ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಜಿಲ್ಲಾಡಳಿತದಿಂದ ಹಾಗೂ ಜೆಡಿಎಸ್ ಜಿಲ್ಲಾ ಕಛೇರಿಯಲ್ಲಿ ಜೆಡಿಎಸ್ ಜಿಲ್ಲಾ ಘಟಕದಿಂದ ಇಂದು ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ರವರ 132ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಬಂಡೆಪ್ಪ ಖಾಶೆಂಪುರ್ Bandeppa Khashempur ಪಾಲ್ಗೊಂಡು ಮಾತನಾಡಿದರು.
ಬಳಿಕ ಬೀದರ್ ದಕ್ಷಿಣ ಕ್ಷೇತ್ರದ ಮಲ್ಕಾಪೂರ, ಬರಿದಾಬಾದ್, ಬೋರಾಳ, ಕಮಠಾಣಾ, ಗೌಸಪೂರ, ಯದಲಾಪೂರ, ಮೀರಜ್ ಕಾಲೋನಿ, ಸಿರ್ಸಿ ಎ, ಶಮಶೀರನಗರ, ನಿರ್ಣಾ, ಮಗದಳ್, ರೇಕುಳಗಿ, ಯದಲಾಪೂರ, ಮನ್ನಳ್ಳಿ, ಮನ್ನಾಎಖೇಳ್ಳಿ, ಖಾಶೆಂಪುರ್ ಸಿ, ಬೇಮಳಖೇಡ ಸೇರಿದಂತೆ ಸುಮಾರು 17ಕ್ಕೂ ಹೆಚ್ಚು ಗ್ರಾಮಗಳ ಮುಖಂಡರು, ಮಹಿಳೆಯರು, ಯುವಕರನ್ನು ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಬಳಿಕ ಆಣದೂರಿನಲ್ಲಿ ಹಮ್ಮಿಕೊಂಡಿದ್ದ ಇಪ್ತಾರ್ ಕೂಟದಲ್ಲಿ ಪಾಲ್ಗೊಂಡು, ಮುಖಂಡರಾದ ಶರತ್ ಪಸರಗಿರವರ ಮನೆಗೆ, ಚರ್ಚ್ ಗೆ ಭೇಟಿ ನೀಡಿದರು. ನಂತರ ಚೌಳಿ ಗ್ರಾಮದ ಹಜರತ್ ಸೈಯದ್ ಮೈಬು ಉಸ್ಮಾನಿ ದರ್ಗಾಕ್ಕೆ ಭೇಟಿ ನೀಡಿದರು. ಬಳಿಕ ಕಮಠಾಣಾ ಮತ್ತು ಮನ್ನಾಎಖೇಳ್ಳಿಯಲ್ಲಿ ನಡೆದ ಡಾ. ಬಿ.ಆರ್ ಅಂಬೇಡ್ಕರ್ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post