ಕಾಲ ನಡೆದ ಉತ್ಸವದಲ್ಲಿ ಬುಡಕಟ್ಟು ಸಂಸ್ಕೃತಿ, ಆಡುಭಾಷೆ, ಸಂಪ್ರದಾಯದ ಸಂರಕ್ಷಣೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಅಲ್ಲದೇ ಬೀದರ್ ಜಿಲ್ಲೆಯ ಮತ್ತು ರಾಜ್ಯದಲ್ಲಿನ ಗೊಂಡ ಸಮಾಜದ ಸಮಸ್ಯೆಗಳ ಬಗ್ಗೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರೊಂದಿಗೆ ಚರ್ಚಿಸಲಾಯಿತು. ಸಮಸ್ಯೆಗಳನ್ನು ಪರಿಹರಿಸುವಂತೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ರಾಜ್ಯಪಾಲರಾದ ಮಂಗುಭಾಯಿ ಪಟೇಲ್, ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಾದ ಅರ್ಜುನ್ ಮುಂಡಾ ಸೇರಿದಂತೆ ಅನೇಕರಿದ್ದರು. ರಾಜ್ಯದಿಂದ ಪ್ರಮುಖರಾದ ಡಾ. ಕೆ.ಎಮ್ ಮೇತ್ರಿ, ಪಂಡಿತರಾವ್ ಚಿದ್ರಿ, ರಾಮಗೊಂಡ, ರೋಹಿತಗೊಂಡ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Also read: ಸುಪ್ರಭಾತ ಅಭಿಯಾನ: ಶ್ರೀರಾಮ ಸೇನೆ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post