ಕಲ್ಪ ಮೀಡಿಯಾ ಹೌಸ್ | ಬೀದರ್ |
ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ MLA Bandeppa Khashempur ಹೇಳಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೇಮಳಖೇಡಾ ಗ್ರಾಮ ಪಂಚಾಯತಿ ಕಛೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ಇರುವುದಿಲ್ಲ ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಮಾಹಿತಿ ನೀಡಬೇಕು ಎಂದರು.
ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಅಧ್ಯಕ್ಷರು ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಖಾತ್ರಿ ಕೆಲಸ ನೀಡಬೇಕು. ನರೇಗಾದಷ್ಟು ಒಳ್ಳೆಯ ಯೋಜನೆ ಇನ್ನೊಂದು ಇಲ್ಲ. ಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರಿಗೆ ಸಮಸ್ಯೆಯಾಗದಂತೆ ಕೆಲಸ ನೀಡಬೇಕು. ಜನರಿಗೆ ಶೇ. ನೂರರಷ್ಟು ಉದ್ಯೋಗ ಕೊಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಅಧಿಕಾರಿಗಳು ಮಾಡಬೇಕು.
ನರೇಗಾದಲ್ಲಿ ಕೆಲಸ ನೀಡಿದ್ದಲ್ಲಿ ಉಡಮನಳ್ಳಿಯ ಕೂಲಿ ಕಾರ್ಮಿಕರ ಸಾವು ತಡೆಯಬಹುದಿತ್ತು. ನರೇಗಾ ಕೆಲಸ ನೀಡದ ಕಾರಣ ಮಹಿಳಾ ಕೂಲಿ ಕಾರ್ಮಿಕರು ಹೊರ ರಾಜ್ಯದಲ್ಲಿ ಕೆಲಸಕ್ಕೆ ಹೋಗಿ ಸಾವನ್ನಪ್ಪಿದರು. ನರೇಗಾದಲ್ಲಿ ವೈಯಕ್ತಿಕ ಕೆಲಸದ ಜೊತೆ ಜೊತೆಗೆ ಸಾರ್ವಜನಿಕ ಕೆಲಸ ಕೂಡ ನೀಡಬೇಕು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
Also read: ಗಮನಿಸಿ! ಡಿ.7ರಂದು ಊರಗಡೂರು, ಮಳಲಿಕೊಪ್ಪ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ
ತೋಟಗಾರಿಕಾ ಇಲಾಖೆಯವರು ರೈತರಿಗೆ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು. ಬಡರೈತರಿಗೆ ಇಲಾಖೆಯ ಅಧಿಕಾರಿಗಳು ಸ್ಪಂದಿಸಬೇಕು. ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಬೇಕು. ಬೇಮಳಖೇಡಾದಲ್ಲಿ ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಸೇವೆ ಸಿಗುತ್ತಿಲ್ಲ. ಡ್ರೆöÊವರ್ ಸಮಸ್ಯೆಯಿದೆ. ಕೂಡಲೇ ಡ್ರೆöÊವರ್ ಒದಗಿಸಿಕೊಡಬೇಕು. ತುರ್ತು ಸಂದರ್ಭದಲ್ಲಿ ಸೇವೆ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಡಿಹೆಚ್ಒರವರೊಂದಿಗೆ ಮಾತನಾಡಿ ಕೂಡಲೇ ಸಮಸ್ಯೆಗೆ ಪರಿಹಾರ ಒದಗಿಸುವಂತೆ ತಿಳಿಸಿದರು.
ಕೃಷಿ ಇಲಾಖೆಯವರು ರೈತರ ಜಮೀನುಗಳ ಮಣ್ಣು ಪರೀಕ್ಷೆ ಮಾಡಿಸಬೇಕು. ಮಣ್ಣಿನ ಆರೋಗ್ಯ ಚೀಟಿ ಒದಗಿಸಿಕೊಡಬೇಕು. ಇಲಾಖೆಯ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಜನರಿಗೆ ಸರಿಯಾಗಿ ಸ್ಪಂದಿಸಬೇಕು. ಜೆಸ್ಕಾಂ ಇಲಾಖೆಯ ಬಗ್ಗೆ ಬಹಳಷ್ಟು ದೂರುಗಳು ಕೇಳಿ ಬರುತ್ತಿವೆ. ಕೂಡಲೇ ಜೆಸ್ಕಾಂನವರು ಕಾರ್ಯಪ್ರವೃತರಾಗಬೇಕು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಇದೇ ವೇಳೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ರಸ್ತೆ ಅಗಲೀಕರಣ ಕಾಮಗಾರಿ ನಡೆಯಬೇಕಿರುವ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಚಿಟಗುಪ್ಪಾ ತಹಶಿಲ್ದಾರ ರವೀಂದ್ರ ದಾಮಾ, ಚಿಟಗುಪ್ಪಾ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ರಮಪಾಷಾ, ಬೇಮಳಖೇಡ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುಶಾಂತ್ ಕುಮಾರ್, ಬೇಮಳಖೇಡ ಗ್ರಾಮ ಪಂಚಾಯತಿ ಅಧ್ಯಕ್ಷೆ ಜಗದೇವಿ ಅನಿಲ್ ಕುಮಾರ್ ಬಂಗೂರೆ, ಉಪಾಧ್ಯಕ್ಷ ವಿನೋದ ಕುಮಾರ್ ವೀರಪ್ಪ ಗುಮೇದ್, ಉಡಮನಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಂತೋಷ ಚೌಕಿ, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಪ್ರಭು ಸಾವಳಗಿ, ಪಂಚಾಯತ್ ರಾಜ್, ತೋಟಗಾರಿಕೆ, ಕೃಷಿ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post