ನವದೆಹಲಿ: 2016ರಲ್ಲಿ ನೋಟು ರದ್ದತಿ ಸಂದರ್ಭದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ನೋಟು ರದ್ದತಿ ವೇಳೆ ನವದೆಹಲಿಯ ಫ್ಲಾಟ್ ನಲ್ಲಿ 8.59 ಕೋಟಿ ಹಣ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಶುಕ್ರವಾರದಿಂದಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದರು. ಆದರೆ, ತನಿಖೆಗೆ ಸಹಕರಿಸದಿರುವ ಆರೋಪದ ಮೇರೆಗೆ ಸತತ 29 ಗಂಟೆಗಳ ಸುದೀರ್ಘ ವಿಚಾರಣೆಯ ಬಳಿಕಅವರನ್ನು ಬಂಧಿಸಲಾಗಿದ್ದು, ಇಂದು ರಾತ್ರಿ ಅಥವಾ ನಾಳೆ ಕೋರ್ಟ್ನಲ್ಲಿ ಹಾಜರುಪಡಿಸುವ ಸಾಧ್ಯತೆ ಇದೆ.
ಇನ್ನು, ಬಂಧನಕ್ಕೊಳಗಾಗಿರುವ ಡಿಕೆಶಿ ಅವರನ್ನು ನವದೆಹಲಿಯ ಆರ್’ಎಂಎಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದ್ದು, ಇಂದು ರಾತ್ರಿಯೊಳಗೆ ತಿಹಾರ್ ಜೈಲಿಗೆ ಅವರನ್ನು ರವಾನೆ ಮಾಡುವ ಸಾಧ್ಯತೆಗಳಿವೆ.
Discussion about this post