ಕಲ್ಪ ಮೀಡಿಯಾ ಹೌಸ್ | ವಾರಣಾಸಿ |
ಇಲ್ಲಿನ ಜ್ಞಾನವ್ಯಾಪಿ ಮಸೀದಿ #GyanvapiMosque ವಿಚಾರದಲ್ಲಿ ಹಿಂದೂಗಳಿಗೆ ಭರ್ಜರಿ ಮುನ್ನಡೆ ದೊರೆತಿದ್ದು, ಭಾರತೀಯ ಪುರಾತತ್ವ ಇಲಾಖೆಯಿಂದ #ASI ಮಸೀದಿಯ ಸರ್ವೆಗೆ ನ್ಯಾಯಾಲಯ ಆದೇಶಿಸಿದೆ.
ಈ ಕುರಿತಂತೆ ಮಹತ್ವದ ಅನುಮತಿ ನೀಡಿರುವ ನ್ಯಾಯಾಲಯ, ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್’ಐ) #ArchaeologicalSurveyOfIndia ಅನುಮತಿ ನೀಡಿದೆ.

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್’ಐ) ಇಡೀ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ನಿರ್ದೇಶನ ನೀಡುವಂತೆ ಕೋರಿ ಹಿಂದೂ ಕಡೆಯವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಜುಲೈ 14 ರಂದು ನ್ಯಾಯಾಲಯವು ಈ ವಿಷಯದ ಬಗ್ಗೆ ವಾದವನ್ನು ಪೂರ್ಣಗೊಳಿಸಿತು.

ಮೊಹರು ಮಾಡಲಾದ ವಾಜು ಟ್ಯಾಂಕ್ ಅನ್ನು ಹೊರತುಪಡಿಸಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್’ಐ ಸಮೀಕ್ಷೆಯನ್ನು ನಡೆಸಲು ನ್ಯಾಯಾಲಯವು ಸೂಚಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post