ಕಲ್ಪ ಮೀಡಿಯಾ ಹೌಸ್ | ಬೀದರ್ |
ರಾಜಕೀಯ ರಂಗದಲ್ಲಿ ಹೆಚ್ಚೆಚ್ಚು ಮಹಿಳೆಯರು ಬರಬೇಕು. ಮಹಿಳೆಯರಿಗೆ ವಿಶೇ? ಮೀಸಲಾತಿ ಕಲ್ಪಿಸಬೇಕೆಂಬ ಕನಸನ್ನು ದೇವೇಗೌಡರು ಕಂಡಿದ್ದರು. ಮಹಿಳಾ ಮೀಸಲಾತಿ ದೇವೇಗೌಡರ ಕನಸಿನ ಕೂಸು ಆಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ಅಭಿಪ್ರಾಯ ಪಟ್ಟಿದ್ದಾರೆ.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜಕೀಯ ರಂಗದಲ್ಲಿ ಮಹಿಳಾ ಮೀಸಲಾತಿ ತರಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ. ದೇವೇಗೌಡರ ಕನಸು ನನಸಾಗುವುದನ್ನು ಕಾಣುವುದಕ್ಕಾಗಿ ನಾನು ಕೂಡ ಕಾಯುತ್ತಿದ್ದೇನೆ. ಮಹಿಳಾ ಸಬಲೀಕರಣಕ್ಕೆ ಮೀಸಲಾತಿ ಅಗತ್ಯವಾಗಿದೆ ಎಂದರು.

ಹೆಚ್.ಡಿ ದೇವೇಗೌಡರು 1996 ಸೆಪ್ಟೆಂಬರ್ 12ರಂದು ತಾವು ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲೇ ಈ ಐತಿಹಾಸಿಕ ಮಸೂದೆಯನ್ನು ಜಾರಿಗೆ ತರಲು ಮುಂದಾಗಿ, ರಾಜಸಭೆಯಲ್ಲಿ ಮಸೂದೆ ಮಂಡಿಸಲಾಗಿತ್ತು. ಆದರೇ ಕೆಲವರ ವಿರೋಧದಿಂದ ಮಸೂದೆ ಅಂಗೀಕಾರವಾಗಿರಲಿಲ್ಲ ಎಂದರು.

ಗಣೇಶ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಕೆ
ಮಾಜಿ ಸಚಿವಬಂಡೆಪ್ಪ ಖಾಶೆಂಪುರ್ ರವರು ಗಣೇಶ ಚತುರ್ಥಿಯ ಅಂಗವಾಗಿ ಬುಧವಾರ ಗಣೇಶ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಮಠಾಣಾ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ವಿವಿಧೆಡೆ ಪ್ರತಿ?ಪನೆ ಮಾಡಲಾಗಿದ್ದ ಗಣೇಶ ದೇವರ ದರ್ಶನ ಪಡೆದು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿ, ವಿಶೇಷ ಪೂಜೆ ಸಲ್ಲಿಸಿದರು.
Also read: ಹಬ್ಬ, ಉತ್ಸವಗಳು ಶಾಂತಿ-ಸೌಹಾರ್ದತೆ ಬಿತ್ತಲಿ: ಮುಹಮ್ಮದ್ ತಾಹೀರ್ ಹುಸೇನ್ ಆಶಯ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post